
ಅಯೋಧ್ಯೆ(ಜು.20): ಅಯೋಧ್ಯೆಯಲ್ಲಿ ಭವ್ಯ ರಾಮಂದಿರ ನಿರ್ಮಾಣಕ್ಕೆ ಆಗಸ್ಟ್ 5ರಂದು ಭೂಮಿಪೂಜೆ ನೆರವೇರುವುದು ಬಹುತೇಕ ಖಚಿತ ಎನ್ನಲಾಗಿದೆ. ಆ.5ರಂದು ಬೆಳಗ್ಗೆ 11 ಗಂಟೆಗೆ ಅಯೋಧ್ಯೆಗೆ ಆಗಮಿಸಲಿರುವ ಪ್ರಧಾನಿ ಮೋದಿ ಅವರು ರಾಮ ಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜೆ ನೆರವೇರಿಸಲಿದ್ದಾರೆ.
ಅಂದು ಬೆಳಗ್ಗೆ 8 ಗಂಟೆಯಿಂದಲೇ ಕಾಶಿ ಮತ್ತು ಮೋದಿ ಲೋಕಸಭೆ ಕ್ಷೇತ್ರ ಪ್ರತಿನಿಧಿಸುವ ವಾರಾಣಸಿ ಮೂಲದ ಅರ್ಚಕರು ಭೂಮಿ ಪೂಜೆ ಪ್ರಕ್ರಿಯೆಗಳನ್ನು ಆರಂಭಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಈ ಕಾರ್ಯಕ್ರಮಕ್ಕೆ ಆಗಮಿಸಲಿರುವ ಮೋದಿ ಅವರು ಮಧ್ಯಾಹ್ನ 1.10 ನಿಮಿಷದವರೆಗೆ ಪೂಜಾ ವಿಧಿ ವಿಧಾನಗಳಲ್ಲಿ ಸಕ್ರಿಯರಾಗಲಿದ್ದಾರೆ ಎನ್ನಲಾಗಿದೆ.
300 ಕೋಟಿಯ ರಾಮಮಂದಿರ: ಆ.3 ಅಥವಾ 5ಕ್ಕೆ ಭೂಮಿಪೂಜೆ: ಮೋದಿಗೆ ಆಹ್ವಾನ!
ದೆಹಲಿಯಲ್ಲಿದ್ದುಕೊಂಡೇ ವಿಡಿಯೋ ಕಾನ್ಫರೆನ್ಸ್ ಮೂಲಕ ಭೂಮಿ ಪೂಜೆಯಲ್ಲಿ ಪಾಲ್ಗೊಳ್ಳುವ ಇಂಗಿತವನ್ನು ಮೋದಿ ಅವರು ವ್ಯಕ್ತಪಡಿಸಿದ್ದರು. ಆದರೆ, ಮೋದಿ ಅವರೇ ಖುದ್ದಾಗಿ ಅಯೋಧ್ಯೆಗೆ ಭೇಟಿ ನೀಡಿ ಈ ಮಹತ್ಕಾರ್ಯ ನೆರವೇರಿಸಬೇಕು ಎಂಬ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನ ಕೋರಿಕೆ ಮೇರೆಗೆ ಮೋದಿ ಅವರು ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ ಎನ್ನಲಾಗಿದೆ.
ಈ ವೇಳೆ ಮೋದಿ ಅವರು ಹನುಮಾನ್ ಗಡಿ ದೇವಾಲಯ ಮತ್ತು ಸರಯೂ ನದಿಗೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಪ್ರಧಾನಿ ಕಚೇರಿಯಿಂದ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ. 2014ರಲ್ಲಿ ನರೇಂದ್ರ ಮೋದಿ ಪ್ರಧಾನಿ ಆದ ಬಳಿಕ ಅಯೋಧ್ಯೆಗೆ ನೀಡುತ್ತಿರುವ ಮೊದಲ ಭೇಟಿ ಇದಾಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ