
ನವದೆಹಲಿ(ಜು.26): ಕಾರ್ಗಿಲ್ ವಿಜಯ್ ದಿವಸ್ ಆಚರಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಅಗ್ನಿವೀರ ಯೋಜನೆ ಬಗ್ಗೆ ಕ್ಷುಲ್ಲಕ ರಾಜಕಾರಣ ಮಾಡುತ್ತಿದ್ದಾರೆ ಎಂದು ಶುಕ್ರವಾರ ಆರೋಪಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ಸೇನೆಯ ಇಚ್ಛೆಯ ಮೇರೆಗೆ ಸರ್ಕಾರ ಅಗ್ನಿಪಥ್ ಯೋಜನೆ ಜಾರಿಗೊಳಿಸಿದೆ ಎಂದು ನೀಡಿದ ಹೇಳಿಕೆ ಒಂದು ಕಟ್ಟಾ ಸುಳ್ಳು ಎಂದಿದ್ದಾರೆ.
ಟ್ವೀಟ್ ಮಾಡಿರುವ ಖರ್ಗೆ, ‘ಕಾರ್ಗಿಲ್ ವಿಜಯ್ ದಿವಸ್ನಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸುವ ಸಂದರ್ಭದಲ್ಲೂ ಪ್ರಧಾನಿ ನರೇಂದ್ರ ಮೋದಿ ಕ್ಷುಲ್ಲಕ ರಾಜಕಾರಣ ಮಾಡುತ್ತಿರುವುದು ದುರದೃಷ್ಟಕರ ಮತ್ತು ಖಂಡನೀಯ. "ಮೋದಿ ಅವರು ತಮ್ಮ ಸರ್ಕಾರವು ಸೇನೆಯ ಆಜ್ಞೆಯ ಮೇರೆಗೆ ಅಗ್ನಿಪಥ್ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಹೇಳುತ್ತಿದ್ದಾರೆ, ಇದು ಹಸಿ ಸುಳ್ಳು ಮತ್ತು ನಮ್ಮ ಧೀರ ಸಶಸ್ತ್ರ ಪಡೆಗಳಿಗೆ ಅಕ್ಷಮ್ಯ ಅವಮಾನ’ ಎಂದಿದ್ದಾರೆ.
2 ರಾಜ್ಯಕ್ಕೆ ತಟ್ಟೆ ತುಂಬಾ ಜಿಲೇಬಿ, ಪಕೋಡಾ, ಉಳಿದ ರಾಜ್ಯಗಳಿಗೆ ಖಾಲಿ ತಟ್ಟೆ: ಖರ್ಗೆ
‘ಮಾಜಿ ಸೇನಾ ಮುಖ್ಯಸ್ಥ ಜ।(ನಿವೃತ್ತ) ಎಂ.ಎಂ. ನರವಣೆ ಅವರು ಅಗ್ನಿಪಥ್ ಯೋಜನೆ ಅಡಿ ನೇಮಕವಾಗುವ ಶೇ.75 ಯೋಧರನ್ನು ಕಾಯಂ ಮಾಡಿ, ಉಳಿದ ಶೇ.25 ಯೋಧರನ್ನು ಕೈಬಿಡಬೇಕು ಎಂದಿದ್ದರು. ಆದರೆ ಮೋದಿ ಸರ್ಕಾರ ಇದಕ್ಕೆ ವ್ಯತಿರಿಕ್ತವಾಗಿ ನಡೆದುಕೊಂಡಿದೆ. ಹೀಗಾಗಿ ಇದು ಆಘಾತಕಾರಿ ಯೋಜನೆ ಎಂದು ನರವಣೆ ತಮ್ಮ ಪುಸ್ತಕದಲ್ಲಿ ಹೇಳಿದ್ದಾರೆ. ಆದರೆ ಪುಸ್ತಕ ಮುದ್ರಣ ಆಗದಂತೆ ಮೋದಿ ಸರ್ಕಾರ ತಡೆದಿದೆ’ ಎಂದು ಖರ್ಗೆ ಆರೋಪಿಸಿದರು.
‘ನಾವು ಕೇವಲ 6 ತಿಂಗಳ ತರಬೇತಿಯಿಂದ ವೃತ್ತಿಪರ ಸೈನಿಕರನ್ನು ರೂಪಿಸುವುದು ಸಾಧ್ಯವೇ? ಸೈನಿಕರು ದೇಶಭಕ್ತಿಯಿಂದ ಸೇನೆಗೆ ಸೇರುತ್ತಾರೆಯೇ ಹೊರತು ಜೀವನೋಪಾಯಕ್ಕಾಗಿ ಅಲ್ಲ’ ಎಂದು ಖರ್ಗೆ ಪ್ರತಿಪಾದಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ