
ನವದೆಹಲಿ[ಜ.05]: ಕೇಂದ್ರ ಸಚಿವಾಲಯಗಳ ಕಾರ್ಯದಕ್ಷತೆಯನ್ನು ಮೇಲ್ದರ್ಜೆಗೇರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳ ಕಾರ್ಯವೈಖರಿಯನ್ನು ಪರಾಮರ್ಶೆಗೆ ಒಳಪಡಿಸಿದರು. ಈ ಮೂಲಕ ಮುಂದಿನ 5 ವರ್ಷಗಳ ಅಧಿಕಾರಾವಧಿಯಲ್ಲಿ ಏನೆಲ್ಲಾ ಕಾರ್ಯ ಯೋಜನೆ ಕೈಗೊಳ್ಳಬೇಕೆಂಬ ಕುರಿತಾಗಿ ಅರಿಯುವ ಸಲುವಾಗಿ ಡಿಸೆಂಬರ್ 21ರಿಂದ ಇದುವರೆಗೂ ಪ್ರಧಾನಿ ನರೇಂದ್ರ ಮೋದಿ ಅವರು 3 ಬಾರಿ ಸಚಿವರ ಕಾರ್ಯವೈಖರಿ ಸಭೆ ನಡೆಸಿದಂತಾಗಿದೆ.
ಶನಿವಾರ ನಡೆದ ಸಚಿವಾಲಯಗಳ ಕಾರ್ಯವೈಖರಿ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆಡಳಿತ, ತಂತ್ರಜ್ಞಾನ ಹಾಗೂ ಸಂಪನ್ಮೂಲಗಳ ವಲಯಗಳ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದುವರೆಗೂ ನಡೆದ ಸಭೆಗಳಲ್ಲಿ ಸಚಿವಾಲಯಗಳ ಹಲವು ಸಮಿತಿಗಳು ನೀಡಿದ ಸಲಹೆ-ಸೂಚನೆಗಳನ್ನು ಪರಿಗಣಿಸಿ, ವಿವಿಧ ಇಲಾಖೆಗಳ ಮುಂದಿನ 5 ವರ್ಷಗಳ ಕಾರ್ಯಯೋಜನೆಯನ್ನು ಕೇಂದ್ರ ಸರ್ಕಾರ ಅಂತಿಮಗೊಳಿಸಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಸರ್ಕಾರದ ಯೋಜನೆಗಳ ಉತ್ತಮ ಅನುಷ್ಠಾನಕ್ಕಾಗಿ ಈಗಾಗಲೇ ಸಚಿವಾಲಯಗಳನ್ನು ಕೃಷಿ, ಆರೋಗ್ಯ, ಆಡಳಿತ ಮತ್ತು ತಂತ್ರಜ್ಞಾನ ಎಂಬ ವಿಭಾಗಗಳನ್ನಾಗಿ ವಿಭಜಿಸಲಾಗಿದ್ದು, ಸರ್ಕಾರದ ಯೋಜನೆಗಳ ವ್ಯವಸ್ಥಿತ ಅನುಷ್ಠಾನ ಹಾಗೂ ಅಭಿವೃದ್ಧಿಗೆ ಕಾರ್ಯಯೋಜನೆ ಸಹಾಯಕವಾಗಲಿದೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ