
ನವದೆಹಲಿ (ಸೆ.07) ಪ್ರಧಾನಿ, ಸಚಿವರು, ಸಂಸದರು, ಶಾಸಕರು ಯಾರೇ ಆದರೂ ಬಿಜೆಪಿ ಪಕ್ಷದೊಳಗೆ ಎಲ್ಲರೂ ಕಾರ್ಯಕರ್ತರು ಅನ್ನೋ ವಾತಾವರಣವಿದೆ. ಪಕ್ಷದ ಕಾರ್ಯಕ್ರಮದಲ್ಲಿ ಪಕ್ಷದ ಅಧ್ಯಕ್ಷರು, ಪಧಾದಿಕಾರಿಗಳೇ ಪ್ರಮುಖ. ದೇಶಕ್ಕೆ ಪ್ರಧಾನಿಯಾದರೂ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತ. ಇದೀಗ ಬಿಜೆಪಿ ಸಂಸದ, ನಟ ರವಿ ಕಿಶನ್ ಪ್ರಧಾನಿ ಮೋದಿಯ ಫೋಟೋ ಒಂದು ಹಂಚಿಕೊಂಡಿದ್ದಾರೆ. ಉಪ ರಾಷ್ಟ್ರಪತಿ ಚುನಾವಣೆ ಕುರಿತು ಬಿಜೆಪಿ ಆಯೋಜಿಸಿದ ಸಭೆಯಲ್ಲಿ ಬಿಜೆಪಿ ಸಂಸದರು, ಸಚಿವರು ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು. ಪ್ರಧಾನಿ ಮೋದಿ ಕೂಡ ಈ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಈ ಸಭೆಯಲ್ಲಿ ಮೋದಿ ಸಭೆಯ ಕೊನೆಯ ಸಾಲಿನ ಆಸನದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋವನ್ನು ರವಿ ಕಿಶನ್ ಹಂಚಿಕೊಂಡು, ಈ ಪಕ್ಷದಲ್ಲಿ ಎಲ್ಲರೂ ಕಾರ್ಯಕರ್ತರೇ. ಇದು ಬಿಜೆಪಿ ಪಕ್ಷದ ಶಕ್ತಿ ಎಂದಿದ್ದಾರೆ.
ಉಪ ರಾಷ್ಟ್ರಪತಿ ಚುನಾವಣೆ ಕುರಿತು ಎನ್ಡಿಎ ಸಂಸದರ ವರ್ಕ್ಶಾಪ್ ಆಯೋಜಿಸಿತ್ತು. ಇದು ಬಿಜೆಪಿ ಪಕ್ಷದ ಮಹತ್ವದ ಕಾರ್ಯಾಗಾರವಾಗಿದೆ.. ಈ ಸಭೆಗೆ ಬಿಜೆಪಿ ನಾಯಕರು, ಸಂಸದರು ಪಾಲ್ಗೊಂಡಿದ್ದಾರೆ. ಎರಡು ದಿನದ ಕಾರ್ಯಾಗಾರದಲ್ಲಿ ಹಲವು ವಿಚಾರಗಳ ಮಂಡನೆಯಾಗಲಿದೆ, ಚರ್ಚೆಯಾಗಲಿದೆ. ಈ ಮೂಲಕ ಸಂಸತ್ತಿನ ಹಿರಿಮೆ, ಗರಿಮೆ, ಪರಿಣಾಮಕಾರಿಯಾಗಿ ಸಂಸತ್ತು ಮುನ್ನಡೆಸುವುದು ಸೇರಿದಂತೆ ಹಲವು ವಿಚಾರಗಳ ಮಂಡನೆಯಾಗಲಿದೆ. ಈ ಕಾರ್ಯಾಗರದಲ್ಲಿ ಮೋದಿ ಕೊನೆಯ ಸಾಲಿನಲ್ಲಿ ಕುಳಿತಿರುವ ಫೋಟೋ ಇದೀಗ ಭಾರಿ ವೈರಲ್ ಆಗುತ್ತಿದೆ.
ಎನ್ಡಿಎ ಸಂಸದರ ಎರಡು ದಿನದ ಕಾರ್ಯಾಗಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಕೊನೆಯ ಸಾಲಿನಲ್ಲಿ ಕುಳಿತು ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಎನ್ಡಿಎ ಸಂಸದರು ಬಿಜೆಪಿಯ ಶಕ್ತಿ. ಇಲ್ಲಿ ಪ್ರತಿಯೊಬ್ಬ ಕಾರ್ಯಕರ್ತ ಒಂದು ಶಕ್ತಿ ಎಂದು ರವಿ ಕಿಶನ್ ಫೋಟೋ ಹಂಚಿಕೊಂಡಿದ್ದಾರೆ.
ದಿಢೀರ್ ಭಾರತದ ಕುರಿತು ಮೆತ್ತಗಾದ ಡೊನಾಲ್ಡ್ ಟ್ರಂಪ್!
ಜಗದೀಪ್ ಧನ್ಕರ್ ರಾಜೀನಾಮೆಯಿಂದ ತೆರವಾದ ಉಪ ರಾಷ್ಟ್ರಪತಿ ಸ್ಥಾನಕ್ಕೆ ಸೆಪ್ಟೆಂಬರ್ 9 ರಂದು ಚುನಾವಣೆ ನಡೆಯಲಿದೆ. ಎನ್ಡಿಎ ಅಭ್ಯರ್ಥಿಯಾಗಿ ಮಹಾರಾಷ್ಟ್ರದ ರಾಜ್ಯಪಾಲರಾಗಿದ್ದ ಸಿಪಿ ರಾಧಾಕೃಷ್ಣನ್ ಕಣದಲ್ಲಿದ್ದರೆ, ಇಂಡಿಯಾ ಒಕ್ಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ ಸುದರ್ಶನ ರೆಡ್ಡಿ ಕಣದಲ್ಲಿದ್ದಾರೆ. ಮತಗಳು, ಬಲಾಬಲ ನೋಡಿದರೆ ಸಿಪಿ ರಾಧಕೃಷ್ಣನ್ ಗೆಲುವಿನ ಫೇವರಿಟ್ ಅಭ್ಯರ್ಥಿಯಾಗಿದ್ದಾರೆ.
ಈ ಕಾರ್ಯಾಗಾರದಲ್ಲಿ ಇತ್ತೀಚೆಗೆ ಕೇಂದ್ರ ಸರ್ಕಾರ ಘೋಷಿಸಿದ ಜಿಎಸ್ಟಿ ತೆರಿಗೆ ಕಡಿತ ಕುರಿತು ಚರ್ಚಿಸಲಾಗಿದೆ. ಕೇಂದ್ರದ ಈ ನಿರ್ಧಾರವನ್ನು ಎನ್ಡಿಎಂ ಸಂಸದರ ಕಾರ್ಯಾಗಾರ ಸಮ್ಮತಿ ವ್ಯಕ್ತಪಡಿಸಿದೆ.
ಅಧಿವೇಶನ, ಪ್ರಚಾರದ ವೇಳೆ ಪ್ರವಾಸ, ರಾಹುಲ್ ಗಾಂಧಿ ಮಲೇಷಿಯಾ ಟ್ರಿಪ್ ಗೇಲಿ ಮಾಡಿದ ಬಿಜೆಪಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ