ಕಾಶಿ ವೀರಶೈವ ಗುರುಕುಲಕ್ಕೆ ಮೋದಿ, BSY: ಸಿದ್ಧಾಂತ ಶಿಖಾಮಣಿ ಕೃತಿ ಬಿಡುಗಡೆ

Kannadaprabha News   | Asianet News
Published : Feb 15, 2020, 09:13 AM IST
ಕಾಶಿ ವೀರಶೈವ ಗುರುಕುಲಕ್ಕೆ ಮೋದಿ, BSY: ಸಿದ್ಧಾಂತ ಶಿಖಾಮಣಿ ಕೃತಿ ಬಿಡುಗಡೆ

ಸಾರಾಂಶ

ಪಿಎಂ ಜತೆ ಸಿಎಂ ಬಿಎಸ್‌ವೈ ಭಾಗಿ| ಶತಮಾನೋತ್ಸವ ಸಮಾರೋಪದಲ್ಲಿ ಸಿಎಂ, ಪಿಎಂ| 30 ವಿವಿಧ ಯೋಜನೆಗ ಲೋಕಾರ್ಪಣೆಗೊಳಿಸಲಿರುವ ಪ್ರಧಾನಿ ಮೋದಿ|

ನವದೆಹಲಿ/ವಾರಾಣಸಿ[ಫೆ .15]: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತಮ್ಮ ಲೋಕಸಭಾ ಕ್ಷೇತ್ರವಾದ ವಾರಾಣಸಿಯಲ್ಲಿನ ಕಾಶಿ ಜಂಗಮವಾಡಿ ಮಠದಲ್ಲಿರುವ ವೀರಶೈವ ಧರ್ಮದ ಶ್ರೀ ಜಗದ್ಗುರು ವಿಶ್ವಾರಾಧ್ಯ ಗುರುಕುಲ ಶತಮಾನೋತ್ಸವದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಮೋದಿಯವರ ಜತೆ ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪ ಅವರೂ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಕಾಶಿ-ಮಥುರಾ ಬೇಡಿಕೆ ಘೋಷಣೆ: ಅಂತರ ಕಾಯ್ದುಕೊಂಡ RSS!

ಮೋದಿಯವರು ವೀರಶೈವ ಧರ್ಮದ ಧರ್ಮಗ್ರಂಥವಾದ ‘ಶ್ರೀ ಸಿದ್ಧಾಂತ ಶಿಖಾಮಣಿ’ಯ 19 ಭಾಷೆಗಳ ಭಾಷಾಂತರ ಕೃತಿಗಳನ್ನು ಬಿಡುಗಡೆಗೊಳಿಸಲಿದ್ದಾರೆ. ಗ್ರಂಥವನ್ನು ಮೊಬೈಲ್‌ ಆ್ಯಪ್‌ ರೂಪದಲ್ಲಿ ಕೂಡ ಹೊರತಂದಿದ್ದು ಇದನ್ನೂ ಕೂಡ ಮೋದಿ ಅವರು ಬಿಡುಗಡೆ ಮಾಡಲಿದ್ದಾರೆ ಎಂದು ವೀರಶೈವ ಧರ್ಮದ ಪಂಚಪೀಠಗಳಲ್ಲಿ ಒಂದಾದ ಕಾಶಿ ಪೀಠದ ಡಾ. ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು ಹೇಳಿದರು. 

ಕಾಶಿ ವಿಶ್ವನಾಥನ ಸ್ಪರ್ಶ ದರ್ಶನಕ್ಕೆ ಧೋತಿ-ಕುರ್ತಾ, ಸೀರೆ ಕಡ್ಡಾಯ?

ಸಿದ್ಧಾಂತ ಶಿಖಾಮಣಿಯನ್ನು ಶಿವಯೋಗಿ ಶಿವಾಚಾರ‍್ಯರು ಸಂಪಾದಿಸಿದ್ದು, ಜಗದ್ಗುರು ರೇಣುಕಾಚಾರ್ಯರ ಬೋಧನೆಗಳನ್ನು ಒಳಗೊಂಡಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ಯಡಿಯೂರಪ್ಪನವರು ಶನಿವಾರ ಸಂಜೆ ಬೆಂಗಳೂರಿನಿಂದ ವಾರಾಣಸಿಗೆ ತೆರಳಲಿದ್ದಾರೆ.

ಜ್ಯೋತಿರ್ಲಿಂಗ ದರ್ಶನ ರೈಲು:

ಕಾಶಿ ಭೇಟಿಯ ವೇಳೆ ಪ್ರಧಾನಿಯವರು 30 ವಿವಿಧ ಯೋಜನೆಗಳನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಇದೇ ವೇಳೆ ‘ಮಹಾಕಾಲ ಎಕ್ಸ್‌ಪ್ರೆಸ್‌’ ಪ್ರವಾಸಿ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ಈ ರೈಲು ಶಿವನ ಜ್ಯೋತಿರ್ಲಿಂಗ ಕ್ಷೇತ್ರಗಳಾದ ವಾರಾಣಸಿ, ಮಧ್ಯಪ್ರದೇಶದ ಉಜ್ಜಯಿನಿ ಹಾಗೂ ಓಂಕಾರೇಶ್ವರಗಳನ್ನು ಸಂಪರ್ಕಿಸಲಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇಂಡಿಗೋ ಸಿಇಒ ವಜಾಕ್ಕೆ ಕೇಂದ್ರ ಸೂಚನೆ ಸಾಧ್ಯತೆ
ಗುಲಾಮಿ ಮನಃಸ್ಥಿತಿ ಬಿಡಲು 2035ರ ಗಡುವು : ಮೋದಿ