ಮಕ್ಕಳಿಗೆ ಕೇಂದ್ರ ಸರ್ಕಾರದಿಂದ ಖಾತ್ರಿರಹಿತ 10 ಲಕ್ಷ ರು.ವರೆಗೆ ಶಿಕ್ಷಣ ಸಾಲ ಭಾಗ್ಯ!

Published : Nov 07, 2024, 06:27 AM IST
ಮಕ್ಕಳಿಗೆ ಕೇಂದ್ರ ಸರ್ಕಾರದಿಂದ ಖಾತ್ರಿರಹಿತ 10 ಲಕ್ಷ ರು.ವರೆಗೆ ಶಿಕ್ಷಣ ಸಾಲ ಭಾಗ್ಯ!

ಸಾರಾಂಶ

ಪ್ರತಿಭಾವಂತ ವಿದ್ಯಾರ್ಥಿಗಳಿಗೆ 7.5 ಲಕ್ಷ ರು.ನಿಂದ 10 ಲಕ್ಷ ರು.ವರೆಗೆ ಖಾತರಿರಹಿತ ಸಾಲದ ಆರ್ಥಿಕ ನೆರವು ನೀಡುವ ‘ಪಿಎಂ ವಿದ್ಯಾಲಕ್ಷ್ಮಿ ಯೋಜನೆ’ಗೆ ಬುಧವಾರ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. 

ನವದೆಹಲಿ (ನ.07): ಪ್ರತಿಭಾವಂತ ವಿದ್ಯಾರ್ಥಿಗಳಿಗೆ 7.5 ಲಕ್ಷ ರು.ನಿಂದ 10 ಲಕ್ಷ ರು.ವರೆಗೆ ಖಾತರಿರಹಿತ ಸಾಲದ ಆರ್ಥಿಕ ನೆರವು ನೀಡುವ ‘ಪಿಎಂ ವಿದ್ಯಾಲಕ್ಷ್ಮಿ ಯೋಜನೆ’ಗೆ ಬುಧವಾರ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದಕ್ಕಾಗಿ 3,600 ಕೋಟಿ ನಿಧಿಯನ್ನು ಮೀಸಲಿಡಲಾಗಿದೆ. ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ವಾರ್ತಾ ಸಚಿವ ಅಶ್ವಿನಿ ವೈಷ್ಣವ್‌, ‘ಆರ್ಥಿಕ ಸಮಸ್ಯೆಗಳಿಂದಾಗಿ ದೇಶದ ಯುವಕರು ಶಿಕ್ಷಣದಿಂದ ವಂಚಿತರಾಗುವ ಸಾಧ್ಯತೆ ಇರುತ್ತದೆ. ಆದರೆ ಇದನ್ನು ತಪ್ಪಿಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಕಾರ ನೀಡಲು ಈ ಯೋಜನೆ ರೂಪಿಸಲಾಗಿದೆ’ ಎಂದರು.

ಹೀಗಿದೆ ಯೋಜನೆ: ಗುಣಮಟ್ಟದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ (ಕ್ಯುಎಚ್‌ಇಐ) ಪ್ರವೇಶ ದೊರೆತ ವಿದ್ಯಾರ್ಥಿಗಳಿಗೆ, ತಮ್ಮ ತಮ್ಮ ಶೈಕ್ಷಣಿಕ ವೆಚ್ಚಗಳನ್ನು ಭರಿಸಲು ಕೊಲಾಟರಲ್‌ ರಹಿತ ಅಥವಾ ಖಾತರಿದಾರರಿಲ್ಲದೆ ಬ್ಯಾಂಕ್‌ ಹಾಗೂ ಆರ್ಥಿಕ ಸಂಸ್ಥೆಗಳಿಂದ ಸಾಲ ನೀಡಲಾಗುತ್ತದೆ. ಅಂದರೆ, ವಾರ್ಷಿಕ ₹8 ಲಕ್ಷಕ್ಕಿಂತ ಕಡಿಮೆ ಆದಾಯ ಗಳಿಸುವ ಪರಿವಾರದ ಹಾಗೂ ಯಾವುದೇ ಶಿಷ್ಯವೇತನ ಸೌಲಭ್ಯ ಪಡೆಯದ ವಿದ್ಯಾರ್ಥಿಗಳಿಗೆ 7.5 ಲಕ್ಷ ರು. ವರೆಗಿನ ಸಾಲದ ಶೇ.75ಕ್ಕೆ ಸರ್ಕಾರವೇ ಖಾತರಿ ಕೊಡಲಿದೆ. ಅಂತೆಯೇ, ₹8 ಲಕ್ಷಕ್ಕೂ ಅಧಿಕ ಆದಾಯವಿರುವ ಕುಟುಂಬದ ವಿದ್ಯಾರ್ಥಿಗಳಿಗೆ 10 ಲಕ್ಷ ರು. ವರೆಗಿನ ಸಾಲದ ಮೇಲೆ ಶೇ.3ರಷ್ಟು ಬಡ್ಡಿ ವಿನಾಯಿತಿ ನೀಡಲಾಗುವುದು.

ವಿದ್ಯಾರ್ಥಿಗಳು ಅರ್ಜಿ ಹೇಗೆ ಹಾಕಬೇಕು?: ಈ ಯೋಜನೆಗೆ ಅರ್ಜಿ ಸಲ್ಲಿಸಲು ಉನ್ನತ ಶಿಕ್ಷಣ ಇಲಾಖೆ ಏಕೀಕೃತ ಪೋರ್ಟಲ್‌ ಪರಿಚಯಿಸಲಿದೆ. 860 ಕ್ಯುಎಚ್‌ಇಐ ಸಂಸ್ಥೆಗಳ 22 ಲಕ್ಷ ವಿದ್ಯಾರ್ಥಿಗಳು ಇದರ ಲಾಭ ಪಡೆಯಲು ಸಮರ್ಥರಾಗಿದ್ದಾರೆ.ಯೋಜನೆಯ ಲಾಭ ಪಡೆಯುವವರ ಪಟ್ಟಿಯನ್ನು ಎನ್‌ಐಆರ್‌ಎಫ್‌ ರ್‍ಯಾಂಕಿಂಗ್‌ ಆಧರಿಸಿ ಪ್ರತಿ ವರ್ಷ ಪರಿಷ್ಕರಿಸಲಾಗುವುದು.

ಸಿದ್ದುಗೆ ತಾಕತ್ತಿದ್ದರೆ ಮುಡಾ ಪ್ರಕರಣ ಸಿಬಿಐ ತನಿಖೆಗೆ ವಹಿಸಲಿ: ಯಡಿಯೂರಪ್ಪ ಸವಾಲು

ಯಾರು ಅರ್ಹರು?
- ವಾರ್ಷಿಕ ₹8 ಲಕ್ಷಕ್ಕಿಂತ ಕಡಿಮೆ ಆದಾಯ ಗಳಿಸುವ ಕುಟುಂಬದ ಮಕ್ಕಳು ಅರ್ಹರು
- ಇವರು ಸರ್ಕಾರದಿಂದ ಬೇರಾವುದೇ ಶಿಷ್ಯವೇತನ ಸೌಲಭ್ಯ ಪಡೆಯುತ್ತಿರಬಾರದು
- 7.5 ಲಕ್ಷ ರು. ವರೆಗಿನ ಸಾಲದ ಶೇ.75ಕ್ಕೆ ಕೇಂದ್ರ ಸರ್ಕಾರವೇ ಖಾತರಿ ಕೊಡಲಿದೆ
- ₹8 ಲಕ್ಷಕ್ಕೂ ಅಧಿಕ ಆದಾಯವಿರುವ ಕುಟುಂಬದ ವಿದ್ಯಾರ್ಥಿಗಳಿಗೆ 10 ಲಕ್ಷ ರು. ವರೆಗಿನ ಸಾಲದ ಮೇಲೆ ಶೇ.3ರಷ್ಟು ಬಡ್ಡಿ ವಿನಾಯಿತಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಂಕೆ ಬಿಹಾರಿ ದೇಗುಲದಲ್ಲಿ ಶಾಲಿನ ಮೇಲೆ ಬಿತ್ತು ಚಿನ್ನದ ಉಂಗುರ: ಶ್ರೀಕೃಷ್ಣನ ಪ್ರತಿಮೆಯನ್ನೇ ಮದುವೆಯಾದ ಪಿಂಕಿ
'ವಂದೇ ಮಾತರಂ..' ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಶಕ್ತಿ ತುಂಬಿದ ಮಂತ್ರ ಎಂದ ಪ್ರಧಾನಿ ಮೋದಿ