ಆತ್ಮನಿರ್ಭರ್ ಭಾರತಕ್ಕೆ ಕೈಜೋಡಿಸುವಂತೆ ವಿಜ್ಞಾನಿಗಳಿಗೆ ಕರೆ ನೀಡಿದ ಪ್ರಧಾನಿ ಮೋದಿ

Published : Oct 02, 2020, 08:21 PM IST
ಆತ್ಮನಿರ್ಭರ್ ಭಾರತಕ್ಕೆ ಕೈಜೋಡಿಸುವಂತೆ ವಿಜ್ಞಾನಿಗಳಿಗೆ ಕರೆ ನೀಡಿದ ಪ್ರಧಾನಿ ಮೋದಿ

ಸಾರಾಂಶ

ಭಾರತೀಯ ವೈಜ್ಞಾನಿಕ ಸಮ್ಮಿಟ್(ವೈಭವ್ ಸಮ್ಮಿಟ್) 2020 ಉದ್ಘಾಟಿಸಿದ ಮೋದಿ/ ಸಂಶೋಧಕರು, ವಿಜ್ಞಾನಿಗಳನ್ನುದ್ದೇಶಿ ಮೋದಿ ಭಾಷಣ/ ಮೋದಿ ಭಾಷಣದ ವಿವರ ಇಲ್ಲಿದೆ.

ನವದೆಹಲಿ(ಅ.02): ಸಾಮಾಜಿಕ ಆರ್ಥಿಕ ಹಾಗೂ ವೈಜ್ಞಾನಿಕ ಬದಲಾವಣೆಗಳಿಗೆ ವಿಜ್ಞಾನವು ಕೇಂದ್ರವಾಗಿದೆ. ವೈಜ್ಞಾನಿಕ ಸಂಶೋಧನೆ ಮತ್ತು ನಾವೀನ್ಯತೆಯನ್ನು ಹೆಚ್ಚಿಸಲು ಭಾರತ ಸರ್ಕಾರ ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ. ಇದೀಗ ಭಾರತದ ಹಾಗೂ ಭಾರತೀಯ ಮೂಲದ ವಿದೇಶಿ ವಿಜ್ಞಾನಿಗಳು ಭಾರತದ ಹಾಗೂ ವಿಶ್ವದ ಅಭಿವಿೃದ್ಧಿಗೆ ಕೈಜೋಡಿಸಬೇಕು. ಈ ಮೂಲಕ ಆತ್ಮನಿರ್ಭರ್ ಭಾರತ ಸಾಕಾರಕ್ಕೆ ನೆರವಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

#ModiAtUN:ಭಾರತವನ್ನು ಎಷ್ಟು ದಿನ ಹೊರಗಿಡುತ್ತೀರಿ? ವಿಶ್ವ ಸಂಸ್ಥೆಯಲ್ಲಿ ಗುಡುಗಿದ ಮೋದಿ!

ವರ್ಚುವಲ್ ಕಾರ್ಯಕ್ರಮದ ಮೂಲಕ ವೈಶ್ವಿಕ್ ಭಾರತೀಯ ವೈಜ್ಞಾನಿಕ ಸಮ್ಮಿಟ್(ವೈಭವ್ ಸಮ್ಮಿಟ್) 2020 ಉದ್ಘಾಟಿಸಿದ ಮೋದಿ, ಹೆಚ್ಚಿನ ಯುವಕರು ವಿಜ್ಞಾನದಲ್ಲಿ ಆಸಕ್ತಿಯನ್ನು ಬೆಳೆಸಿಕೊಳ್ಳುವುದನ್ನು ಇಂದಿನ ಅವಶ್ಯಕತೆಯಾಗಿದೆ. ಅದಕ್ಕಾಗಿ ನಾವು ಇತಿಹಾಸದ ವಿಜ್ಞಾನ ಮತ್ತು ವಿಜ್ಞಾನದ ಇತಿಹಾಸವನ್ನು ಚೆನ್ನಾಗಿ ತಿಳಿದಿರಬೇಕು ಎಂದರು.

 

ಕೊರೋನಾ ಕಳವಳ: ಜನರಿಗೆ ಸಲಹೆಗಳನ್ನ ಕೊಟ್ಟ ಪ್ರಧಾನಿ ಮೋದಿ.

ಈ ಸಮ್ಮಿಟ್ ಸಂಶೋಧನೆ ಹಾಗೂ ವಿಜ್ಞಾನ ಮನಸುಗಳ ಸಂಗಮವಾಗಿದೆ.  ರೈತರಿಗೆ ನೆರವಾಗುವ ಉನ್ನತ ದರ್ಜೆಯ ವೈಜ್ಞಾನಿಕ ಸಂಶೋಧನೆ ಅಗತ್ಯಗತ್ಯವಾಗಿದೆ. ಇದಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ.  ನಮ್ಮ ಕೃಷಿ ಸಂಶೋಧನಾ ವಿಜ್ಞಾನಿಗಳು  ದ್ವಿದಳ ಧಾನ್ಯಗಳ ಉತ್ಪಾದನೆಯನ್ನು ಹೆಚ್ಚಿಸಲು ಶ್ರಮಿಸಿದ್ದಾರೆ. ಇದರ ಪರಿಣಾಮ ನಾವು ದ್ವಿದಳ ದಾನ್ಯಗಳ ಆಮದು ಪ್ರಮಾಣ ಕಡಿಮೆಯಾಗಿದೆ. ಸಂಶೋಧನೆ ಹಾಗೂ ಟೆಕ್ನಾಲಜಿಯಿಂದ ನಮ್ಮ ಆಹಾರ-ಧಾನ್ಯ ಉತ್ಪಾದನೆ ಗರಿಷ್ಠ ಮಟ್ಟ ದಾಖಲೆ ಮುಟ್ಟಿದೆ ಎಂದು ಪ್ರಧಾನಿ ಹೇಳಿದರು. 

ಕೊರೋನಾ ವೈರಸ್ ವಿರುದ್ಧ ಹೋರಾಡಲು ಭಾರತ ಲಸಿಕೆ ಸಂಶೋಧನೆಯಲ್ಲಿ ತೊಡಗಿದೆ. ದೇಶದಲ್ಲಿ ಹೆಚ್ಚು ಹೆಚ್ಚು ಸಂಶೋಧನೆಗಳಾಗಬೇಕು ಈ ಮೂಲಕ ಭಾರತ ಹಾಗೂ ವಿಶ್ವವನ್ನೇ ಬೆಳಗಲು ಸಾಧ್ಯ ಎಂದು ಮೋದಿ ಹೇಳಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ತಿರುಪತಿ ತಿಮ್ಮಪ್ಪನಿಗೆ ಅಂಗವಸ್ತ್ರದ ಮೋಸ, ಪ್ಲಾಸ್ಟಿಕ್‌ ಸಿಲ್ಕ್‌ ಕೊಟ್ಟು 55 ಕೋಟಿ ಯಾಮಾರಿಸಿದ ಕಂಪನಿ!
ರಾಷ್ಟ್ರಪತಿಗಳು ಪದಕ ನೀಡುತ್ತಿದ್ದಂತೆ ಕೊರಳಿನಿಂದ ಕಿತ್ತೆಸೆದ ಬಾಲಕ! ವೈರಲ್ ವಿಡಿಯೋ ಹಿಂದಿನ ಸತ್ಯವೇನು?