ಶೀಘ್ರದಲ್ಲೇ ಮೋದಿ ಸಚಿವ ಸಂಪುಟ ಸರ್ಜರಿ, ಹೊಸ ಸಚಿವರ ನೇಮಕಕ್ಕೆ ಸಿದ್ಧತೆ!

Published : Jan 12, 2023, 02:00 PM ISTUpdated : Jan 12, 2023, 02:01 PM IST
ಶೀಘ್ರದಲ್ಲೇ ಮೋದಿ ಸಚಿವ ಸಂಪುಟ ಸರ್ಜರಿ, ಹೊಸ ಸಚಿವರ ನೇಮಕಕ್ಕೆ ಸಿದ್ಧತೆ!

ಸಾರಾಂಶ

ಕಲ್ಲಿದ್ದಲು ಸಚಿವಾಲಯ ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೂ ಹೊಸ ಮುಖಗಳು ಬರುವ ನಿರೀಕ್ಷೆ ಇದೆ. ಮೋದಿ ಸಚಿವ ಸಂಪುಟ ಶೀಘ್ರದಲ್ಲೇ ಪುನರ್‌ ರಚನೆ ಆಗುವ ಸಾಧ್ಯತೆಗಳು ದಟ್ಟವಾಗಿದೆ.

ನವದೆಹಲಿ (ಜ.12): ಕೇಂದ್ರ ಸಚಿವ ಸಂಪುಟ ಶೀಘ್ರದಲ್ಲಿಯೇ ಪುನರ್‌ ರಚನೆ ಆಗುವ ಸಾಧ್ಯತೆ ಇದೆ. ಕೆಲವು ಹೊಸ ಮುಖಗಳು ಮೋದಿ ಸಂಪುಟಕ್ಕೆ ಬರುವ ಸಾಧ್ಯತೆಗಳು ದಟ್ಟವಾಗಿದೆ. ಅದರಲ್ಲೂ ಅಲ್ಪಸಂಖ್ಯಾತ ವ್ಯವಹಾರಗಳು ಹಾಗೂ ಉಕ್ಕು ಸಚಿವಾಲಯಗಳಿಗೆ ಹೊಸ ಸಚಿವರ ನೇಮಕವಾಗುವ ನಿರೀಕ್ಷೆ ಇದೆ. ಬಜೆಟ್ ಅಧಿವೇಶನ ಪ್ರಾರಂಭವಾಗುವ ಮೊದಲು (ಜನವರಿ 31) ಅಥವಾ ಫೆಬ್ರವರಿ 10 ರ ನಂತರ ಅಧಿವೇಶನದ ಮೊದಲ ಸುತ್ತು ಕೊನೆಗೊಳ್ಳುವ ಮೊದಲು ಕೇಂದ್ರ ಸಚಿವ ಸಂಪುಟದಲ್ಲಿ ಪ್ರಮುಖ ಬದಲಾವಣೆ ಆಗಲಿದೆ ಎನ್ನಲಾಗಿದೆ. ಫೆ.1 ರಂದು ಕೇಂದ್ರ ಬಜೆಟ್‌ ಮಂಡನೆಯೊಂದಿಗೆ ಸಂಸತ್ತಿನ ಬಜೆಟ್‌ ಅಧಿವೇಶನವು ಜನವರಿ 31 ರಿಂದಲೇ ಪ್ರಾರಂಭವಾಗಲಿದೆ ಎನ್ನಲಾಗಿದೆ. ಬುಧವಾರ ಬಿಜೆಪಿ ಪಕ್ಷದ ಕೇಂದ್ರ ಕಚೇರಿಯಲ್ಲಿ ಸಭೆ ನಡೆದಿದ್ದು, ಜನವರಿ 16-17ರಂದು ನಿಗದಿಯಾಗಿರುವ ರಾಷ್ಟ್ರಯ ಕಾರ್ಯಕಾರಿಣಿ ಸಭೆಯ ನಂತರ ಸಂಪುಟ ಪುನಾರಚನೆ ಆಗಬಹುದು ಎನ್ನುವ ಸುಳಿನ ನೀಡಿದೆ. ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಭಾಗವಹಿಸಿದ್ದರು. 'ಕೆಲವು ಹೊಸ ಮುಖಗಳನ್ನು ಕೇಂದ್ರ ಸಂಪುಟದಲ್ಲಿ ಮಂತ್ರಿಗಳಾಗಿ ಸೇರ್ಪಡೆಗೊಳಿಸಬಹುದು ಎಂದು ನಿರೀಕ್ಷೆ ಮಾಡಲಾಗಿದೆ. ಕೆಲವು ಹಳೆಯ ಮುಖಗಳು 2024 ರ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ಸಂಪುಟದಲ್ಲಿ ಅಥವಾ ಸಂಘಟನೆಯೊಳಗೆ ಹೊಸ ಜವಾಬ್ದಾರಿಗಳನ್ನು ಪಡೆಯಬಹುದು" ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವಾಲಯವು ಪ್ರಸ್ತುತ ಸ್ಮೃತಿ ಇರಾನಿ ಅವರ ನೇತೃತ್ವದಲ್ಲಿದೆ ಮತ್ತು ಉಕ್ಕು ಸಚಿವಾಲಯದ ಉಸ್ತುವಾರಿಯನ್ನು ಜ್ಯೋತಿರಾದಿತ್ಯ ಸಿಂಧಿಯಾ ವಹಿಸಿದ್ದಾರೆ. ಗ್ರಾಹಕ ವ್ಯವಹಾರಗಳ ಸಚಿವಾಲಯ ಮತ್ತು ಜವಳಿ ಸಚಿವಾಲಯವು ಕೂಡ ಹೊಸ ಸಚಿವರನ್ನು ಪಡೆಯಬಹುದು, ಇದು ಪ್ರಸ್ತುತ ಪಿಯೂಷ್ ಗೋಯಲ್ ಅವರ ನೇತೃತ್ವದಲ್ಲಿದೆ. ಕಲ್ಲಿದ್ದಲು ಸಚಿವಾಲಯ ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೂ ಹೊಸ ಮುಖಗಳು ಬರಬಹುದು ಎನ್ನುವ ಊಹಾಪೋಹಗಳಿವೆ.

"ಈ ಹಿಂದೆ ಮುಖ್ತಾರ್ ನಖ್ವಿ ನೇತೃತ್ವದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಮುಖ್ಯಸ್ಥರಾಗಲು ಅಲ್ಪಸಂಖ್ಯಾತ ಸಮುದಾಯಗಳ ಒಂದು ಮುಖವು ಮೋದಿ ತಂಡದಲ್ಲಿ ಸ್ಥಾನ ಪಡೆಯಬಹುದು ಎಂದು ನಿರೀಕ್ಷಿಸಲಾಗಿದೆ. ಗುಜರಾತಿನ ಸಿಆರ್ ಪಾಟೀಲ್ ಹೊಸ ಮುಖಗಳ ಪೈಕಿ ಪ್ರಮುಖ ಹೆಸರು. ಹಾಗೇನಾದರೂ ಜೆಪಿ ನಡ್ಡಾ ಅವರಿಗೆ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ಇನ್ನೊಂದು ಅವಧಿಗೆ ಅನುಮೋದಿಸದಿದ್ದರೆ, ಗುಜರಾತ್‌ನ ಸಿಆರ್‌ ಪಾಟೀಲ್‌ ಹಾಗೂ ಧರ್ಮೇಂದ್ರ ಪ್ರದಾನ್‌ ಅವರ ಹೆಸರುಗಳು ಜೆಪಿ ನಡ್ಡಾಗೆ ಸಂಭಾವ್ಯ ಉತ್ತರಾಧಿಕಾರಿಗಳಾಗುವ ಸಾಧ್ಯತೆ ಇದೆ ಎಂದು ಮೂಲ ತಿಳಿಸಿದೆ.

ಹುಬ್ಬಳ್ಳಿಗೆ ಇಂದು ಪ್ರಧಾನಿ ಮೋದಿ: ರಾಷ್ಟ್ರೀಯ ಯುವಜನೋತ್ಸವಕ್ಕೆ ಚಾಲನೆ

ಚಿರಾಗ್ ಪಾಸ್ವಾನ್ ನೇತೃತ್ವದ ಎಲ್‌ಜೆಪಿ (ರಾಮ್ ವಿಲಾಸ್ ಪಾಸ್ವಾನ್) ಕೂಡ ಸಂಪುಟದಲ್ಲಿ ಸ್ಥಾನ ಪಡೆಯಬಹುದು ಎಂದು ಹೇಳಲಾಗಿದೆ. ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಗಳು ಮತ್ತು ದೆಹಲಿಯ ನಾಗರಿಕ ಸಂಸ್ಥೆ ಚುನಾವಣೆಯಲ್ಲಿ ಪಕ್ಷದ ಸೋಲಿನ ಪರಿಣಾಮಗಳು ಕ್ಯಾಬಿನೆಟ್‌ನಲ್ಲಿ ಆಗಬಹುದು ಎಂದು ಅಂದಾಜಿಸಲಾಗಿದೆ.

National Youth Day 2023: ಪ್ರಧಾನಿ ಮೋದಿಗಾಗಿ ವಿಶೇಷ ಕಲಾಕೃತಿ ತಯಾರಿಸಿದ ಧಾರವಾಡದ ಯುವ ಕಲಾವಿದ

ಕರ್ನಾಟಕ, ರಾಜಸ್ಥಾನ, ಛತ್ತೀಸ್‌ಗಢ ಮತ್ತು ತೆಲಂಗಾಣದ ಕೆಲವು ಸಂಸದರು ಕೂಡ ಸಂಪುಟಕ್ಕೆ ಸೇರ್ಪಡೆಯಾಗಬಹುದು. ಮೋದಿಯವರ ಮಂತ್ರಿ ಮಂಡಲದಲ್ಲಿನ ಬದಲಾವಣೆಗಳು ಮೊದಲಿನಿಂದಲೂ ಅಚ್ಚರಿಯಿಂದ ಕೂಡಿರುತ್ತದೆ. ಇನ್ನು ಖಾತೆ ಬದಲಾವಣೆ ಕೂಡ ಅಚ್ಚರಿಯಿಂದ ಕೂಡಿರುತ್ತದೆ. ಕಳೆದ ಬಾರಿ, ಪ್ರಕಾಶ್ ಜಾವಡೇಕರ್ ಮತ್ತು ರವಿಶಂಕರ್ ಪ್ರಸಾದ್ ಅವರನ್ನು ಸಂಪುಟದಿಂದ ಕೈಬಿಡಲಾಯಿತು ಮತ್ತು ಮಾಜಿ ಐಎಎಸ್ ಅಧಿಕಾರಿ ಅಶ್ವಿನಿ ವೈಷ್ಣವ್ ಅವರನ್ನು ಸೇರ್ಪಡೆಗೊಳಿಸಲಾಯಿತು ಮತ್ತು ರೈಲ್ವೆ ಮತ್ತು ಮಾಹಿತಿ ತಂತ್ರಜ್ಞಾನದಂತಹ ಪ್ರಮುಖ ಸಚಿವಾಲಯಗಳನ್ನು ನೀಡಲಾಯಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮೋದಿ ಅವರೇ ನನ್ನ ಗಂಡ ವಿಕ್ರಂನನ್ನು ಪಾಕಿಸ್ತಾನಕ್ಕೆ ಕಳುಹಿಸಿ: ಪಾಕ್ ಮಹಿಳೆಯ ಮನವಿ
ಕಾರವಾರ ಜೈಲಲ್ಲಿ ಡ್ರಗ್ಸ್‌ಗಾಗಿ ಜೈಲ‌ರ್ ಮೇಲೆ ಕೈದಿಗಳಿಂದ ಹಲ್ಲೆ: ಬೆಂಗಳೂರು ಜೈಲೊಳಗೆ ಸಿಗರೇಟ್ ಸಾಗಿಸಲೆತ್ನಿಸಿ ಸಿಕ್ಕಿಬಿದ್ದ ವಾರ್ಡನ್