ವಿಮಾನ ದುರಂತ ಸಾವಿನ ಸಂಖ್ಯೆ 12ಕ್ಕೆ, ಪಿಣರಾಯಿ ಜತೆ ಮಾತನಾಡಿದ ಮೋದಿ

Published : Aug 07, 2020, 10:44 PM ISTUpdated : Aug 07, 2020, 10:46 PM IST
ವಿಮಾನ ದುರಂತ ಸಾವಿನ ಸಂಖ್ಯೆ 12ಕ್ಕೆ, ಪಿಣರಾಯಿ ಜತೆ ಮಾತನಾಡಿದ ಮೋದಿ

ಸಾರಾಂಶ

ಕೇರಳ ವಿಮಾನ ದುರಂತ/ ಪರಿಹಾರ ಕಾರ್ಯದ ಮಾಹಿತಿ ಪಡೆದ ಪ್ರಧಾನಿ ಮೋದಿ/ ಕೇರಳ ಸಿಎಂ ವಿಜಯನ್ ಅವರಿಂದ ವಿವರಣೆ/ 12ಕಕ್ಕೆ ಏರಿದ ಸಾವಿನ ಸಂಖ್ಯೆ

ನವದೆಹಲಿ/ ಕೇರಳ(ಆ.07)  ಮಳೆ ಕಾರಣದಿಂದ ಕೇರಳದಲ್ಲಿ ವಿಮಾನ ದುರಂತ ಸಂಭವಿಸಿದ್ದು ಪರಿಹಾರ ಕಾರ್ಯ ನಡೆಯುತ್ತಿದೆ. ದುಬೈನಿಂದ ಕೋಯಿಕ್ಕೋಡ್‌ಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿದ್ದು ಪ್ರಧಾನಿ ನರೇಂದ್ರ ಮೋದಿ ವಿಷಾದ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಮೋದಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಕರೆ ಮಾಡಿ ಮಾತನಾಡಿದ್ದು, ಅಪಘಾತದ ವಿವರಣೆ ಪಡೆದಿದ್ದಾರೆ. ರಕ್ಷಣಾ ಕಾರ್ಯದ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.

ಎರಡು ಹೋಳಾಗಿ ಬಿದ್ದ ಏರ್ ಇಂಡಿಯಾ ವಿಮಾನ

ಕೋಯಿಕ್ಕೋಡ್ ಹಾಗೂ ಮಲಪ್ಪುರಂ ಜಿಲ್ಲಾಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದು, ರಕ್ಷಣಾ ಕಾರ್ಯಾಚರಣೆಯ ಕುರಿತು ನಿರಂತರ ಮಾಹಿತಿ ಪಡೆಯುತ್ತಿರುವುದಾಗಿ ಪಿಣರಾಯಿ ವಿಜಯನ್ ಮಾಹಿತಿ ನೀಡಿದ್ದಾರೆ. ಸಹಾಯವಾಣಿ ನಂಬರ್ ಗಳನ್ನು ನೀಡಲಾಗಿದೆ(056 546 3903, 0543090572, 0543090572, 0543090575)

ದುರಂತದಲ್ಲಿ ಗಾಯಗೊಂಡವರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು ಸಾವಿನ ಸಂಖ್ಯೆ  12ಕ್ಕೆ ಏರಿದೆ.  ವಿಮಾನ  ದುರಂತಕ್ಕೆಕೇಂದ್ರ ಸಚಿವ ಅಮಿತ್ ಶಾ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆದಿಯಾಗಿ ಅನೇಕರು ಖೇದ ವ್ಯಕ್ತಪಡಿಸಿದ್ದಾರೆ. ಗಾಯಗೊಂಡವರು ಚೇತರಿಸಿಕೊಳ್ಳಲಿ ಎಂದು ಪ್ರಾರ್ಥನೆ ಮಾಡಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ತಿರುಪತಿ ತಿಮ್ಮಪ್ಪನಿಗೆ ಅಂಗವಸ್ತ್ರದ ಮೋಸ, ಪ್ಲಾಸ್ಟಿಕ್‌ ಸಿಲ್ಕ್‌ ಕೊಟ್ಟು 55 ಕೋಟಿ ಯಾಮಾರಿಸಿದ ಕಂಪನಿ!
ರಾಷ್ಟ್ರಪತಿಗಳು ಪದಕ ನೀಡುತ್ತಿದ್ದಂತೆ ಕೊರಳಿನಿಂದ ಕಿತ್ತೆಸೆದ ಬಾಲಕ! ವೈರಲ್ ವಿಡಿಯೋ ಹಿಂದಿನ ಸತ್ಯವೇನು?