ಸಂಪುಟ ವಿಸ್ತರಣೆಗೆ ಶುಭ ಮುಹೂರ್ತ ಫಿಕ್ಸ್; ನಾಳೆ ಸಂಜೆ 6 ಗಂಟೆಗೆ ಅತ್ಯಂತ ಕಿರಿಯರ ಕ್ಯಾಬಿನೆಟ್ ಪ್ರಕಟ!

Published : Jul 06, 2021, 08:41 PM ISTUpdated : Jul 06, 2021, 09:03 PM IST
ಸಂಪುಟ ವಿಸ್ತರಣೆಗೆ ಶುಭ ಮುಹೂರ್ತ ಫಿಕ್ಸ್; ನಾಳೆ ಸಂಜೆ 6 ಗಂಟೆಗೆ ಅತ್ಯಂತ ಕಿರಿಯರ ಕ್ಯಾಬಿನೆಟ್ ಪ್ರಕಟ!

ಸಾರಾಂಶ

ದೇಶದಲ್ಲೇ ಮೊದಲ ಬಾರಿಗೆ ಅತ್ಯಂತ ಕಿರಿಯರ ಸಂಪುಟ ಹೆಗ್ಗಳಿಕೆ ಸಂಪುಟ ವಿಸ್ತರಣೆ, ಪುನರ್ ರಚನಗೆ ಮುಹೂರ್ತ ಫಿಕ್ಸ್ ನಾಳೆ ಸಂಜೆ 6 ಗಂಟೆಗೆ ಮೋದಿ ಸಂಪುಟ ವಿಸ್ತರಣೆ

ನವದೆಹಲಿ(ಜು.06): ದೇಶದ ರಾಜಕೀಯ ಇತಿಹಾಸದಲ್ಲಿ ಮೊದಲ ಬಾರಿಗೆ ಅತ್ಯಂತ ಕಿರಿಯರನ್ನೊಳಗೊಂಡ ಸಂಪುಟ ವಿಸ್ತರಣೆಗೆ ಪ್ರಧಾನಿ ನರೇಂದ್ರ ಮೋದಿ ಸಜ್ಜಾಗಿದ್ದಾರೆ. ನಾಳೆ(ಜು07) ಸಂಜೆ 6 ಗಂಟೆಗೆ ಮೋದಿ ಸಂಪುಟ ವಿಸ್ತರಣೆಯಾಗಲಿದೆ. ಈಗಾಗಲೇ ಜ್ಯೋತಿರಾಧಿತ್ಯ ಸಿಂಧಿಯಾ ಸೇರಿದಂತೆ ಪ್ರಮುಖರು ದೆಹಲಿ ಸೇರಿಕೊಂಡಿದ್ದಾರೆ.

ಮತ್ತೋರ್ವ ಕರ್ನಾಟಕ ಸಂಸದರೊಬ್ಬರಿಗೆ ದಿಲ್ಲಿಗೆ ಬರುವಂತೆ ಕರೆ: ಸಚಿವ ಸ್ಥಾನ ದಕ್ಕುವ ನಿರೀಕ್ಷೆ

ಬಿಜೆಪಿ ನೇತೃತ್ವದ 2ನೇ ಅವಧಿಯ ಸರ್ಕಾರದ ಮೊದಲ ಸಂಪುಟ ವಿಸ್ತರಣೆ ಇದಾಗಿದೆ. ಮೋದಿ ಸಂಪುಟ ಸೇರಿಕೊಳ್ಳುತ್ತಿರುವ ಬಹುತೇಕರು ಕಿರಿಯ ವಯಸ್ಸಿನವರು ಅನ್ನೋದು ವಿಶೇಷ. ಯುವ ಸಮೂಹಕ್ಕೆ ಮಣೆ ಹಾಕಿರುವ ಕೇಂದ್ರ ಬಿಜೆಪಿ, ಮಹಿಳಾ ಮಂತ್ರಿಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿದೆ ಎಂದು ಮೂಲಗಳು ಹೇಳಿವೆ.

ಒಬಿಸಿ ಸೇರಿದಂತೆ ಹಿಂದುಳಿತ ವರ್ಗಗಳ ನಾಯಕರಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಈ ಮೂಲಕ ಸಣ್ಣ ಸಮುದಾಯಕ್ಕೆ ನ್ಯಾಯ ಒದಗಿಸುವ ಯತ್ನಕ್ಕೆ ಕೇಂದ್ರ ಬಿಜೆಪಿ ಕೈಹಾಕಿದೆ. ಇನ್ನ ಮೋದಿ ಸಂಪುಟ ಸೇರಿಕೊಳ್ಳುತ್ತಿರುವ ಯುವ ನಾಯಕರ ಪೈಕಿ ಬಹುತೇಕರು PhDs, MBAs, ಉನ್ನತ ವ್ಯಾಸಾಂಗ ಮಾಡಿದವರೇ ಇದ್ದಾರೆ ಎಂದು ಬಿಜೆಪಿ ಮೂಲಗಳು ಹೇಳಿವೆ.

ಚಿರಾಗ್‌ಗೆ ಚಿಕ್ಕಪ್ಪನಿಂದ ಟೆನ್ಶನ್: ಮೋದಿ ಸಂಪುಟ ಸೇರಲು ಸಜ್ಜಾದ ಪಶುಪತಿ, ಹೊಸ ಕುರ್ತಾ ರೆಡಿ!..

2024ರ ಲೋಕಸಭಾ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡ ಸಂಪುಟ ವಿಸ್ತರಣೆ ಮಾಡಲಾಗಿದೆ. ಪ್ರಮುಖ ನಾಯಕರಾದ ಜ್ಯೋತಿರಾದಿತ್ಯ ಸಿಂಧಿಯಾ, ಸರ್ಬಾನಂದ ಸೋನೋವಾಲ್, ಲೋಕ ಜನಶಕ್ತಿ ಪಕ್ಷದ ಪಶುಪತಿ ಪರಾಸ್, ನಾರಾಯಣ ರಾಣೆ, ವರುಣ್ ಗಾಂಧಿ ಈಗಾಗಲೇ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ.

ಚಿತ್ರದುರ್ಗದ ಸಂಸದ ಎ ನಾರಾಯಣಸ್ವಾಮಿ ಕುಟುಂಬ ಸಮೇತ ದೆಹಲಿಗೆ ಹಾರಿದ್ದಾರೆ. ಇನ್ನು ವಿಜಯಪುರ ಸಂಸದ ರಮೇಶ್ ಜಿಗಜಿಣಗಿಗೆ ಬುಲಾವ್ ಬಂದಿದ್ದು, ದೆಹಲಿ ತೆರಳುವ ಸಾಧ್ಯತೆ ಇದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಂಕೆ ಬಿಹಾರಿ ದೇಗುಲದಲ್ಲಿ ಶಾಲಿನ ಮೇಲೆ ಬಿತ್ತು ಚಿನ್ನದ ಉಂಗುರ: ಶ್ರೀಕೃಷ್ಣನ ಪ್ರತಿಮೆಯನ್ನೇ ಮದುವೆಯಾದ ಪಿಂಕಿ
'ವಂದೇ ಮಾತರಂ..' ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಶಕ್ತಿ ತುಂಬಿದ ಮಂತ್ರ ಎಂದ ಪ್ರಧಾನಿ ಮೋದಿ