ಹುಟ್ಟು ಹಬ್ಬಕ್ಕೆ ಶುಭಕೋರಿದ, ಲಸಿಕೆ ಅಭಿಯಾನ ಯಶಸ್ವಿಗೊಳಿಸಿದವರಿಗೆ ಪ್ರಧಾನಿ ಮೋದಿ ಧನ್ಯವಾದ!

Published : Sep 17, 2021, 10:53 PM ISTUpdated : Sep 17, 2021, 11:00 PM IST
ಹುಟ್ಟು ಹಬ್ಬಕ್ಕೆ ಶುಭಕೋರಿದ, ಲಸಿಕೆ ಅಭಿಯಾನ ಯಶಸ್ವಿಗೊಳಿಸಿದವರಿಗೆ ಪ್ರಧಾನಿ ಮೋದಿ ಧನ್ಯವಾದ!

ಸಾರಾಂಶ

ಹುಟ್ಟು ಹಬ್ಬಕ್ಕೆ ಶುಭಕೋರಿದವರಿಗೆ ಪ್ರಧಾನಿ ಮೋದಿ ಧನ್ಯವಾದ 71ನೇ ಹುಟ್ಟು ಹಬ್ಬ ಆಚರಿಸಿದ ನರೇಂದ್ರ ಮೋದಿ ಸರಣಿ ಟ್ವೀಟ್ ಮೂಲಕ ಧನ್ಯವಾದ ಹೇಳಿದ ಮೋದಿ  

ನವದೆಹಲಿ(ಸೆ.17): ಪ್ರಧಾನಿ ನರೇಂದ್ರ ಮೋದಿ ಇಂದು 71ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ದೇಶದಲ್ಲಿಂದು ಮೋದಿ ಹುಟ್ಟುಹಬ್ಬದ ಸಡಗರ ಮನೆ ಮಾಡಿತ್ತು. ರಾಜಕೀಯ ಗಣ್ಯರು, ಕ್ರೀಡಾಪಟುಗಳು, ಸೆಲೆಬ್ರೆಟಿಗಳು ಸೇರಿದಂತೆ ದೇಶದ ನಾಗರೀಕರು ಪ್ರಧಾನಿ ಮೋದಿಗೆ ಶುಭಕೋರಿದ್ದಾರೆ. ಇದೇ ವೇಳೆ ಮೆಘಾ ಲಸಿಕಾ ಅಭಿಯಾನವನ್ನು ನಡೆಸಲಾಗಿತ್ತು. ಇದೀಗ ಮೋದಿ ಹುಟ್ಟು ಹಬ್ಬಕ್ಕೆ ಶುಭಕೋರಿದ ಮಂದಿಗೆ ಧನ್ಯವಾದ ಹೇಳಿದ್ದಾರೆ.

ಮೆಘಾ ವ್ಯಾಕ್ಸಿನೇಶನ್‌: ಒಂದೇ ದಿನ 2 ಕೋಟಿ ಲಸಿಕೆ ಡೋಸ್ ಮೂಲಕ ಯೂರೋಪ್ ಹಿಂದಿಕ್ಕಿದ ಭಾರತ!

ಎಲ್ಲರ ಶುಭಾಶಯನ್ನು ನೋಡಿ ನನ್ನ ಸಂತಸ ವಿವರಿಸಲು ಪದಗಳು ಸಾಲುತ್ತಿಲ್ಲ. ನನ್ನನ್ನು ಹಾರೈಸಿದ, ಶುಭಕೋರಿದ ಪ್ರತಿಯೊಬ್ಬ ವ್ಯಕ್ತಿಗೂ ನನ್ನ ಹೃದಯಾಳದಿಂದ ಕೃತಜ್ಞತೆ ಸಲ್ಲಿಸಲು ಬಯಸುತ್ತಿದ್ದೇನೆ. ನಿಮ್ಮ ಶುಭಾಶ, ಪ್ರೀತಿ ರಾಷ್ಟ್ರಕ್ಕಾಗಿ ಶ್ರಮಿಸಲು ನನಗೆ ಮತ್ತಷ್ಟು ಪ್ರೇರಣೆ, ಶಕ್ತಿ ನೀಡಿದೆ ಎಂದು ಟ್ವೀಟ್ ಮಾಡಿದ್ದಾರೆ.

 

ಮೋದಿ ಹುಟ್ಟುಹಬ್ಬದ ಕಾರಣ ಇಂದು ಕೇಂದ್ರ ಆರೋಗ್ಯ ಇಲಾಖೆ ಮೆಘಾ ವ್ಯಾಕ್ಸಿನೇಶ್ ಡ್ರೈವ್‌ಗೆ ಚಾಲನೆ ನೀಡಲಾಗಿತ್ತು. ಈ ಮೂಲಕ ಒಂದೇ ದಿನ ಬರೋಬ್ಬರಿ 2 ಕೋಟಿ ಡೋಸ್ ನೀಡುವ ಮೂಲಕ ದಾಖಲೆ ಬರೆದಿದೆ. ಈ ಸಾಧನೆಗೆ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 

ಇಂದು ಲಸಿಕೆ ಡೋಸ್‌ಗಳ ಸಂಖ್ಯೆ ಪ್ರತಿಯೊಬ್ಬ ಭಾರತೀಯನಿಗೆ ಹೆಮ್ಮೆ ತಂದಿದೆ. ಲಸಿಕೆ ಅಭಿಯಾನ ಯಶಸ್ವಿಯಾಗಿ ಶ್ರಮಿಸಿದ ವೈದ್ಯರು, ಆರೋಗ್ಯ ಕಾರ್ಯಕರ್ತರು, ಆಡಳಿತಗಾರರು, ದಾದಿಯರು ಹಾಗೂ ಎಲ್ಲಾ ಫ್ರಂಟ್‌ಲೈನ್ ವರ್ಕಸ್ ಅಭಿನಂದನೆ, ಕೋವಿಡ್ ವಿರುದ್ಧ ಹೋರಾಡಲು ನಾವು ಲಸಿಕೆ ಮುಂದುವರಿಸೋಣ ಎಂದು ಟ್ವೀಟ್ ಮಾಡಿದ್ದಾರೆ.

 

ಇದೇ ವೇಳೆ ಮಾಧ್ಯಮಕ್ಕೂ ಮೋದಿ ಧನ್ಯವಾದ ಹೇಳಿದ್ದಾರೆ. ಹುಟ್ಟು ಹಬ್ಬದ ಪ್ರಯುಕ್ತ ಹಳೆ ನೆನಪುಗಳನ್ನು ಕಟ್ಟಿಕೊಟ್ಟ, ರಾಜಕೀಯ ಜೀವನವನ್ನು ಮೆಲುಕ ಹಾಕಿದ ಮಾಧ್ಯಮಕ್ಕೂ ಮೋದಿ ಧನ್ಯವಾದ ಹೇಳಿದ್ದಾರೆ.

 

ಶ್ರೀಲಂಕ, ನೇಪಾಳ ಸೇರಿದಂತೆ ಹುಟ್ಟು ಹಬ್ಬಕ್ಕೆ ಶುಭಕೋರಿದ ವಿಶ್ವದ ನಾಯಕರಿಗೆ ಮೋದಿ ಧನ್ಯವಾದ ಹೇಳಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?