ಕೊರೋನಾ ಲಸಿಕೆ ವಿತರಣೆ; ಜ.11ಕ್ಕೆ BSY ಸೇರಿ ಎಲ್ಲಾ ರಾಜ್ಯ ಸಿಎಂ ಜೊತೆ ಮೋದಿ ಸಭೆ!

Published : Jan 08, 2021, 08:40 PM IST
ಕೊರೋನಾ ಲಸಿಕೆ ವಿತರಣೆ; ಜ.11ಕ್ಕೆ BSY ಸೇರಿ ಎಲ್ಲಾ ರಾಜ್ಯ ಸಿಎಂ ಜೊತೆ ಮೋದಿ ಸಭೆ!

ಸಾರಾಂಶ

ಕೊರೋನಾ ಲಸಿಕೆ ವಿತರಣೆಯಲ್ಲಿ ಭಾರತದ ಮಹತ್ವದ ಮೈಲಿಗಲ್ಲು ಸ್ಥಾಪಿಸಿದೆ. ಲಸಿಕೆಗೆ ಅನುಮೋದನೆ ಸಿಕ್ಕ ಬೆನ್ನಲ್ಲೇ ಇದೀಗ ಲಸಿಕೆ ರೂಲ್ ಔಟ್ ಕುರಿತು ಪ್ರಧಾನಿ ಮೋದಿ, ಬಿಎಸ್ ಯಡಿಯೂರಪ್ಪ ಸೇರಿ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಲಿದ್ದಾರೆ. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.  

ನವದೆಹಲಿ(ಜ.08): ಭಾರತದಲ್ಲಿ ಎರಡು ಕೊರೋನಾ ಲಸಿಕೆ ಬಳಕಿಗೆ ಅನುಮತಿ ಸಿಕ್ಕಿಗೆ. ಕೋವಿಶೀಲ್ಡ್ ಹಾಗೂ ಕೋವಾಕ್ಸಿನ್ ಲಸಿಕೆಗೆ ಅನುಮೋದನೆ ಸಿಕ್ಕ ಬೆನ್ನಲ್ಲೇ ಇದೀಗ ಲಸಿಕೆ ವಿತರಣೆ ಕುರಿತು ರೂಪುರೇಶೆ ಸಿದ್ದಗೊಂಡಿದೆ. ಇದೀಗ ಎಲ್ಲಾ ರಾಜ್ಯಗಳಿಗೆ ಲಸಿಕೆ ರೋಲ್ ಔಟ್ ಮಾಡಲು ತಯಾರಿ ಆರಂಭಗೊಂಡಿದೆ. ಇದರ ಮೊದಲ ಭಾಗವಾಗಿ ಪ್ರಧಾನಿ ಮೋದಿ ಮುಖ್ಯಮಂತ್ರಿಗಳ ಮಹತ್ವದ ಸಭೆ ನಡೆಸಲಿದ್ದಾರೆ.

ರೂಪಾಂತರಿ ವೈರಸ್ ಆತಂಕ ಬೇಡ; 2 ಕೊರೋನಾ ಲಸಿಕೆ ಪರಿಣಾಮಕಾರಿ ಎಂದ ಅಧ್ಯಯನ ವರದಿ!..

ಜನವರಿ 11ರಂದು ಸಂಜೆ 4 ಗಂಟೆ ಮೋದಿ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳ ಜೊತೆ ಮಹತ್ವದ ಮಾತುಕತೆ ನಡೆಸಲಿದ್ದಾರೆ. ವಿಡಿಯೋ ಕಾನ್ಫೆರೆನ್ಸ್ ಮೂಲಕ ಮೋದಿ ಸಭೆ ನಡೆಸಲಿದ್ದಾರೆ.  ಸೆರಂ ಸಂಸ್ಥೆಯ ಕೋವಿಶೀಲ್ಡ್ ಹಾಗೂ ಭಾರತ್ ಭಯೋಟೆಕ್ ಸಂಸ್ಥೆಯ ಕೋವಾಕ್ಸಿನ್ ಲಸಿಕೆಗೆ ಭಾರತದ ಔಷಧ ನಿಯಂತ್ರಕ ಬೋರ್ಡ್ ತುರ್ತು ಬಳಕೆಗೆ ಅನುಮೋದನೆ ನೀಡಿದೆ. ಇದರ ಬೆನ್ನಲ್ಲೇ ಮೋದಿ, ರಾಜ್ಯಗಳ ಸಿಎಂ ಜೊತೆ ಸಭೆ ಕರೆದಿದ್ದಾರೆ.

 

ಕೊರೋನಾ ವೈರಸ್ ಲಸಿಕೆ ಕೆಲ ದಿನಗಳಲ್ಲಿ ಎಲ್ಲಾ ರಾಜ್ಯಗಳಿಗೆ ಲಭ್ಯವಾಗಲಿದೆ ಎಂದು ಇತ್ತೀಚೆಗಷ್ಟೇ ಕೇಂದ್ರ ಆರೋಗ್ಯ ಸಚಿವರು ಹೇಳಿದ್ದರು. ಇದೀಗ ಕೊರೋನಾ ವೈರಸ್ ಲಸಿಕೆ ಲಭ್ಯತೆ, ವಿತರಣೆ ಹಾಗೂ ಮೊದಲ ಹಂತದಲ್ಲಿ ಯಾರಿಗೆಲ್ಲಾ ಲಸಿಕೆ ನೀಡಬೇಕು ಅನ್ನೋ ಕುರಿತ ಎಲ್ಲಾ ಸಿದ್ದತೆಗಳು ಬಹುತೇಕ ಪೂರ್ಣಗೊಂಡಿದೆ.

ಭಾರತದಲ್ಲಿ ಈಗಾಗಲೇ 2 ಲಸಿಕೆ ಡ್ರೈ ರನ್ ನಡೆಸಲಾಗಿದೆ. ಇದೀಗ ಲಸಿಕೆ ರೋಲ್ ಔಟ್ ಕುರಿತ ಸಭೆ ಭಾರಿ ಮಹತ್ವದ ಪಡೆದುಕೊಂಡಿದೆ. ಕರ್ನಾಟಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಪ್ರಧಾನಿ ಮೋದಿ ಜೊತೆ ಲಸಿಕೆ ವಿತರಣೆ ಕುರಿತು ಮಾತುಕತೆ ನಡೆಸಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರತನ್ ಟಾಟಾ ಮಲತಾಯಿ, ಲ್ಯಾಕ್‌ಮೆ ಫ್ಯಾಶನ್ ಸಂಸ್ಥಾಪಕಿ ಸೈಮನ್ ಟಾಟಾ ನಿಧನ
ಭಾರತದ 2 ಬಿಲಿಯನ್ ಡಾಲರ್ ಪರಮಾಣು ಜಲಾಂತರ್ಗಾಮಿ ಒಪ್ಪಂದ ಅಂತಿಮಗೊಳಿಸಿದ ಪುಟಿನ್ ಭೇಟಿ