
ನವದೆಹಲಿ(ಜೂ.18): ಉತ್ತರ ಪ್ರದೇಶ ಸರ್ಕಾರದ ಕ್ಯಾಬಿನೆಟ್ ವಿಸ್ತರಣೆ, ಬಿಜೆಪಿ ಉಪಾಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆಯಲ್ಲಿ ಹಲವು ಹೆಸರುಗಳು ಕೇಳಿಬಂದಿತ್ತು. ಆದರೆ ಅಂತಿಮವಾಗಿ ಪ್ರಧಾನಿ ಮೋದಿ ಆಪ್ತ, ಮಾಜಿ ಐಎಎಸ್ ಅಧಿಕಾರಿ ಎಕೆ ಶರ್ಮಾ, ಉತ್ತರ ಪ್ರದೇಶ ಬಿಜೆಪಿ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಕೋರ್ ಕಮಿಟಿ ಸಭೆ; ಅರುಣ್ ಸಿಂಗ್ ಸಮ್ಮುಖದಲ್ಲಿ BSY ಕೆಂಡಾಮಂಡಲ!
ಗುಜರಾತ್ ಮುಖ್ಯಮಂತ್ರಿಯಾಗಿದ್ದ ವೇಳೆ ನರೇಂದ್ರ ಮೋದಿ ನಂಬಿಕಸ್ಥ ಅಧಿಕಾರಿಯಾಗಿ ಕೆಲಸ ನಿರ್ವಹಿಸಿದ್ದ ಎಕೆ ಶರ್ಮಾ, ಕಳೆದ ಜನವರಿಯಲ್ಲಿ ಬಿಜೆಪಿ ಸೇರಿಕೊಂಡಿದ್ದರು. ಉತ್ತರ ಪ್ರದೇಶ ಸಂಪುಟ ವಿಸ್ತರಣೆಯಲ್ಲಿ ಎಕೆ ಶರ್ಮಾಗೆ ಸ್ಥಾನ ನೀಡುವ ಕುರಿತು ಭಾರಿ ಚರ್ಚೆ ನಡೆದಿತ್ತು. ಇದೀಗ ಎಕೆ ಶರ್ಮಾ ಉತ್ತರ ಪ್ರದೇಶ ಬಿಜೆಪಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಇಂದು(ಜೂ.19) ಎಕೆ ಶರ್ಮಾ ಆಯ್ಕೆಯನ್ನು ಖಚಿತಪಡಿಸಿದರು. ಕಳೆದ ವರ್ಷ ಗುಜರಾತ್ ಕೇಡರ್ ಐಎಎಸ್ ಅಧಿಕಾರಿ ಶರ್ಮಾ ನಿವೃತ್ತಿಯಾಗಿದ್ದರು. ಬಳಿಕ ಉತ್ತರ ಪ್ರದೇಶ ಬಿಜೆಪಿ ಸೇರಿಕೊಂಡಿದ್ದರು. ಉತ್ತರ ಪ್ರದೇಶದ ಮೌ ಜಿಲ್ಲೆಯ 1988 ರ ಬ್ಯಾಚ್ ಅಧಿಕಾರಿಯಾಗಿದ್ದ ಶರ್ಮಾ, ಪ್ರಧಾನಿ ನರೇಂದ್ರ ಮೋದಿ ಆಪ್ತರಾಗಿದ್ದರು.
ಕಾಂಗ್ರೆಸ್ ತೊರೆದು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ರುಪ್ಜ್ಯೋತಿ BJP ಸೇರಲು ರೆಡಿ!
ಇದರ ನಡುವೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಸ್ ಸಂತೋಷ್ ಜೂನ್ 21 ಹಾಗೂ 22 ರಂದು ಲಖನೌಗೆ ಭೇಟಿ ನೀಡಲಿದ್ದಾರೆ. ಈ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಉತ್ತರ ಪ್ರದೇಶ ಬಿಜೆಪಿ ಹೇಳಿದೆ. ಬಿಎಸ್ ಸಂತೋಷ್ ಪ್ರಮುಖವಾಗಿ 2022 ರ ಚುನಾವಣೆಯ ಕಾರ್ಯತಂತ್ರವನ್ನು ಸರ್ಕಾರದ ಮಂತ್ರಿಗಳು ಮತ್ತು ಸಂಸ್ಥೆಯ ಪದಾಧಿಕಾರಿಗಳೊಂದಿಗೆ ಚರ್ಚಿಸಲಿದ್ದಾರೆ ಎಂದು ಯುಪಿ ಬಿಜೆಪಿ ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ