
ನವದೆಹಲಿ(ಜೂ, 29) ದೇಶ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ(ಜೂ. 30) ಮಧ್ಯಾಹ್ನ 4 ಗಂಟೆಗೆ ಮಾತನಾಡಲಿದ್ದಾರೆ. ಕೊರೋನಾ ಲಾಕ್ ಡೌನ್, ಅನ್ ಲಾಕ್ ಯಾವುದರ ಬಗ್ಗೆ ಮಾತನಾಡಲಿದ್ದಾರೆ ಎಂಬ ಕುತೂಹಲ ಮನೆ ಮಾಡಿದೆ.
ಇದೆಲ್ಲದರ ಮಧ್ಯೆ ಹೊಸ ಲಾಕ್ ಡೌನ್ ನಿಯಮ ಪ್ರಕಟವಾಗಿದೆ. ಶಾಲಾ, ಕಾಲೇಜು ಬಂದ್ ಇರುವುದನ್ನು ಜುಲೈ 31 ವರೆಗೂ ಮುಂದುವರಿಕೆ ಮಾಡಲಾಗಿದೆ. ಮೆಟ್ರೋ ನಿರ್ಬಂಧ, ಸಿನಿಮಾ, ಜಿಮ್ ಮೇಲೆ ನಿರ್ಬಂಧ ಸಹ ಮುಂದುವರಿಯಲಿದ್ದು ರಾತ್ರಿ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.
ಕರ್ನಾಟಕದಲ್ಲಿ ಮತ್ತೆ ಸಾವಿರ, ಬೆಂಗಳೂರಿನ ಕತೆ ಏನು?
ಕಂಟೈನ್ಮೆಂಟ್ ವಲಯಗಳಲ್ಲಿಯಥಾಸ್ಥಿತಿ ಜಾರಿಯಲ್ಲಿರಲಿದ್ದು ಅಗತ್ಯ ಚಟುವಟಿಕೆಗೆ ಮಾತ್ರ ಅನುಮತಿ ಸಿಕ್ಕಲಿದೆ. ರಾತ್ರಿ ಕರ್ಫ್ಯೂ ಸಮಯವನ್ನು ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ನಿಗದಿಪಡಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ