
ನವದೆಹಲಿ (ಡಿಸೆಂಬರ್ 11, 2023): ರಾಷ್ಟ್ರ ನಿರ್ಮಾಣದಲ್ಲಿ ಯುವ ಪೀಳಿಗೆಯನ್ನು ಸಕ್ರಿಯವಾಗಿ ತೊಡಗಿಸಿಕೊಂಡು 2047ರೊಳಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವಾಗಿ ಬದಲಿಸುವ ಗುರಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ‘ವಿಕಸಿತ ಭಾರತ@2047: ಯುವಕರ ಧ್ವನಿ’ ಎಂಬ ಅಭಿಯಾನಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ.
ಕಾರ್ಯಕ್ರಮದ ಅಂಗವಾಗಿ ದೇಶಾದ್ಯಂತ ರಾಜಭವನಗಳಲ್ಲಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಅದರಲ್ಲಿ ವಿಶ್ವವಿದ್ಯಾಲಯಗಳ ಕುಲಪತಿಗಳು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಬೋಧಕ ಸಿಬ್ಬಂದಿ ಭಾಗವಹಿಸಲಿದ್ದು, ಎಲ್ಲರನ್ನೂ ಉದ್ದೇಶಿಸಿ ಮೋದಿ ಭಾಷಣ ಮಾಡಲಿದ್ದಾರೆ ಎಂದು ಪ್ರಧಾನಮಂತ್ರಿಗಳ ಕಾರ್ಯಾಲಯ (ಪಿಎಂಒ) ಭಾನುವಾರ ಹೇಳಿಕೆಯಲ್ಲಿ ತಿಳಿಸಿದೆ.
ಇದನ್ನು ಓದಿ: ವಿಕಸಿತ ಭಾರತ ಸಂಕಲ್ಪ ಯಾತ್ರೆಯಿಂದ ಕೇಂದ್ರದ ಯೋಜನೆಗಳ ಪರಿಚಯ: ಸಚಿವ ನಾರಾಯಣಸ್ವಾಮಿ
ಈ ಕುರಿತು ಮಾಹಿತಿ ನೀಡಿರುವ ನೀತಿ ಆಯೋಗದ ಸಿಇಒ ಬಿ.ವಿ.ಆರ್. ಸುಬ್ರಹ್ಮಣ್ಯಂ, ‘2047ಕ್ಕೆ ದೇಶವನ್ನು 30 ಲಕ್ಷ ಕೋಟಿ ಡಾಲರ್ ಆರ್ಥಿಕತೆ ಮಾಡುವ ಗುರಿಯಿದೆ. ಇದನ್ನು ಸಾಧ್ಯವಾಗಿಸಲು ಅಗತ್ಯವಾದ ವಿಷನ್ ಡಾಕ್ಯುಮೆಂಟ್ (ದೂರದೃಷ್ಟಿ ವರದಿ) ಅನ್ನು ಸರ್ಕಾರ ಈಗಾಗಲೇ ಸಿದ್ಧಪಡಿಸಲಾಗುತ್ತಿದೆ. ಇದನ್ನು ಸ್ವತ: ಪ್ರಧಾನಿ ನರೇಂದ್ರ ಮೋದಿ ಅವರೇ 2024ರ ಜನವರಿಯಲ್ಲಿ ಬಿಡುಗಡೆಮಾಡಲಿದ್ದಾರೆ’ ಎಂದು ತಿಳಿಸಿದ್ದಾರೆ.
ಏನಿದು ಅಭಿಯಾನ?:
ರಾಷ್ಟ್ರೀಯ ಯೋಜನೆ, ಆದ್ಯತೆ ಹಾಗೂ ದೇಶದ ಗುರಿಗಳ ಸೃಷ್ಟಿಯ ವೇಳೆ ಯುವ ಪೀಳಿಗೆಯನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳುವ ಉದ್ದೇಶವನ್ನು ಈ ಅಭಿಯಾನ ಹೊಂದಿದೆ. ವಿಕಸಿತ ಭಾರತ@2047ಕ್ಕೆ ತಮ್ಮ ಆಲೋಚನೆಗಳನ್ನು ನೀಡಲು ಯುವಕರಿಗೆ ಇದು ವೇದಿಕೆಯಾಗಿ ಕೆಲಸ ಮಾಡಲಿದೆ. ಅವರ ಆಲೋಚನೆಗಳು ಹಾಗೂ ಸಲಹೆಗಳನ್ನು ಹಂಚಿಕೊಳ್ಳಲು ಕಾರ್ಯಾಗಾರ ಅತ್ಯಂತ ಮಹತ್ವದ ಹೆಜ್ಜೆಯಾಗಿದೆ. 2047ರೊಳಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವಾಗಿಸಲು ಈ ಸಲಹೆ, ಆಲೋಚನೆಗಳನ್ನು ಸ್ವೀಕರಿಸಲಾಗುತ್ತದೆ.
ಕೇಂದ್ರ ಸರ್ಕಾರದ ಯೋಜನೆಗಳ ಅರಿವು ಮೂಡಿಸಲು ರಥಯಾತ್ರೆ: ಸಂಸದ ಮುನಿಸ್ವಾಮಿ
ಏನು ಇದರ ಗುರಿ?
ವಿಕಸಿತ ಭಾರತ ಸಂಕಲ್ಪ ಯಾತ್ರೆ ಕೇಂದ್ರ ಸರ್ಕಾರದ ‘ಗ್ಯಾರಂಟಿ’: ರಾಜೀವ್ ಚಂದ್ರಶೇಖರ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ