ಮನ್‌ ಕೀ ಬಾತ್‌ಗೆ ದಶಕದ ಸಂಭ್ರಮ: ಭಾವುಕರಾದ ಪ್ರಧಾನಿ ಮೋದಿ

Published : Sep 30, 2024, 07:42 AM IST
ಮನ್‌ ಕೀ ಬಾತ್‌ಗೆ ದಶಕದ ಸಂಭ್ರಮ: ಭಾವುಕರಾದ ಪ್ರಧಾನಿ ಮೋದಿ

ಸಾರಾಂಶ

ಪ್ರಧಾನಿ ಮೋದಿಯವರ ಮಾಸಿಕ ರೇಡಿಯೋ ಕಾರ್ಯಕ್ರಮ 'ಮನ್‌ ಕೀ ಬಾತ್‌' 10 ವರ್ಷ ಪೂರೈಸಿದ ಸಂದರ್ಭದಲ್ಲಿ, ಧನಾತ್ಮಕ ಕಥೆಗಳಿಗೆ ಜನರ ಬೆಂಬಲ ದೊರೆತಿದೆ ಎಂದು ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ಸಮಾಜದ ವಿವಿಧ ವಿಷಯಗಳ ಬಗ್ಗೆ ಜನರೊಂದಿಗೆ ತಮ್ಮ ಅಭಿಪ್ರಾಯ ಹಂಚಿಕೊಳ್ಳಲು ಮತ್ತು ಜನರಿಂದ ಅಭಿಪ್ರಾಯ ಸಂಗ್ರಹಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಆರಂಭಿಸಿದ್ದ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್‌ ಕೀ ಬಾತ್‌’ಗೆ ಇದೀಗ ದಶಕದ ಸಂಭ್ರಮ.

2014ರಲ್ಲಿ ಪ್ರಧಾನಿ ಮೋದಿ ಕೇಂದ್ರದಲ್ಲಿ ಮೊದಲ ಬಾರಿಗೆ ಪ್ರಧಾನಿಯಾದ ವೇಳೆ ವಿಜಯದಶಮಿ ಅಂಗವಾಗಿ ಅ.3ರಂದು ಮೊದಲ ಮನ್‌ ಕೀ ಬಾತ್‌ನಲ್ಲಿ ಮಾತನಾಡಿದ್ದರು. ಇನ್ನೊಂದು ವಾರದಲ್ಲಿ (ಅ.3) ಮೊದಲ ಕಾರ್ಯಕ್ರಮಕ್ಕೆ 10 ವರ್ಷ ತುಂಬಲಿದೆ. ಇದುವರೆಗೂ ಒಟ್ಟು 114 ಕಾರ್ಯಕ್ರಮಗಳು ಪ್ರಸಾರವಾಗಿವೆ.

ಈ ಹಿನ್ನೆಲೆಯಲ್ಲಿ ಭಾನುವಾರ ಪ್ರಸಾರವಾದ ಸೆಪ್ಟೆಂಬರ್‌ ಮಾಸಿಕದ ಮನ್‌ ಕೀ ಬಾತ್‌ನಲ್ಲಿ ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. ‘ನಕರಾತ್ಮಕ ಸಂಭಾಷಣೆಗಳು ಮಾತ್ರ ಜನರ ಗಮನ ಸೆಳೆಯುತ್ತದೆ ಎನ್ನುವ ಮಾತನ್ನು ಮನ್‌ ಕೀ ಬಾತ್‌ ಸುಳ್ಳು ಮಾಡಿದೆ. ಈ ಸಂಚಿಕೆ ನನ್ನನ್ನು ಭಾವುಕವಾಗಿಸಿದೆ. ಹಳೆಯ ನೆನಪುಗಳ ಮಹಾಪೂರವೇ ಹರಿದು ಬರುತ್ತಿದೆ. ಮನ್‌ ಕೀ ಬಾತ್‌ 10 ವರ್ಷಗಳನ್ನು ಪೂರೈಸಿದೆ’ ಎಂದಿದ್ದಾರೆ.

ಕಬ್ಬನ್ ಪಾರ್ಕ್‌ನಲ್ಲಿ ಸಂಸ್ಕೃತ ಚರ್ಚೆಯ ಬಗ್ಗೆ ಮನ್ ಕೀ ಬಾತ್ ನಲ್ಲಿ ಮೋದಿ ಉಲ್ಲೇಖ

‘ದಶಕದ ಹಿಂದೆ ಅಕ್ಟೋಬರ್‌ 3 ವಿಜಯದಶಮಿಯಂದು ಮನ್‌ ಕೀ ಬಾತ್‌ ಆರಂಭವಾಗಿತ್ತು. ಈ ಪಯಣವನ್ನು ಎಂದಿಗೂ ಮರೆಯುವುದಕ್ಕೆ ಸಾಧ್ಯವಿಲ್ಲ. ಮಸಾಲೆ ಮಾತುಗಳು ನಕರಾತ್ಮಕ ಸಂಭಾಷಣೆಗಳು ಮಾತ್ರ ಜನರ ಗಮನ ಸೆಳೆಯುತ್ತದೆ ಎನ್ನುವ ಮಾತನ್ನು ಸುಳ್ಳಾಗಿಸಿ, ಜನರು ಸಕರಾತ್ಮಕ ಸಂದೇಶ, ಸ್ಫೂರ್ತಿದಾಯಕ ಮಾತುಗಳಿಗೆ ಎಷ್ಟು ಹಾತೊರೆಯುತ್ತಾರೆ ಎನ್ನುವುದು ಮನ್ ಕೀ ಬಾತ್‌ ಮೂಲಕ ಸಾಬೀತಾಗಿದೆ ಈ ಕಾರ್ಯಕ್ರಮ ದೇಶದ ಒಗ್ಗಟ್ಟಿನ ಬಲದ ಮತ್ತು ಭಾರತದ ಸ್ಪೂರ್ತಿಯ ಪ್ರತೀಕವಾಗಿ ಹೊರಹೊಮ್ಮಿದೆ.. ಈ ಕಾರ್ಯಕ್ರಮವನ್ನು 12 ವಿದೇಶಿ ಮತ್ತು 22 ಭಾರತೀಯ ಭಾಷೆಗಳಲ್ಲಿ ಆಲಿಸಬಹುದು’ ಎಂದರು.

ಪ್ರಧಾನಿ ಮೋದಿ ದೂರದೃಷ್ಟಿಯಿಂದ ದೇಶಕ್ಕೆ ಉತ್ತಮ ಭವಿಷ್ಯ: ಕೇಂದ್ರ ಸಚಿವ ವಿ.ಸೋಮಣ್ಣ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮನೆಯಲ್ಲಿ ಒಂದು ರೂಪಾಯಿ ಇಲ್ಲ ಆದ್ರೂ ಸಿಸಿಟಿವಿ ಯಾಕೆ ಹಾಕಿದ್ರಿ: ಸಿಕ್ಕಿದ್ದನ್ನು ದೋಚಿ ಪತ್ರ ಬರೆದಿಟ್ಟು ಹೋದ ಕಳ್ಳ
ಲೋಕಸಭೆಯಲ್ಲಿ ನೌಕರರ ಪರ ಮಸೂದೆ ಮಂಡನೆ: ಉದ್ಯೋಗಿಗಳ ಲೈಫ್​ ಜಿಂಗಾಲಾಲಾ- ಏನಿದೆ ಇದರಲ್ಲಿ?