ಪೇಜಾವರ ಶ್ರೀಗಳು ದೈವಾಧೀನ : ಪ್ರಧಾನಿ ಮೋದಿ, ಅಮಿತ್ ಶಾ ಸಂತಾಪ

Suvarna News   | Asianet News
Published : Dec 29, 2019, 10:59 AM ISTUpdated : Dec 29, 2019, 05:24 PM IST
ಪೇಜಾವರ ಶ್ರೀಗಳು ದೈವಾಧೀನ : ಪ್ರಧಾನಿ ಮೋದಿ, ಅಮಿತ್ ಶಾ ಸಂತಾಪ

ಸಾರಾಂಶ

ನಾಡು ಕಂಡ ಶ್ರೇಷ್ಠ ಸಂತ ಪೇಜಾವರ ಶ್ರೀಗಳು ದೈವಾಧೀನರಾಗಿದ್ದು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್  ಶಾ ಸಂತಾಪ ಸೂಚಿಸಿದ್ದಾರೆ.

ಉಡುಪಿ [ಡಿ.29] : ನಾಡಿನ ಯತಿ ಶ್ರೇಷ್ಠ ಸಂತ  ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿಯವರು ದೈವಾಧೀನರಾಗಿದ್ದು, ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. 

ಪೇಜಾವರ ಶ್ರೀಗಳೊಂದಿಗೆ ಹೆಚ್ಚು ನಂಟು ಹೊಂದಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಹಲವು ಬಾರಿ ಸ್ವಾಮೀಜಿಗಳನ್ನು ಭೇಟಿ ಮಾಡಿ ಆತ್ಮೀಯ ಬಂಧವನ್ನು ಹೊಂದಿದ್ದ ಮೋದಿ ಶ್ರೀಗಳ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. 

ಲಕ್ಷಾಂತರ ಜನರ ಮನಸ್ಸು ಹಾಗೂ ಹೃದಯದಲ್ಲಿ ನೆಲೆಸಿದ್ದ, ಸದಾ ಬೆಳಕಿನತ್ತ ದಾರಿ ತೋರಿಸುತ್ತಿದ್ದ ಆಧ್ಯಾತ್ಮಿಕತೆ ಮತ್ತು ಸೇವೆಯ ಮೂರ್ತಿಯಾಗಿದ್ದ ಸಮಾಜದ ಸರ್ವಶ್ರೇಷ್ಠ ಯತಿಗಳು ಅಗಲಿದ್ದು ಅತೀವ ದುಃಖವನ್ನುಂಟು ಮಾಡಿದೆ ಎಂದಿದ್ದಾರೆ. 

ಅವರ ಆಶೀರ್ವಾದ ಪಡೆಯಲು ಹಲವು ಬಾರಿ ಸುವರ್ಣಾವಕಾಶ ಒಲಿದಿತ್ತು. ಗುರುಪೂರ್ಣಿಮೆಯಂದು ಮಹಾನ್ ಯತಿಗಳ ದರ್ಶನ ಪಡೆದಿದ್ದೆ. ಇದೊಂದು ನೆನಪಿನಾಳದಲ್ಲಿ ಉಳಿದ ದಿನವಾಗಿದ್ದು, ಅವರೋರ್ವ ಮಹಾನ್ ಜ್ಞಾನಿ ಎಂದು ಸಂತಾಪ ಸೂಚಿಸಿದ್ದಾರೆ. 

 

ಶಾ ಸಂತಾಪ :  ಇನ್ನು ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷರಾದ ಅಮಿತ್ ಶಾ ಅವರು ಪೇಜಾವರ ಶ್ರೀಗಳ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. 

ಸಕಾರಾತ್ಮಕತೆಯ ಮೂರ್ತಿಯಾಗಿದ್ದ, ಸದಾ ನಮಗೆ ದಾರಿದೀಪವಾಗಿರುವ ವಿಚಾರಗಳನ್ನು ನೀಡಿದ ಮಹಾನ್ ಸಂತ ನಮ್ಮನ್ನಗಲಿದ್ದಾರೆ. ಅವರ ಅಗಲಿಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ. ಓಂ ಶಾಂತಿ ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!