ಸಿಡಿಲಿನಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಮೋದಿ

Published : Jul 12, 2021, 02:32 PM ISTUpdated : Jul 12, 2021, 02:48 PM IST
ಸಿಡಿಲಿನಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಮೋದಿ

ಸಾರಾಂಶ

ಸಿಡಿಲಿನಿಂದ 40ಕ್ಕೂ ಹೆಚ್ಚು ಜನರು ಸಾವು ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ

ದೆಹಲಿ(ಜು.12): ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದ ಕೆಲವು ಭಾಗಗಳಲ್ಲಿ ಸಿಡಿಲಿನಿಂದ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಪರಿಹಾರ ಘೋಷಿಸಿದ್ದಾರೆ.

ಪಿಎಂ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ತಲಾ ₹ 2 ಲಕ್ಷ ಪರಿಹಾರ ನೀಡುವುದಾಗಿ ಮತ್ತು.ಮೂರು ರಾಜ್ಯಗಳಲ್ಲಿ ಮಿಂಚಿನಿಂದ ಗಾಯಗೊಂಡ ವ್ಯಕ್ತಿಗಳಿಗೆ ₹ 50,000 ಪರಿಹಾ ನೀಡಲಾಗುವುದು ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

20 ಜನ ಸಿಡಿಲಿಗೆ ಬಲಿ, ಇವರಲ್ಲಿ 11 ಜನರೂ ಸೆಲ್ಫೀ ತೆಗೀತಿದ್ರು..!

ಉತ್ತರ ಪ್ರದೇಶದ 11 ಜಿಲ್ಲೆಗಳಲ್ಲಿ ಭಾನುವಾರ ಸಂಭವಿಸಿದ ಪ್ರತ್ಯೇಕ ಮಿಂಚಿನ ಘಟನೆಗಳಲ್ಲಿ ಕನಿಷ್ಠ 40 ಜನರು ಸಾವನ್ನಪ್ಪಿದ್ದಾರೆ. ಕಾನ್ಪುರ ಮತ್ತು ಪಕ್ಕದ ಜಿಲ್ಲೆಗಳಲ್ಲಿ ಹದಿನೆಂಟು ಜನರು ಸಾವನ್ನಪ್ಪಿದ್ದರೆ, ಪ್ರಯಾಗರಾಜ್‌ನಲ್ಲಿ 14 ಜನರು ಸಾವನ್ನಪ್ಪಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೃತ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದು, ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ ಮೊತ್ತವನ್ನು ತಕ್ಷಣ ವಿತರಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಮಧ್ಯಪ್ರದೇಶದ ಕೆಲವು ಭಾಗಗಳಲ್ಲಿ ಭಾನುವಾರ ಸಂಭವಿಸಿದ ಮಿಂಚಿನಿಂದ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ. ಈ ಪೈಕಿ ಶಿಯೋಪುರ್ ಮತ್ತು ಗ್ವಾಲಿಯರ್ ಜಿಲ್ಲೆಗಳಲ್ಲಿ ತಲಾ ಇಬ್ಬರು ಸಾವನ್ನಪ್ಪಿದ್ದಾರೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

India Latest News Live: T20 World Cup - ಟೀಂ ಇಂಡಿಯಾಗೆ ಈ ಆಟಗಾರರ ನಿಜಕ್ಕೂ ಹೊರೆ! ನೀವೇನಂತೀರಾ?
ರಾಜ್ಯಗಳ ಜತೆ ಚರ್ಚಿಸಿಯೇ ಜಿ ರಾಮ್‌ ಜಿ ಜಾರಿ