ಯುದ್ಧ ಟ್ಯಾಂಕ್ ಸಮರ್ಪಣೆ, ಯೋಜನೆಗೆ ಅಡಿಪಾಯ; ಫೆ.14ಕ್ಕೆ ಕೇರಳ,ತಮಿಳುನಾಡಿಗೆ ಮೋದಿ!

Published : Feb 12, 2021, 07:45 PM IST
ಯುದ್ಧ ಟ್ಯಾಂಕ್ ಸಮರ್ಪಣೆ, ಯೋಜನೆಗೆ ಅಡಿಪಾಯ; ಫೆ.14ಕ್ಕೆ ಕೇರಳ,ತಮಿಳುನಾಡಿಗೆ ಮೋದಿ!

ಸಾರಾಂಶ

ಫೆಬ್ರವರಿ 14ರಂದು ಪ್ರಧಾನಿ ನರೇಂದ್ರ ಮೋದಿಗೆ ಕೇರಳ ಹಾಗೂ ತಮಿಳುನಾಡಿಗೆ ಭೇಟಿ ನೀಡುತ್ತಿದ್ದಾರೆ. ಅರ್ಜುನ ಯುದ್ಧ ಟ್ಯಾಂಕ್ ಸಮರ್ಪಣೆ ಹಾಗೂ ಹಲವು ಯೋಜನೆಗಳಿಗೆ ಅಡಿಪಾಯ ಹಾಕಲು ಮೋದಿ ದಕ್ಷಿಣ ಭಾರತದತ್ತ ಪ್ರಯಾಣ ಬೆಳೆಸಲಿದ್ದಾರೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.

ನವದೆಹಲಿ(ಫೆ.12):  ಪ್ರಧಾನಿ ನರೇಂದ್ರ ಮೋದಿ ಇದೇ ಫೆಬ್ರವರಿ 14 ರಂದು ಕೇರಳ ಹಾಗೂ ತಮಿಳುನಾಡು ಪ್ರವಾಸ ಕೈಗೊಳ್ಳಲಿದ್ದಾರೆ. ಕೇರಳದಲ್ಲಿ ಹಲವು ಯೋಜನೆಗಳಿಗೆ ಅಡಿಪಾಯ ಹಾಕಲಿರುವ ಮೋದಿ, ತಮಿಳುನಾಡಿನಲ್ಲಿ ರಾಷ್ಟ್ರಕ್ಕೆ ಯುದ್ಧಟ್ಯಾಂಕ್ ಸಮರ್ಪಿಸಲಿದ್ದಾರೆ. ಈ ಮೂಲಕ ರಾಜ್ಯದ ಬೆಳವಣಿಗೆ ಹೊಸ ವೇಗ ನಿಡಲಿದೆ. 

ನಮ್ಮ ಪ್ರಾರ್ಥನೆಗೆ ಸ್ಪಂದಿಸಿದ ಮೋದಿಗೆ ಧನ್ಯವಾದ; ಡೋಮಿನಿಕ ಪ್ರಧಾನಿ ಮನದಾಳ!.

ತಮಿಳುನಾಡು:
ತಮಿಳುನಾಡಿನಲ್ಲಿ ಪ್ರಧಾನಿ ಮೊದಲಿಗೆ 3,770 ಕೋಟಿ ರೂಪಾಯಿ ಮೊತ್ತದ ಚೆನ್ನೈ ಮೆಟ್ರೋ ವಿಸ್ತರಣೆ ಯೋಜನೆಗೆ ಅಡಿಪಾಯ ಹಾಕಲಿದ್ದಾರೆ. ಇನ್ನು ಚೆನ್ನೈ-ಅತ್ತಿಪಟ್ಟು ನಡುವಿನ ನಾಲ್ಕನೇ ರೈಲ್ವೇ ಯೋಜನೆಗೆ ಚಾಲನೆ ನೀಡಲಿದ್ದಾರೆ.  293.40 ಕೋಟಿ ರೂಪಾಯಿ ವೆಚ್ಚದಲ್ಲಿ 22.1 ಕಿ.ಮೀ ಉದ್ದದ ರೈಲು ಯೋಜನೆ ಇದಾಗಿದೆ.

ವಿಲ್ಲುಪುರಂ - ಕಡಲೂರು - ಮಯಿಲಾಡುತುರೈ - ತಂಜಾವೂರು ಮತ್ತು ಮಯಿಲಾಡುತುರೈ-ತಿರುವರೂರುಗಳಲ್ಲಿ ಸಿಂಗಲ್ ಲೈನ್ ವಿಭಾಗದ ರೈಲ್ವೆ ವಿದ್ಯುದ್ದೀಕರಣ ಯೋಜನೆ 423 ಕೋಟಿ ರೂಪಾಯಿ ವೆಚ್ಚದಲ್ಲಿ ಪೂರ್ಣಗೊಂಡಿದೆ.  ಇನ್ನು ಅರ್ಜುನ ಯುದ್ಧ ಟ್ಯಾಂಕ್ (MK-1A) ಸೇನೆಗೆ ಸಮರ್ಪಣೆ ಮಾಡಲಿದ್ದಾರೆ.

ವಿಪಕ್ಷ ನಾಯಕ ಗುಲಾಂ ನಬಿ ಆಜಾದ್ ಬಗ್ಗೆ ಮಾತನಾಡುತ್ತಾ ಭಾವುಕರಾದ ಮೋದಿ!

2640 ಕೋಟಿ ರೂಪಾಯಿ ವೆಚ್ಚದ ನೀರಾವರಿ ಯೋಜನೆ, 1,000 ಕೋಟಿ ರೂಪಾಯಿ ಐಐಟಿ ಕ್ಯಾಂಪಸ್ ಸೇರಿದಂತೆ ಹಲವು ಯೋಜನೆಗಳಿಗೂ ಮೋದಿ ಚಾಲನೆ ನೀಡಲಿದ್ದಾರೆ.

ಕೇರಳ:
BPCL ಪ್ರೊಪಿಲೀನ್ ಡೆರಿವೇಟಿವ್ ಪೆಟ್ರೋಕೆಮಿಕಲ್ ಪ್ರಾಜೆಕ್ಟ್‌ನ್ನು (PDPP) ಪ್ರಧಾನಿ  ಮೋದಿರಾಷ್ಟ್ರಕ್ಕೆ ಅರ್ಪಿಸಲಿದ್ದಾರೆ. ಈ ಸಂಕೀರ್ಣವು ಅಕ್ರಿಲೇಟ್‌ಗಳು, ಅಕ್ರಿಲಿಕ್ ಆಸಿಡ್ ಮತ್ತು ಆಕ್ಸೊ-ಆಲ್ಕೋಹಾಲ್ ಅನ್ನು ಉತ್ಪಾದಿಸುತ್ತದೆ . ಸದ್ಯ ಈ ಎಲ್ಲವನ್ನು ಭಾರತ ಆಮದು ಮಾಡಿಕೊಳ್ಳುತ್ತಿದೆ. ಈ ಯೋಜನೆಯಿಂದ ಆಮದು ನಿಲ್ಲಲಿದೆ. ಇಷ್ಟಚೇ ಅಲ್ಲ 3700 ರಿಂದ 4000 ಕೋಟಿ ಉಳಿತಾಯವಾಗುವ ನಿರೀಕ್ಷೆಯಿದೆ.

ಕೊಚ್ಚಿನ್‌ನ ವಿಲ್ಲಿಂಗ್ಡನ್ ದ್ವೀಪಗಳಲ್ಲಿ ರೋ-ರೋ ಹಡಗುಗಳನ್ನು ಪ್ರಧಾನಿ ರಾಷ್ಟ್ರಕ್ಕೆ ಅರ್ಪಿಸಲಿದ್ದಾರೆ. ಭಾರತದ ಅಂತರರಾಷ್ಟ್ರೀಯ ಜಲಮಾರ್ಗ ಪ್ರಾಧಿಕಾರವು ಬೊಲ್ಗಾಟ್ಟಿ ಮತ್ತು ವಿಲ್ಲಿಂಗ್ಡನ್ ದ್ವೀಪದ ನಡುವೆ ಎರಡು ಹೊಸ ರೋಲ್-ಆನ್ ಹಾಗೂ  ರೋಲ್-ಆಫ್ ಹಡಗುಗಳನ್ನು ರಾಷ್ಟ್ರೀಯ ಜಲಮಾರ್ಗ -3 ರಲ್ಲಿ ನಿಯೋಜಿಸಲಿದೆ.

ಇಂಟರ್ನ್ಯಾಷನಲ್ ಕ್ರೂಸ್ ಟರ್ಮಿನಲ್ ಸಾಗರಿಕಾ, ಮೆರೈನ್ ಎಂಜಿನಿಯರಿಂಗ್ ತರಬೇತಿ ಸಂಸ್ಥೆ, ವಿಜಯಾನ ಸಾಗರ್  ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್, ಕೊಚ್ಚಿನ್ ಬಂದರಿನಲ್ಲಿ ದಕ್ಷಿಣ ಕಲ್ಲಿದ್ದಲು ಘಚಕದ ಪುನರ್ನಿರ್ಮಾಣ ಸೇರಿದಂತೆ ಹಲವು ಯೋಜನೆಗಳಿಗೆ ಮೋದಿ ಚಾಲನೆ ನೀಡಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದೇಗುಲ ಪ್ರವೇಶಿಸುವುದಿಲ್ಲ ಎಂದ ಕ್ರಿಶ್ಚಿಯನ್ ಮಿಲಿಟರಿ ಅಧಿಕಾರಿಯ ಅಮಾನತು ಎತ್ತಿ ಹಿಡಿದ ಸುಪ್ರೀಂಕೋರ್ಟ್‌ ಹೇಳಿದ್ದೇನು?
ಇಂಡಿಗೋದ ಭಾರೀ ಕುಸಿತ: ಒಂದೇ ವಿಮಾನಯಾನ ಸಂಸ್ಥೆಯ ಏಕಸ್ವಾಮ್ಯವಾದಾಗ