ಕೊರೋನಾ ಆತಂಕ; ರಾಜ್ಯ ಹಾಗೂ ಜಿಲ್ಲಾ ಕ್ಷೇತ್ರ ಅಧಿಕಾರಿಗಳ ಜೊತೆ ಮೋದಿ ಸಂವಾದ!

Published : May 17, 2021, 08:02 PM IST
ಕೊರೋನಾ ಆತಂಕ; ರಾಜ್ಯ ಹಾಗೂ ಜಿಲ್ಲಾ ಕ್ಷೇತ್ರ ಅಧಿಕಾರಿಗಳ ಜೊತೆ ಮೋದಿ ಸಂವಾದ!

ಸಾರಾಂಶ

ಗ್ರಾಮೀಣ ಭಾಗದಲ್ಲಿ ಕೊರೋನಾ ಗಣನೀಯ ಏರಿಕೆ ಹಲವು ರಾಜ್ಯಗಳ  ಜಿಲ್ಲಾಧಿಕಾರಿಗಳ ಜೊತೆ ಮೋದಿ ಸಂವಾದ ಕರ್ನಾಟಕದ 17 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಚರ್ಚೆ

ನವದೆಹಲಿ(ಮೇ.17): ಕೊರೋನಾ ವೈರಸ್  ಇದೀಗ ಗ್ರಾಮೀಣ ಭಾಗಗಲ್ಲಿ ಹೆಚ್ಚಾಗುತ್ತಿದೆ. ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಆರೋಗ್ಯ ಮೂಲಕ ಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಸೂಕ್ತ ಚಿಕಿತ್ಸೆ, ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಚರ್ಚಿಸಲು ಪ್ರದಾನಿ ನರೇಂದ್ರ ಮೋದಿ ಮೇ. 18 ರಂದು ಕೊರೋನಾ ಹೆಚ್ಚಿರುವ ದೇಶದ ಹಲವು ರಾಜ್ಯ ಹಾಗೂ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಸಂವಾದ ನಡೆಸಲಿದ್ದಾರೆ.

ಕೊರೋನಾ ಸ್ಥಿತಿಗತಿ: ಕರ್ನಾಟಕದ 17 ಜಿಲ್ಲಾಧಿಕಾರಿಗಳ ಜೊತೆ ಪ್ರದಾನಿ ಮೋದಿ ಸಂವಾದ!.

ವಿವಿಧ ರಾಜ್ಯಗಳು ಮತ್ತು ಜಿಲ್ಲೆಗಳಲ್ಲಿ COVID 19 ವಿರುದ್ಧದ ಯುದ್ಧವನ್ನು ಕ್ಷೇತ್ರ ಮಟ್ಟದ ಅಧಿಕಾರಿಗಳು ಮುನ್ನಡೆಸುತ್ತಿದ್ದಾರೆ. ಕೆಲ ರಾಜ್ಯಗಳ ಜಿಲ್ಲೆಗಳಲ್ಲಿ ಕೊರೋನಾ ಇಳಿಕೆಯಾಗಿದೆ. ಆದರೆ ಹಲವು ಜಿಲ್ಲೆಗಳಲ್ಲಿ ಗಣನೀಯ ಏರಿಕೆ ಆತಂಕ ಹೆಚ್ಚಿಸಿದೆ. ಹೀಗೆ ಹೆಚ್ಚಾಗಿರುವ ಜಿಲ್ಲೆಗಳಲ್ಲಿ ಕರ್ನಾಟಕದ 17 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಮೋದಿ ಸಂವಾದ ನಡೆಸಲಿದ್ದಾರೆ. ಹೀಗಾಗಿ ಕೊರೋನಾ ಪ್ರಕರಣ ಸಂಖ್ಯೆ ಏರಿಕೆಯಾಗುತ್ತಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಮೋದಿ ಸಂವಾದ ನಾಳೆ ಬೆಳಗ್ಗೆ 11 ಗಂಟೆಗೆ ಸಂವಾದ ನಡೆಸಲಿದ್ದಾರೆ. 

ಕರ್ನಾಟಕದ ಸೇರಿದಂತೆ  ಬಿಹಾರ, ಅಸ್ಸಾಂ, ಚಂಡೀಗಢ,  ತಮಿಳುನಾಡು, ಉತ್ತರಾಖಂಡ,  ಗೋವಾ, ಹಿಮಾಚಲ ಪ್ರದೇಶ, ದೆಹಲಿಯ ಕೊರೋನಾ ಹೆಚ್ಚಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಮೋದಿ ಸಂವಾದ ನಡೆಸಲಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮನೆ ಮುಂದೆ ದನ ಸೆಗಣಿ ಹಾಕಿದ್ದಕ್ಕೆ ಯುವಕನ ಕೊಲೆ
ಗಂಡ ಉಳಿಯಲಿಲ್ಲ, ಎಗ್ಸಾಂ ಬರೆಯಲಿಲ್ಲ, ಕ್ಯಾನ್ಸಲ್ ಆಗಿದ್ದು ಬರೀ ಫ್ಲೈಟ್ ಅಲ್ಲ ನೂರಾರು ಮಂದಿ ಕನಸು