ಇರಾನ್‌ ಅಧ್ಯಕ್ಷರ ಜೊತೆ ಮೋದಿ ಮಾತುಕತೆ, ಇಸ್ರೇಲ್‌-ಹಮಾಸ್ ಯುದ್ಧದ ಕುರಿತು ಚರ್ಚೆ!

Published : Nov 06, 2023, 10:08 PM IST
ಇರಾನ್‌ ಅಧ್ಯಕ್ಷರ ಜೊತೆ ಮೋದಿ ಮಾತುಕತೆ, ಇಸ್ರೇಲ್‌-ಹಮಾಸ್ ಯುದ್ಧದ ಕುರಿತು ಚರ್ಚೆ!

ಸಾರಾಂಶ

ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಮರುಸ್ಥಾಪಿಸುವ ಗುರಿಗಾಗಿ ಶ್ರಮಿಸುತ್ತಿರುವ ಮೋದಿ ಮತ್ತು ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ, ಯುದ್ಧ ಇನ್ನಷ್ಟು ಹೆಚ್ಚಾಗುವುದನ್ನು ತಪ್ಪಿಸುವ ವಿಧಾನಗಳ ಬಗ್ಗೆ ಚರ್ಚಿಸಿದರು.

ನವದೆಹಲಿ (ನ.6): ಇಸ್ರೇಲ್ ಮತ್ತು ಹಮಾಸ್ ನಡುವೆ ನಡೆಯುತ್ತಿರುವ ಸಂಘರ್ಷದ ಕುರಿತು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರೊಂದಿಗೆ ಮಾತನಾಡಿದರು. ಸಂಘರ್ಷದ ಪರಿಣಾಮವಾಗಿ ಪಶ್ಚಿಮ ಏಷ್ಯಾದಲ್ಲಿನ ಸವಾಲಿನ ಸಂದರ್ಭಗಳ ಕುರಿತು ನಾಯಕರು ತಮ್ಮ ವಿಚಾರಗಳನ್ನು ಹಂಚಿಕೊಂಡಿದ್ದಾರೆ.  ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಮರುಸ್ಥಾಪಿಸುವ ಗುರಿಯೊಂದಿಗೆ, ಮೋದಿ ಮತ್ತು ರೈಸಿ ಯುದ್ಧ ಮತ್ತಷ್ಟು ಉಲ್ಬಣಗೊಳ್ಳುವುದನ್ನು ತಡೆಯುವ ಕಾರ್ಯತಂತ್ರಗಳನ್ನು ಚರ್ಚಿಸಿದರು.
ಎಕ್ಸ್‌ನಲ್ಲಿ ಪ್ರಧಾನಿ ಮೋದಿ ಈ ಬಗ್ಗೆ ಬರೆದುಕೊಂಡಿದ್ದಾರೆ. "ಪಶ್ಚಿಮ ಏಷ್ಯಾದಲ್ಲಿನ ಕಠಿಣ ಪರಿಸ್ಥಿತಿ ಮತ್ತು ಇಸ್ರೇಲ್-ಹಮಾಸ್ ಸಂಘರ್ಷದ ಕುರಿತು ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರೊಂದಿಗೆ ಉತ್ತಮ ದೃಷ್ಟಿಕೋನಗಳ ವಿನಿಮಯವಾಗಿದೆ. ಭಯೋತ್ಪಾದಕ ಘಟನೆಗಳು, ಹಿಂಸಾಚಾರ ಮತ್ತು ನಾಗರಿಕ ಜೀವಗಳ ನಷ್ಟವು ಗಂಭೀರ ಕಳವಳಕಾರಿಯಾಗಿದೆ. ಉಲ್ಬಣಗೊಳ್ಳುವುದನ್ನು ತಡೆಗಟ್ಟುವುದು, ನಿರಂತರ ಮಾನವೀಯ ನೆರವು ಮತ್ತು ಶಾಂತಿ ಮತ್ತು ಸ್ಥಿರತೆಯ ಆರಂಭಿಕ ಮರುಸ್ಥಾಪನೆಯನ್ನು ಖಾತ್ರಿಪಡಿಸುವುದು ಮುಖ್ಯವಾಗಿದೆ. ಚಬಹಾರ್ ಬಂದರು ಸೇರಿದಂತೆ ನಮ್ಮ ದ್ವಿಪಕ್ಷೀಯ ಸಹಕಾರದಲ್ಲಿನ ಪ್ರಗತಿಯನ್ನು ಸ್ವಾಗತಿಸುತ್ತೇವೆ' ಎಂದು ಮೋದಿ ಬರೆದಿದ್ದಾರೆ.

ಇದಕ್ಕೂ ಮೊದಲು, ಪ್ರಧಾನಿ ಮೋದಿ ಅವರು ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಅವರೊಂದಿಗೆ ಮಾತನಾಡಿದ್ದರು ಮತ್ತು ಗಾಜಾ ಪಟ್ಟಿಯಲ್ಲಿ ಹೆಚ್ಚುತ್ತಿರುವ ಇಸ್ರೇಲಿ ಮಿಲಿಟರಿ ಕಾರ್ಯಾಚರಣೆಯ ಅಪಾಯಗಳ ಬಗ್ಗೆ ಚರ್ಚಿಸಿದರು. ಇಸ್ರೇಲ್ ಮತ್ತು ಹಮಾಸ್ ನಡುವೆ ನಡೆಯುತ್ತಿರುವ ಯುದ್ಧದಿಂದ ಉಂಟಾದ ಅಪಾಯಗಳ ಕುರಿತು ಉಭಯ ನಾಯಕರು ತಮ್ಮ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಪ್ರಧಾನಿಯವರು ಅಕ್ಟೋಬರ್ 23 ರಂದು ಜೋರ್ಡಾನ್‌ನ ಹಿಸ್ ಮೆಜೆಸ್ಟಿ ಕಿಂಗ್ ಅಬ್ದುಲ್ಲಾ II ಅವರೊಂದಿಗೆ ದೂರವಾಣಿ ಸಂಭಾಷಣೆಯನ್ನು ನಡೆಸಿದರು, ಅಲ್ಲಿ ಭಯೋತ್ಪಾದನೆ, ಹಿಂಸಾಚಾರ ಮತ್ತು ನಾಗರಿಕ ಜೀವಗಳ ನಷ್ಟದ ಬಗ್ಗೆ ಕಳವಳ ವ್ಯಕ್ತಪಡಿಸಿದರು.

ಅಕ್ಟೋಬರ್ 7 ರಂದು ಹಮಾಸ್ ನಡೆಸಿದ ಹಠಾತ್ ದಾಳಿಯಲ್ಲಿ ಸುಮಾರು 2,500 ಭಯೋತ್ಪಾದಕರು ಗಾಜಾ ಪಟ್ಟಿಯಿಂದ ಇಸ್ರೇಲ್‌ಗೆ ಗಡಿಯನ್ನು ಹೊಕ್ಕಿದ್ದರು. ಇದು ಸಾವುನೋವುಗಳಿಗೆ ಮತ್ತು ಒತ್ತೆಯಾಳುಗಳನ್ನು ವಶಪಡಿಸಿಕೊಳ್ಳಲು ಕಾರಣವಾಯಿತು. ಅಕ್ಟೋಬರ್ 7 ರಂದು ಹಮಾಸ್ 1,400 ಜನರನ್ನು ಹತ್ಯೆ ಮಾಡಿದರೆ. 240 ಕ್ಕೂ ಹೆಚ್ಚು ಒತ್ತೆಯಾಳುಗಳನ್ನು ಹಮಾಸ್‌ ವಶಪಡಿಸಿಕೊಂಡಿದೆ.

ಉಗ್ರರಿಗೆ ಸಾವಿನ ಭಯ ಹುಟ್ಟಿಸಿದ ‘ಟೆಡ್ಡಿಬೇರ್’..! ಇಸ್ರೇಲ್‌ಗೆ ಆಪತ್ತು ಬಂದಾಗೆಲ್ಲ ರಕ್ಷಕನಾಗೋ ಡಿ9ಆರ್ !

ಇನ್ನೊಂದೆಡೆ ಇಸ್ರೇಲ್ ತನ್ನ ಗಾಜಾ ಆಕ್ರಮಣವನ್ನು ಹಮಾಸ್‌ನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡಿದೆ ಮತ್ತು ನಾಗರಿಕರ ಸಾವುನೋವುಗಳನ್ನು ಕಡಿಮೆ ಮಾಡುವ ಪ್ರಯತ್ನಗಳನ್ನು ಮಾಡುವಾಗ ಸಂಪೂರ್ಣ ಭಯೋತ್ಪಾದಕ ಗುಂಪನ್ನು ನಿರ್ಮೂಲನೆ ಮಾಡುವ ಗುರಿಯನ್ನು ಹೊಂದಿದೆ ಎಂದು ಟೈಮ್ಸ್ ಆಫ್ ಇಸ್ರೇಲ್ ವರದಿ ಮಾಡಿದೆ. ಏತನ್ಮಧ್ಯೆ, ಗಾಜಾದ ಆರೋಗ್ಯ ಅಧಿಕಾರಿಗಳು ಯುದ್ಧದ ಪ್ರಾರಂಭದಿಂದ 9,770 ಕ್ಕೂ ಹೆಚ್ಚು ಪ್ಯಾಲೆಸ್ಟೀನಿಯನ್ನರು ಸಾವು ಕಂಡಿದ್ದಾರೆ ಎಂದು ಹೇಳಿದರು.

ಗಾಜಾ ಮೇಲೆ ಪರಮಾಣು ಬಾಂಬ್ ಹಾಕೋದೂ ಒಂದು ಆಯ್ಕೆ ಎಂದ ಇಸ್ರೇಲ್‌ ಸಚಿವ: ಪ್ರಧಾನಿ ನೆತನ್ಯಾಹು ಹೇಳಿದ್ದೀಗೆ..

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!