ಭಾರತ ಜಾಗತಿಕ ಜ್ಞಾನ ಕೇಂದ್ರ ಆಗಬೇಕು: ಮೋದಿ

Published : Jun 20, 2024, 09:10 AM IST
ಭಾರತ ಜಾಗತಿಕ ಜ್ಞಾನ ಕೇಂದ್ರ ಆಗಬೇಕು: ಮೋದಿ

ಸಾರಾಂಶ

ಕ್ಯಾಂಪಸ್‌ನಲ್ಲಿ 40 ತರಗತಿ ಕೊಠಡಿಗಳೊಂದಿಗೆ ಎರಡು ಶೈಕ್ಷಣಿಕ ಬ್ಲಾಕ್‌ಗಳಿವೆ, ಒಟ್ಟು 1,900 ಆಸನ ಸಾಮರ್ಥ್ಯವಿದೆ. ಇದು ತಲಾ 300 ಆಸನಗಳ ಸಾಮರ್ಥ್ಯದ ಎರಡು ಸಭಾಂಗಣಗಳನ್ನು ಹೊಂದಿದೆ. ಇದು ಸುಮಾರು 550 ವಿದ್ಯಾರ್ಥಿಗಳ ಸಾಮರ್ಥ್ಯವನ್ನು ಹೊಂದಿರುವ ವಿದ್ಯಾರ್ಥಿ ಹಾಸ್ಟೆಲ್ ಅನ್ನು ಹೊಂದಿದೆ.

ಪಟನಾ: ಭಾರತವು ಜ್ಞಾನ ಮತ್ತು ಶಿಕ್ಷಣದ ಜಾಗತಿಕ ಕೇಂದ್ರವಾಗಬೇಕೆಂದು ಎಂಬುದು ನನ್ನ ಬಯಕೆ. ಅದಕ್ಕೆಂದೇ ದೇಶದ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಇನ್ನಷ್ಟು ಸುಧಾರಿತ ಮತ್ತು ಸಂಶೋಧನಾ ಕೇಂದ್ರಿತವಾಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ. ಭವಿಷ್ಯದಲ್ಲಿ ನಮ್ಮ ಯುವಕರು ಇಡೀ ಜಗತ್ತಿಗೆ ನಾಯಕತ್ವವನ್ನು ನೀಡುತ್ತಾರೆ ಎಂಬ ವಿಶ್ವಾಸ ನನಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಇಲ್ಲಿ ನೂತನ ನಳಂದಾ ವಿಶ್ವವಿದ್ಯಾನಿಲಯ ಕ್ಯಾಂಪಸ್ ಅನ್ನು ಉದ್ಘಾಟಿಸಿದ ಮಾತನಾಡಿದ ಮೋದಿ, ‘ನಳಂದವು ಭಾರತದ ಶೈಕ್ಷಣಿಕ ಪರಂಪರೆ ಮತ್ತು ರೋಮಾಂಚಕ ಸಾಂಸ್ಕೃತಿಕ ವಿನಿಮಯದ ಸಂಕೇತವಾಗಿದೆ. ಇದು ಕೇವಲ ಭಾರತದ ಗತಕಾಲದ ಪುನರುಜ್ಜೀವನವಲ್ಲ, ಆದರೆ ಅನೇಕ ದೇಶಗಳ ಪರಂಪರೆಯು ಈ ಸ್ಥಳಕ್ಕೆ ಸಂಬಂಧಿಸಿದೆ’ ಎಂದು ಹೇಳಿದರು.

‘ನಮ್ಮ ಸರ್ಕಾರವು ದೇಶದ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಹೆಚ್ಚು ಸುಧಾರಿತ ಮತ್ತು ಸಂಶೋಧನಾ-ಆಧರಿತವಾಗಿಸಲು ಕೆಲಸ ಮಾಡುತ್ತಿದೆ. ಕಳೆದ 10 ವರ್ಷಗಳಲ್ಲಿ ದೇಶದಲ್ಲಿ ಸರಾಸರಿ ಪ್ರತಿ ವಾರ ಒಂದು ವಿಶ್ವವಿದ್ಯಾನಿಲಯವು ಹುಟ್ಟಿಕೊಂಡಿದೆ. ವಿದ್ಯಾರ್ಥಿಗಳು ಯಾವಾಗಲೂ ಕುತೂಹಲಿಗಳಾಗಿರಬೇಕು ಮತ್ತು ಧೈರ್ಯದಿಂದ ಇರಬೇಕು’ ಎಂದು ಮೋದಿ ಹೇಳಿದರು. ಉದ್ಘಾಟನಾ ಸಮಾರಂಭದಲ್ಲಿ 17 ದೇಶಗಳ ಮಿಷನ್ ಮುಖ್ಯಸ್ಥರು ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿದ್ದರು.

ತಮಿಳುನಾಡಿನಲ್ಲಿ ಶೂನ್ಯ ಸಂಪಾದನೆಗೆ ಮೋದಿ ಕಣ್ಣೀರು: ಮುರಸೋಳಿ ವರದಿ

ನೂತನ ನಳಂದಾ ವಿವಿ ವೈಶಿಷ್ಟ್ಯ

1600 ವರ್ಷ ಹಿಂದೆ ಸ್ಥಾಪಿತವಾದ ನಳಂದಾ ವಿವಿಯನ್ನು 800 ವರ್ಷ ಹಿಂದೆ ದಾಳಿಕೋರರು ಧ್ವಂಸ ಮಾಡಿದ್ದರು. ಹೀಗಾಗಿ ಈ ವಿವಿಯನ್ನು ಮರುಸ್ಥಾಪಿಸುವ ಸಲುವಾಗಿ 2010 ರಲ್ಲಿ ನಳಂದಾ ವಿವಿ ಕಾಯ್ದೆಯ ಮೂಲಕ ವಿವಿಯನ್ನು ಸ್ಥಾಪಿಸಲಾಯಿತು ಮತ್ತು ಇದು 2014 ರಲ್ಲಿ ಕಾರ್ಯನಿರ್ವಹಿಸಲು ಪ್ರಾರಂಭಿಸಿತು. ಈಗ ಇದರ ಕ್ಯಾಂಪಸ್‌ 455 ಎಕರೆ ಪ್ರದೇಶದಲ್ಲಿ 1749 ಕೋಟಿ ರು. ವೆಚ್ಚದಲ್ಲಿ ತಲೆ ಎತ್ತಿದೆ.

ಕ್ಯಾಂಪಸ್‌ನಲ್ಲಿ 40 ತರಗತಿ ಕೊಠಡಿಗಳೊಂದಿಗೆ ಎರಡು ಶೈಕ್ಷಣಿಕ ಬ್ಲಾಕ್‌ಗಳಿವೆ, ಒಟ್ಟು 1,900 ಆಸನ ಸಾಮರ್ಥ್ಯವಿದೆ. ಇದು ತಲಾ 300 ಆಸನಗಳ ಸಾಮರ್ಥ್ಯದ ಎರಡು ಸಭಾಂಗಣಗಳನ್ನು ಹೊಂದಿದೆ. ಇದು ಸುಮಾರು 550 ವಿದ್ಯಾರ್ಥಿಗಳ ಸಾಮರ್ಥ್ಯವನ್ನು ಹೊಂದಿರುವ ವಿದ್ಯಾರ್ಥಿ ಹಾಸ್ಟೆಲ್ ಅನ್ನು ಹೊಂದಿದೆ. ಇದು ಅಂತಾರಾಷ್ಟ್ರೀಯ ಕೇಂದ್ರ, 2000 ವ್ಯಕ್ತಿಗಳಿಗೆ ಅವಕಾಶ ಕಲ್ಪಿಸುವ ಆಂಫಿಥಿಯೇಟರ್, ಅಧ್ಯಾಪಕರ ಕ್ಲಬ್ ಮತ್ತು ಕ್ರೀಡಾ ಸಂಕೀರ್ಣ ಸೇರಿದಂತೆ ಹಲವಾರು ಇತರ ಸೌಲಭ್ಯಗಳನ್ನು ಹೊಂದಿದೆ. ಸೌರ ಸ್ಥಾವರ, ನೀರಿನ ಸಂಸ್ಕರಣಾ ಘಟಕಗಳು, ತ್ಯಾಜ್ಯ ನೀರು ಮರುಬಳಕೆ ಘಟಕ, 100 ಎಕರೆ ಜಲಮೂಲವನ್ನೂ ಹೊಂದಿದೆ.

ನಾನು ಗಂಗಾಮಾತೆಯ ದತ್ತುಪುತ್ರ: ಗಂಗೆ, ವಿಶ್ವನಾಥರೇ ನನ್ನನ್ನು ಆಶೀರ್ವದಿಸಿದ್ದಾರೆ: ಪ್ರಧಾನಿ ಮೋದಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

India Latest News Live: ಭಾರತ-ಆಫ್ರಿಕಾ ಫೈನಲ್ ಫೈಟ್ - ಟೆಸ್ಟ್ ಸೋಲಿಗೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಡಿಕೆಗೆ ದಿಲ್ಲಿ ಪೊಲೀಸ್‌ ನೋಟಿಸ್‌