ಪ್ರಧಾನಿ ಮೋದಿ ನಾಳೆ ಬೆಂಗಳೂರಿನ HALಗೆ ಭೇಟಿ, ಮಹತ್ವದ ಘೋಷಣೆ ಸಾಧ್ಯತೆ!

Published : Nov 24, 2023, 08:16 PM ISTUpdated : Nov 24, 2023, 08:38 PM IST
ಪ್ರಧಾನಿ ಮೋದಿ ನಾಳೆ ಬೆಂಗಳೂರಿನ HALಗೆ ಭೇಟಿ, ಮಹತ್ವದ ಘೋಷಣೆ ಸಾಧ್ಯತೆ!

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ನಾಳೆ ಬೆಂಗಳೂರಿಗೆ ಭೇಟಿ ನೀಡುತ್ತಿದ್ದಾರೆ. ಬೆಳಗ್ಗೆ 9.30ಕ್ಕೆ ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ಮೋದಿ, ಹೆಚ್‌ಎಲ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ನವದೆಹಲಿ(ನ.23) ಪ್ರಧಾನಿ ನರೇಂದ್ರ ಮೋದಿ ನಾಳೆ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಬೆಳಗ್ಗೆ 9.30ಕ್ಕೆ ಬೆಂಗಳೂರಿನ ಹೆಚ್‌ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸು  ಮೋದಿ, ಹಿಂದಸ್ಥಾನ ಏರೋನಾಟಿಕ್ಸ್ ಲಿಮಿಟೆಡ್(HAL) ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಹೆಚ್‌ಎಎಲ್ ಉತ್ಪಾದನಾ ಘಟಕದ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಇಷ್ಟೇ ಅಲ್ಲ ತೇಜಸ್ ಯುದ್ಧ ವಿಮಾನದ ಉತ್ಪಾದನಾ ಘಟಕದ ಪ್ರಗತಿಯನ್ನೂ ಪರಿಶೀಲನೆ ನಡೆಸಲಿದ್ದಾರೆ. ಹೆಚ್ಎಎಲ್ ಕಾಂಪ್ಲೆಕ್ಸ್‌ನಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಮೋದಿ ಭಾಗವಹಿಸಲಿದ್ದಾರೆ. 

9.30ರಿಂದ 12 ಗಂಟೆ ವರೆಗೆ ಹೆಚ್ಎಎಲ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೋದಿ, ಮಧ್ಯಾಹ್ನ 12.15ಕ್ಕೆ ಹೆಚ್ಎಎಲ್ ವಿಮಾನ ನಿಲ್ದಾಣದ ಮೂಲಕ ತೆಲಂಗಾಣದ ದಿಂಡುಗಲ್ ವಿಮಾನ ನಿಲ್ದಾಣಕ್ಕೆ ಪ್ರಯಾಣ ಬೆಳೆಸಲಿದ್ದಾರೆ. 1.15ಕ್ಕೆ ದಿಂಡುಗಲ್ ವಿಮಾನ ನಿಲ್ದಾಣದಲ್ಲಿ ಮೋದಿ ಇಳಿಯಲಿದ್ದಾರೆ. ಬಳಿಕ ತೆಲಂಗಾಣ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ.   

ಕೃಷ್ಣ ಜನ್ಮಭೂಮಿ ಮಥುರಾಗೆ ಭೇಟಿ ನೀಡಿ ಕೃಷ್ಣನ ದರ್ಶನ ಪಡೆದ ಪ್ರಧಾನಿ

ಹೆಚ್‌ಎಎಲ್ ಕಾರ್ಯಕ್ರಮದಲ್ಲಿ ಕೆಲ ಮಹತ್ವದ ಒಪ್ಪಂದ ಘೋಷಣೆಯಾಗಲಿದೆ. ಲಘು ಯುದ್ದ ವಿಮಾನ ಖರೀದಿಸಿ ಹಾಗೂ ಉತ್ಪಾದನಾ ಒಪ್ಪಂದ ಸೇರಿದಂತೆ ಹಲವು ಮಹತ್ವದ ಒಪ್ಪಂದದ ಕುರಿತ ಮೋದಿ ಘೋಷಿಸುವ ಸಾಧ್ಯತೆ ಇದೆ. ಫ್ರಾನ್ಸ್‌ನ ಸ್ಯಾಫ್ರನ್ ಕಂಪನಿ ಜೊತೆ ಹೆಚ್ಎಎಲ್ ಜಂಟಿಯಾಗಿ ಲಘು ಯುದ್ಧ ವಿಮಾನ ಉತ್ಪಾದನೆಯಲ್ಲಿ ತೊಡಗಿದೆ. ಸ್ಯಾಫ್ರನ್ ಕಂಪನಿಯಿಂದ ಈಗಾಗಲೇ ಹಲವು ಒಪ್ಪಂದ ಮಾಡಲಾಗಿದೆ. ಈ ನಿಟ್ಟಿನಲ್ಲಿ ಕೆಲ ಒಪ್ಪಂದಗಳು ಮೋದಿ ಭೇಟಿ ವೇಳೆ ಘೋಷಣೆಯಾಗುವ ಸಾಧ್ಯತೆ ಇದೆ.

ಅಕ್ಟೋಬರ್ ತಿಂಗಳಲ್ಲಿ ಸಾಫ್ರನ್ ಏರ್‌ಕ್ರಾಫ್ಟ್ ಎಂಜಿನ್ಸ್ ಕಂಪನಿ ಜೊತೆ ಎಚ್‌ಎಎಲ್ ಒಪ್ಪಂದ ಮಾಡಿಕೊಂಡಿದೆ. ಎಚ್‌ಎಎಲ್ ಬೆಂಗಳೂರು ಘಟಕದ ಸಿಇಒ ಮಿಹಿರ್ ಕಾಂತಿ ಮಿಶ್ರಾ ಮತ್ತು ಸಾಫ್ರನ್ ಏರ್‌ಕ್ರಾಫ್ಟ್ ಎಂಜಿನ್ಸ್‌ನ ಹಿರಿಯ ಉಪಾಧ್ಯಕ್ಷ (ಖರೀದಿ) ಡಾಮಿನಿಕ್ ಡ್ಯುಪ್ಯು ಅವರು ಬೆಂಗಳೂರಿನ ಎಚ್‌ಎಎಲ್ ಕಚೇರಿಯಲ್ಲಿ ಒಪ್ಪಂದಕ್ಕೆ ಸಹಿ ಹಾಕಿದ್ದರು.  ಫೌಂಡ್ರಿ ಮತ್ತು ಫೋರ್ಜ್‌ ಘಟಕ’ದಲ್ಲಿ ಏರ್‌ಬಸ್ ಎ320 ಮತ್ತು ಬೊಯಿಂಗ್ 737 ಮ್ಯಾಕ್ಸ್ ವಿಮಾನಗಳಿಗೆ ಬಳಸುವ ಎಂಜಿನ್ ಬಿಡಿಭಾಗ ಉತ್ಪಾದಿಸಲಾಗುತ್ತದೆ.ಜಂಟಿ ಸಹಭಾಗಿತ್ವದಲ್ಲಿ ಎಚ್‌ಎಎಲ್‌ನಲ್ಲಿ ಈಗಾಗಲೇ ಏರೋ ಎಂಜಿನ್ ಪೈಪ್‌ಗಳನ್ನು ಉತ್ಪಾದಿಸಲಾಗುತ್ತಿದೆ.

 

 

ಆತ್ಮಹತ್ಯಾ ದಾಳಿಯ ಮೂಲಕ ಪ್ರಧಾನಿ ಮೋದಿ, ಯೋಗಿ ಆದಿತ್ಯನಾಥ್‌ರನ್ನು ಕೊಲ್ಲುವ ಬೆದರಿಕೆ!

ಸೆಪ್ಟೆಂಬರ್ ತಿಂಗಳಲ್ಲಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನಿಂದ (ಎಚ್‌ಎಎಲ್) ಭಾರತದಲ್ಲಿ ತಯಾರಿಸಲ್ಪಡುವ 12 ಸುಖೋಯ್‌-30 ಎಂಕೆಐ ವಿಮಾನಗಳು ಸೇರಿದಂತೆ 45 ಸಾವಿರ ಕೋಟಿ ರು. ಮೌಲ್ಯದ ದೇಶೀ ನಿರ್ಮಿತ ರಕ್ಷಣಾ ಸಲಕರಣೆಗಳ ಖರೀದಿಗೆ ಕೇಂದ್ರ ಸರ್ಕಾರ ಶುಕ್ರವಾರ ಅನುಮೋದನೆ ನೀಡಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇಂಡಿಗೋ ವಿಮಾನ ರದ್ದಾಗಿ ಪರದಾಡುತ್ತಿರುವ ಪ್ರಯಾಣಿಕರ ನೆರವಿಗೆ ಧಾವಿಸಿದ ಭಾರತೀಯ ರೈಲ್ವೆ
ಅಫೀಸ್‌ ಸಮಯ ಬಳಿಕ ಕರೆ-ಇಮೇಲ್ ಮಾಡಂಗಿಲ್ಲ, ಡಿಸ್‌ಕನೆಕ್ಟ್ ಬಿಲ್ ಲೋಕಸಭೆಯಲ್ಲಿ ಮಂಡನೆ