Vande Bharat Train Service: ಕಾಶ್ಮೀರಕ್ಕಿನ್ನು ರೈಲಲ್ಲೇ ನಿಶ್ಚಿಂತೆಯಿಂದ ಪ್ರಯಾಣ ಮಾಡಿ!

Kannadaprabha News   | Kannada Prabha
Published : Jun 04, 2025, 05:38 AM ISTUpdated : Jun 04, 2025, 10:48 AM IST
jammu kashmir

ಸಾರಾಂಶ

ಜೂನ್ 6 ರಂದು ಪ್ರಧಾನಿ ಮೋದಿ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿ ಕಟ್ರಾ ಮತ್ತು ಶ್ರೀನಗರ ನಡುವಿನ ವಂದೇ ಭಾರತ್ ರೈಲು ಸಂಚಾರಕ್ಕೆ ಚಾಲನೆ ನೀಡಲಿದ್ದಾರೆ. 

ಜಮ್ಮು: ಜೂ.6ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ, ಜಮ್ಮುವಿನ ಕಟ್ರಾ ಮತ್ತು ಶ್ರೀನಗರದ ನಡುವಿನ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ.

ಕಟ್ರಾ ಮತ್ತು ಶ್ರೀನಗರದ ನಡುವೆ ವಂದೇ ಭಾರತ್ ರೈಲು ಸಂಚರಿಸಲಿದೆ. ಈ ಮಾರ್ಗವು 272 ಕಿ.ಮೀ. ಉದ್ದದ ಉಧಂಪುರ-ಶ್ರೀನಗರ-ಬಾರಾಮುಲ್ಲಾ ರೈಲ್ವೆ ಸಂಪರ್ಕ (ಯುಎಸ್‌ಬಿಆರ್‌ಎಲ್) ಯೋಜನೆಯ ಬಹುಮುಖ್ಯ ಭಾಗವಾಗಿದ್ದು, ದೇಶದ ರೈಲ್ವೆ ಜಾಲಕ್ಕೆ ಕಾಶ್ಮೀರ ಕಣಿವೆಯನ್ನು ನೇರವಾಗಿ ಸಂಪರ್ಕಿಸಲಿದೆ.

ಈ ಮೊದಲು ಯುಎಸ್‌ಬಿಆರ್‌ಎಲ್ ಯೋಜನೆಯಡಿ 2009ರಲ್ಲಿ ಖಾಜಿಗುಂದ್-ಬಾರಾಮುಲ್ಲಾ ಮಾರ್ಗ, 2014ರಲ್ಲಿ ಉಧಂಪುರ-ಕಟ್ರಾ ಮಾರ್ಗ ಹಾಗೂ 2024ರ ಫೆಬ್ರವರಿಯಲ್ಲಿ ಬನಿಹಾಲ್-ಸಂಗಲ್ದನ್ ಮಾರ್ಗ ನಿರ್ಮಾಣವಾಗಿತ್ತು. ಆದರೆ ಈ ಯಾವುದೇ ಮಾರ್ಗಗಳು ಕಾಶ್ಮೀರವನ್ನು ದೇಶದ ಇತರ ಭಾಗಗಳಿಗೆ ಸಂಪರ್ಕಿಸುತ್ತಿರಲಿಲ್ಲ. ಜೂ.6ರಂದು ಉದ್ಘಾಟನೆಯಾಗಲಿರುವ ಕಟ್ರಾ-ಶ್ರೀನಗರ ಮಾರ್ಗವು ಮೊದಲ ಬಾರಿ ಕಾಶ್ಮೀರ ಕಣಿವೆಯನ್ನು ದೇಶದ ಇತರ ರೈಲ್ವೆ ಜಾಲಕ್ಕೆ ಜೋಡಿಸಲಿದೆ.

ಇದೇ ದಿನ, ಚಿನಾಬ್ ನದಿಗೆ ನಿರ್ಮಿಸಲಾಗಿರುವ ವಿಶ್ವದ ಅತಿ ಎತ್ತರದ ಕಮಾನು ಸೇತುವೆಯನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ. ಆ ಬಳಿಕ ರೈಲ್ವೆ ಅಧಿಕಾರಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..