UP Elections: ಮೋದಿ ಭದ್ರತೆಯಲ್ಲಿ ಭಾರೀ ಲೋಪ, ಆದ್ರೂ ಸಿಎಂ ಫೋನೆತ್ತಲಿಲ್ಲ: ನಡ್ಡಾ ಆರೋಪ!

By Suvarna NewsFirst Published Jan 5, 2022, 4:17 PM IST
Highlights

* ಪಂಜಾಬ್‌ನಲ್ಲಿ ಮೋದಿ ಭದ್ರತೆಯಲ್ಲಿ ಲೋಪ

* ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ ಬಿಜೆಪಿ ಸಾರಥಿ ನಡ್ಡಾ

ಚಂಡೀಗಢ(ಜ.05): ಪಂಜಾಬ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆಯ ಲೋಪ ಪ್ರಕರಣದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಪ್ರಧಾನಿ ಮೋದಿಯವರ ಬೆಂಗಾವಲು ಪಡೆ ಅಷ್ಟು ದೊಡ್ಡ ಸಮಸ್ಯೆ ಎದುರಿಸಿದರೂ, ಸಿಎಂ ಚನ್ನಿ ಮಾತ್ರ ಫೋನ್‌ನಲ್ಲಿ ಮಾತನಾಡಿ ಸಮಸ್ಯೆ ಬಗೆಹರಿಸಲು ನಿರಾಕರಿಸಿದ್ದಾರೆಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಹೇಳಿದ್ದಾರೆ.

ಪಂಜಾಬ್‌ನಲ್ಲಿ ಮುಂಬರುವ ಚುನಾವಣೆಯಲ್ಲಿ ಮತದಾರರಿಂದ ಕೈಯಲ್ಲಿ ಹೀನಾಯ ಸೋಲನ್ನು ಎದುರಿಸುವ ಭಯದಿಂದ ಕಾಂಗ್ರೆಸ್ ಸರ್ಕಾರವು ಪ್ರಧಾನಿ ಕಾರ್ಯಕ್ರಮವನ್ನು ರದ್ದುಗೊಳಿಸಲು ಸಾಧ್ಯವಿರುವ ಎಲ್ಲ ತಂತ್ರಗಳನ್ನು ಪ್ರಯತ್ನಿಸಿತು. ಇದನ್ನು ಮಾಡುವಾಗ, ಪ್ರಧಾನಿ ಮೋದಿ ಅವರು ಭಗತ್ ಸಿಂಗ್ ಮತ್ತು ಇತರ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಬೇಕು ಮತ್ತು ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮಾಡಬೇಕು ಎಂದೂ ನೆನಪಿಟ್ಟುಕೊಂಡಿಲ್ಲ ಎಂದಿದ್ದಾರೆ.

ನಡ್ಡಾ ಅವರು, ಪಂಜಾಬ್‌ನ ಕಾಂಗ್ರೆಸ್ ಸರ್ಕಾರವು ಅಭಿವೃದ್ಧಿ ವಿರೋಧಿಗಳು ಮತ್ತು ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಗೌರವವಿಲ್ಲ ಎಂದು ತಮ್ಮ ಕೊಳಕು ವರ್ತನೆ ಮೂಲಕ ತೋರಿಸಿದೆ ಎಂದು ಸಾಬೀತುಪಡಿಸಿದ್ದಾರೆ ಎಂದಿದ್ದಾರೆ.

ಪ್ರಧಾನಿ ಮೋದಿ ಭದ್ರತೆಯಲ್ಲಿ ಇದು ದೊಡ್ಡ ಲೋಪ: ನಡ್ಡಾ

ಬಿಜೆಪಿ ಅಧ್ಯಕ್ಷರು, ಅತ್ಯಂತ ಆತಂಕಕಾರಿ ವಿಷಯವೆಂದರೆ ಈ ಘಟನೆಯು ಪ್ರಧಾನಿ ಮೋದಿಯವರ ಭದ್ರತೆಯಲ್ಲಿ ದೊಡ್ಡ ಲೋಪವಾಗಿದೆ. ಪಂಜಾಬ್‌ನ ಪ್ರಧಾನ ಕಾರ್ಯದರ್ಶಿ ಮತ್ತು ಡಿಜಿಪಿಗೆ ಎಸ್‌ಪಿಜಿಗೆ ಪ್ರಧಾನಿ ಮೋದಿ ಪ್ರಯಾಣಿಸುವ ಮಾರ್ಗ ಸ್ಪಷ್ಟವಾಗಿ ತಿಳಿದಿತ್ತು. ಇದರ ಹೊರತಾಗಿಯೂ ಪ್ರತಿಭಟನಾಕಾರರಿಗೆ ಅಲ್ಲಿಗೆ ಹೋಗಲು ಅವಕಾಶ ನೀಡಲಾಯಿತು. ಇನ್ನು ಕೆಟ್ಟ ಸಂಗತಿ ಎಂದರೆ ಸಿಎಂ ಚನ್ನಿ ದೂರವಾಣಿಯಲ್ಲಿ ಮಾತನಾಡಿ ಸಮಸ್ಯೆ ಬಗೆಹರಿಸಲು ನಿರಾಕರಿಸಿದ್ದಾರೆ. ಪಂಜಾಬ್‌ನ ಕಾಂಗ್ರೆಸ್ ಸರ್ಕಾರದ ಈ ತಂತ್ರವು ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿರುವ ಯಾರಿಗಾದರೂ ನೋವುಂಟು ಮಾಡುತ್ತದೆ ಎಂದಿದ್ದಾರೆ.

ಪೊಲೀಸರ ವಿರುದ್ಧವೂ ನಡ್ಡಾ ಗರಂ
 
ನಡ್ಡಾ ಅವರು, ರ್ಯಾಲಿಗೆ ಜನರನ್ನು ತಡೆಯಲು ರಾಜ್ಯ ಪೊಲೀಸರಿಗೆ ಸೂಚಿಸಲಾಗಿದೆ. ಪೊಲೀಸರ ಅವ್ಯವಹಾರ ಹಾಗೂ ಪ್ರತಿಭಟನಾಕಾರರ ಕೈವಾಡದಿಂದ ಸಮಾವೇಶಕ್ಕೆ ಬರುತ್ತಿದ್ದ ಹೆಚ್ಚಿನ ಸಂಖ್ಯೆಯ ಬಸ್ ಗಳು ಕೂಡ ಸಿಕ್ಕಿಹಾಕಿಕೊಂಡವು ಎಂದಿದ್ದಾರೆ.

click me!