ರಾಜ್ಯದ 4 ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ: ಆರೋಗ್ಯ ಭಾಗ್ಯ- ವೈದ್ಯಕೀಯ ಕ್ಷೇತ್ರಕ್ಕೆ ಭಾರಿ ಕೊಡುಗೆ

Published : Oct 30, 2024, 04:59 AM IST
ರಾಜ್ಯದ 4 ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ: ಆರೋಗ್ಯ ಭಾಗ್ಯ- ವೈದ್ಯಕೀಯ ಕ್ಷೇತ್ರಕ್ಕೆ ಭಾರಿ ಕೊಡುಗೆ

ಸಾರಾಂಶ

ಧನ್ವಂತರಿ ಜನ್ಮದಿನದಂದು ದೇಶದಲ್ಲಿ 12,850 ಕೋಟಿ ರು.ವೆಚ್ಚದಲ್ಲಿ ಆರೋಗ್ಯ ಕ್ಷೇತ್ರದ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದು, ಅದರಲ್ಲಿ ಕರ್ನಾಟಕದ ನಾಲ್ಕು ಯೋಜನೆಗಳೂ ಇವೆ. 

ನವದೆಹಲಿ (ಅ.30): ಧನ್ವಂತರಿ ಜನ್ಮದಿನದಂದು ದೇಶದಲ್ಲಿ 12,850 ಕೋಟಿ ರು.ವೆಚ್ಚದಲ್ಲಿ ಆರೋಗ್ಯ ಕ್ಷೇತ್ರದ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದು, ಅದರಲ್ಲಿ ಕರ್ನಾಟಕದ ನಾಲ್ಕು ಯೋಜನೆಗಳೂ ಇವೆ. ಆಯುಷ್ಮಾನ್‌ ಭಾರತ ಆರೋಗ್ಯ ಮೂಲಸೌಕರ್ಯ ಯೋಜನೆಯಡಿ ಕರ್ನಾಟಕ ಸೇರಿ ದೇಶದ 21 ಕಡೆ ಕ್ರಿಟಿಕಲ್‌ ಕೇರ್‌ ಬ್ಲಾಕ್‌ಗಳ ನಿರ್ಮಾಣಕ್ಕೆ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ರಾಜ್ಯದ ನಾಲ್ಕು ಯೋಜನೆಗಳು: ಬೆಂಗಳೂರಿನ ಬೊಮ್ಮಸಂದ್ರ ಹಾಗೂ ಕೋಲಾರ ತಾಲೂಕಿನ ನರಸಾಪುರದ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಿಸಲು ಉದ್ದೇಶಿಸಿರುವ 100 ಹಾಸಿಗೆಗಳ ಇಎಸ್‌ಐ ಆಸ್ಪತ್ರೆಯ ಕಟ್ಟಡ ಕಾಮಗಾರಿಗೆ ವರ್ಚುವಲ್ ವೇದಿಕೆ ಮೂಲಕ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಶಂಕುಸ್ಥಾಪನೆ ನೆರವೇರಿಸಿದರು. ಮಂಗಳೂರಿನ ವೆನ್ಲಾಕ್‌ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ 23.75 ಕೋಟಿ ರು.ಗಳಲ್ಲಿ ನಿರ್ಮಾಣಗೊಳ್ಳಲಿರುವ 50 ಹಾಸಿಗೆಗಳ ತೀವ್ರ ನಿಗಾ ಘಟಕ ಕಟ್ಟಡ (ಕ್ರಿಟಿಕಲ್‌ ಕೇರ್‌ ಬ್ಲಾಕ್‌)ಕ್ಕೆ ಶಿಲಾನ್ಯಾಸ ನೆರವೇರಿಸಿದರು. 

ರಾಯಚೂರಿನ ರಿಮ್ಸ್ ಬೋಧಕ ಆಸ್ಪತ್ರೆಯಲ್ಲಿ 50 ಹಾಸಿಗೆಯ ತೀವ್ರ ನಿಗಾ ಘಟಕಕ್ಕೂ ಶಂಕುಸ್ಥಾಪನೆ ನೆರವೇರಿಸಿದರು. ಇದೇ ವೇಳೆ, ಬೆಂಗಳೂರು ಸೇರಿ ಐದು ಕಡೆ ಉತ್ಪಾದನೆ ಆಧರಿತ ಪ್ರೋತ್ಸಾಹ ಯೋಜನೆಯಡಿ ವೈದ್ಯ ಸೇವೆ ಹಾಗೂ ಸಗಟು ಔಷಧ ಯೋಜನೆಗಳನ್ನು ಉದ್ಘಾಟಿಸಿದ್ದಾರೆ. ಇದಲ್ಲದೆ ಬೆಂಗಳೂರಿನ ಇಲ್ಲಿನ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಸೈನ್ಸ್‌ (ಐಐಎಸ್‌ಸಿ)ನಲ್ಲಿ ಆಯುಷ್‌ ಸಚಿವಾಲಯ ಪ್ರಾಯೋಜಿತ ‘ಮಧುಮೇಹ ಮತ್ತು ಮೆಟಬಾಲಿಕ್‌ ಸಂಡ್ರೋಮ್‌ಗೆ ಆಯುರ್ವೇದ’ ಎಂಬ ಉತ್ಕೃಷ್ಟತಾ ಕೇಂದ್ರಕ್ಕೂಮೋದಿ ಚಾಲನೆ ನೀಡಿದರು. 

ಚನ್ನಪಟ್ಟಣ ಕ್ಷೇತ್ರ ಉಪಚುನಾವಣೆ: ಸ್ಟಾರ್‌ವಾರ್ ಮಾತ್ರವಲ್ಲ ಕುಟುಂಬ ಕದನಕ್ಕೂ ಸಿದ್ಧ!

ಆಧುನಿಕ ಔಷಧವು ಪರಿಣಾಮಕಾರಿಯಾಗಿ ಚಿಕಿತ್ಸೆ ನೀಡುತ್ತಿದ್ದು, ಇನ್ನು ಉತ್ತಮ ಚಿಕಿತ್ಸೆಗಳನ್ನು ಒದಗಿಸಲು ಆಯುರ್ವೇದದಂತಹ ಪರ್ಯಾಯ ವಿಧಾನಗಳನ್ನು ಅನ್ವೇಷಿಸಲು ಆಸ್ತಕಿ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಪ್ರಾಚೀನ ವ್ಯವಸ್ಥೆಯು ಸಮಗ್ರ ಮಧುಮೇಹ ತಡೆಗಟ್ಟುವಿಕೆಯಲ್ಲಿ ನೈಸರ್ಗಿಕವಾಗಿ ಪರಿಹಾರ ಕಂಡುಕೊಳ್ಳುವಲ್ಲಿ ಸಂಶೋಧನೆಗಳು ಹೆಚ್ಚಲಿವೆ ಎಂದು ಕೇಂದ್ರೀಯ ಆಯುರ್ವೇದ ಸಂಶೋಧನಾ ಸಂಸ್ಥೆ ಹೇಳಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..