ರಾಹುಲ್‌ ಜೊತೆ ಚರ್ಚೆಗೆ ಒಪ್ಪಲು ಮೋದಿಗೆ ಇನ್ನೂ ಧೈರ್ಯ ಬಂದಿಲ್ಲ: ಜೈರಾಂ ರಮೇಶ್‌

Published : May 13, 2024, 07:23 AM IST
ರಾಹುಲ್‌ ಜೊತೆ ಚರ್ಚೆಗೆ ಒಪ್ಪಲು ಮೋದಿಗೆ ಇನ್ನೂ ಧೈರ್ಯ ಬಂದಿಲ್ಲ: ಜೈರಾಂ ರಮೇಶ್‌

ಸಾರಾಂಶ

ಲೋಕಸಭಾ ಚುನಾವಣೆಯ ನಡುವೆ ಜ್ವಲಂತ ಸಮಸ್ಯೆಗಳ ಕುರಿತು ಚರ್ಚಿಸಲು ನಿವೃತ್ತ ನ್ಯಾಯಾಧೀಶರು ನೀಡಿದ್ದ ಕರೆಯಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಇನ್ನೂ ಧೈರ್ಯ ಮಾಡಿಲ್ಲ ಎಂಬುದಾಗಿ ಕಾಂಗ್ರೆಸ್‌ ವ್ಯಂಗ್ಯವಾಡಿದೆ. 

ನವದೆಹಲಿ (ಮೇ.13): ಲೋಕಸಭಾ ಚುನಾವಣೆಯ ನಡುವೆ ಜ್ವಲಂತ ಸಮಸ್ಯೆಗಳ ಕುರಿತು ಚರ್ಚಿಸಲು ನಿವೃತ್ತ ನ್ಯಾಯಾಧೀಶರು ನೀಡಿದ್ದ ಕರೆಯಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಇನ್ನೂ ಧೈರ್ಯ ಮಾಡಿಲ್ಲ ಎಂಬುದಾಗಿ ಕಾಂಗ್ರೆಸ್‌ ವ್ಯಂಗ್ಯವಾಡಿದೆ. ಈ ಕುರಿತು ಟ್ವೀಟ್‌ ಮಾಡಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್‌, ‘ರಾಹುಲ್‌ ಗಾಂಧಿ ಬಹಿರಂಗ ಚರ್ಚೆಗೆ ಮೊದಲ ದಿನವೇ ಒಪ್ಪಿಗೆ ನೀಡಿದ್ದಾರೆ. ಆದರೆ 56 ಇಂಚು ಎದೆಯುಬ್ಬಿಸಿಕೊಂಡು ಪ್ರಚಾರಗಳಲ್ಲಿ ಭಾಗಿಯಾಗುವ ಪ್ರಧಾನಿ ಮೋದಿ ಮಾತ್ರ ಇನ್ನೂ ಧೈರ್ಯ ತೋರುತ್ತಿಲ್ಲ.

ಇದು ಅವರ ಅಧೈರ್ಯವನ್ನು ತೋರಿಸುತ್ತಿದೆ’ ಎಂಬುದಾಗಿ ಟೀಕಿಸಿದ್ದಾರೆ. ಹೊರಹೋಗುವ ಪ್ರಧಾನಿ: ಇದೇ ವೇಳೆ ಪ್ರಧಾನಿ ಮೋದಿ ನೀಡುವ ಸಂದರ್ಶನಗಳನ್ನು ಟೀಕಿಸುತ್ತಾ, ‘ನರೇಂದ್ರ ಮೋದಿ ತಾವು ಅಧಿಕಾರದಿಂದ ಕೆಳಗಿಳಿಯುವ ಭಯದಿಂದ ಎಲ್ಲ ವಾಹಿನಿಗಳಿಗೆ ಸಂದರ್ಶನ ನೀಡಿ ಸಣ್ಣ ಸಣ್ಣ ವಿಷಯಗಳಿಗೂ ಮಹತ್ವ ಸಿಗುವಂತೆ ನೋಡಿಕೊಳ್ಳುತ್ತಿದ್ದಾರೆ. ಆದರೆ ಅವೆಲ್ಲವೂ ಸುಳ್ಳು ಭರವಸೆಗಳಿಂದ ಕೂಡಿವೆ ಎಂಬುದು ಜನರಿಗೆ ತಿಳಿದಿದೆ’ ಎಂದು ವಾಗ್ದಾಳಿ ನಡೆಸಿದ್ದಾರೆ.

ಇಂದಿರಾ ನೋಡಿ ಮೋದಿ ಧೈರ್ಯ ಕಲಿಯಲಿ: ’ಪ್ರಧಾನಿ ನರೇಂದ್ರ ಮೋದಿ ಅವರ ಚುನಾವಣಾ ಭಾಷಣಗಳು ಬರೀ ಪೊಳ್ಳು’ ಎಂದು ಶನಿವಾರ ಕಿಡಿಕಾರಿರುವ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ, ‘ಮೋದಿ ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಲ್ಲಿದ್ದ ಧೈರ್ಯ ಮತ್ತು ದೃಢ ನಿಶ್ಚಯದ ಗುಣಗಳನ್ನು ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದ್ದಾರೆ. ಮಹಾರಾಷ್ಟ್ರದ ನಂದೂರ್‌ಬಾರ್‌ನಲ್ಲಿ ಪ್ರಧಾನಿ ಮೋದಿ ಚುನಾವಣಾ ಪ್ರಚಾರ ಮಾಡಿದ ಮಾರನೇ ದಿನವೇ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಭಾಷಣ ಮಾಡಿದ ಪ್ರಿಯಾಂಕಾ, 

ಪಾಕಿಸ್ತಾನದ ವಿರುದ್ಧ ಪಿಒಕೆ ದಂಗೆ: ಹಿಂಸಾಚಾರದಲ್ಲಿ ಪೊಲೀಸ್‌ ಸಾವು, 100 ಮಂದಿಗೆ ಗಾಯ

‘ಏನಾದರೂ ಹೇಳಿದರೆ ಮೋದಿ ಗೊಳೋ ಎಂದು ಕಣ್ಣೀರಿಡುತ್ತಾರೆ. ಆದರೆ ಇದು ಸಾರ್ವಜನಿಕ ಜೀವನ. ಇಲ್ಲಿ ನೀವು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಂದ ಕಲಿಯಬೇಕಿದೆ. ಅವರು ದುರ್ಗೆಯ ರೀತಿಯಲ್ಲಿದ್ದರು. ಅವರು ಪಾಕಿಸ್ತಾನವನ್ನೇ ಎರಡು ತುಂಡು ಮಾಡಿದರು. ಅವರಿಂದ ಧೈರ್ಯ ಮತ್ತು ದೃಢ ನಿಶ್ಚಯದ ಗುಣಗಳನ್ನು ನೀವೂ ಅಳವಡಿಸಿಕೊಳ್ಳಬೇಕು. ಆದರೆ ಅವರನ್ನೇ ನೀವು ದೇಶದ್ರೋಹಿ ಎಂದು ಟೀಕಿಸುತ್ತಿರುವಾಗ ಅವರಿಂದ ನೀವು ಏನು ಕಲಿಯಲು ಸಾಧ್ಯ?’ ಎಂದು ಮೋದಿ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇಂಡಿಗೋ ವಿಮಾನ ರದ್ದಾಗಿ ಪರದಾಡುತ್ತಿರುವ ಪ್ರಯಾಣಿಕರ ನೆರವಿಗೆ ಧಾವಿಸಿದ ಭಾರತೀಯ ರೈಲ್ವೆ
ಅಫೀಸ್‌ ಸಮಯ ಬಳಿಕ ಕರೆ-ಇಮೇಲ್ ಮಾಡಂಗಿಲ್ಲ, ಡಿಸ್‌ಕನೆಕ್ಟ್ ಬಿಲ್ ಲೋಕಸಭೆಯಲ್ಲಿ ಮಂಡನೆ