
ಕಣ್ಣು ಮಿಟುಕಿಸುವಷ್ಟರಲ್ಲಿ ಪಾಕ್ ಸೇನೆ ಮಂಡಿ ಊರುವಂತಾಗಿತ್ತು
ಧಾರ್(ಮ.ಪ್ರ.): ಇಂದು ಜೈಷ್ ಉಗ್ರರೇ ಪಾಕಿಸ್ತಾನದ ಅಸಲಿ ಬಣ್ಣವನ್ನು ಬಯಲಿಗೆಳೆದಿದ್ದಾರೆ. ಭಾರತ ನಡೆಸಿದ ದಾಳಿಯಲ್ಲಿ ಪಾಕ್ನಲ್ಲಿರುವ ಉಗ್ರ ನೆಲೆಗಳೆಲ್ಲ ನಾಶವಾಗಿ, ಕಣ್ಣು ಮಿಟುಕಿಸುವಷ್ಟರಲ್ಲಿ ಪಾಕ್ ಸೇನೆ ಮಂಡಿ ಊರುವಂತಾಗಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ, ಜೈಷ್-ಎ-ಮೊಹಮ್ಮದ್ ನಾಯಕ ನೀಡಿದ್ದ ಹೇಳಿಕೆಯನ್ನು ಉಲ್ಲೇಖಿಸಿ ಶತ್ರುರಾಷ್ಟ್ರದ ಕಾಲೆಳೆದಿದ್ದಾರೆ.
ಮಿತ್ರ ಪಾರ್ಕ್ನ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ:
ಇಲ್ಲಿ ಪ್ರಧಾನಮಂತ್ರಿ ಮಿತ್ರ ಪಾರ್ಕ್ನ ಶಂಕುಸ್ಥಾಪನೆ ನೆರವೇರಿಸಿ ಮೋದಿ ಮಾತನಾಡುತ್ತಿದ್ದರು. ನಿನ್ನೆಯಷ್ಟೇ ಪಾಕ್ನ ಉಗ್ರರು ತಮ್ಮ ದುಃಸ್ಥಿತಿಯನ್ನು ಸ್ಮರಿಸಿ ಮರುಗುತ್ತಿದ್ದುದನ್ನು ಇಡೀ ವಿಶ್ವವೇ ನೋಡಿದೆ. ಉಗ್ರರು ನನ್ನ ಸಹೋದರಿಯರು ಮತ್ತು ತಾಯಂದಿರ ಸಿಂದೂರ ಅಳಿಸಿದ್ದಕ್ಕೆ ಪ್ರತೀಕಾರವಾಗಿ ನಮ್ಮ ಯೋಧರು ಆಪರೇಷನ್ ಸಿಂದೂರ ನಡೆಸಿ, ಪಾಕ್ ಸೇನೆ ಕ್ಷಣಮಾತ್ರದಲ್ಲಿ ಮಂಡಿಯೂರುವಂತೆ ಮಾಡಿದರು ಎಂದರು.
ಭಾರತದ ದಾಳಿಯಿಂದ ಆ ಧ್ವಂಸವನ್ನು ಅವರೇ ಒಪ್ಪಿಕೊಂಡಿದ್ದಾರೆ:
ಬಹಾವಲ್ಪುರದಲ್ಲಿ ನಡೆದ ದಾಳಿಯಲ್ಲಿ ಮಸೂದ್ ಅಜರ್ನ ಪರಿವಾರ ಛಿದ್ರವಾಗಿತ್ತು ಎಂದು ಮಂಗಳವಾರವಷ್ಟೇ ಜೈಷ್ ಸಂಘಟನೆಯ ಉಗ್ರನೊಬ್ಬ ಬಹಿರಂಗವಾಗಿ ಒಪ್ಪಿಕೊಂಡಿದ್ದ. ಇದನ್ನು ನೆನಪಿಸಿದ ಮೋದಿ, ಭಾರತದ ದಾಳಿಯಿಂದ ಪಾಕಿಸ್ತಾನದಲ್ಲಿರುವ ಉಗ್ರ ನೆಲೆಗಳು ಧ್ವಂಸವಾಗಿದ್ದವು ಎಂದು ಈಗ ಅವರೇ ಸ್ವತಃ ಒಪ್ಪಿಕೊಂಡಿದ್ದಾರೆ. ಜತೆಗೆ, ಬಹಾವಲ್ಪುರದಲ್ಲಿ ಜೈಷ್ ಸಂಘಟನೆಯ ಪ್ರಧಾನ ಕಚೇರಿ ಇದೆ ಎಂಬುದು ಸಾಬೀತಾಗಿದೆ ಎಂದರು.
ಭಾರತ ಅಣುದಾಳಿಗೆ ಬೆದರಲ್ಲ:
ಆಪರೇಷನ್ ಸಿಂದೂರದಿಂದ, ಉಗ್ರ ದಾಳಿಗೆ ಭಾರತ ತಕ್ಕ ಉತ್ತರ ನೀಡುತ್ತದೆ ಎಂಬುದರ ಜತೆಗೆ, ನವಭಾರತ ಅಣುದಾಳಿ ಬೆದರಿಕೆಗೂ ಬಗ್ಗುವುದಿಲ್ಲ ಎಂಬುದು ಸಾಬೀತಾಗಿದೆ. ನಾವು ಉಗ್ರರ ಮನೆಗೇ ನುಗ್ಗಿ ಹೊಡೆಯುತ್ತೇವೆ ಎಂದು ಪ್ರಧಾನಿ ಹೇಳಿದರು.
ಇದನ್ನೂ ಓದಿ: ಛತ್ತೀಸ್ಗಢದಲ್ಲಿ ಕೇಂದ್ರದ ಕಠಿಣ ಕಾರ್ಯಾಚರಣೆಯಿಂದ ಕಂಗಾಲಾದ ನಕ್ಸಲರು:ಶಾಂತಿ ಮಾತುಕತೆಗೆ ಸರ್ಕಾರಕ್ಕೆ ಮನವಿ
ಇದನ್ನೂ ಓದಿ: ದಿಶಾ ಪಟಾನಿ ಮನೆ ಮೇಲೆ ಗುಂಡಿನ ದಾಳಿ: ಇಬ್ಬರು ಆರೋಪಿಗಳು ಎನ್ಕೌಂಟರ್ಗೆ ಬಲಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ