
ಕೋಲ್ಕತಾ: ಐ ಪ್ಯಾಕ್ ಸಂಸ್ಥೆಯ ಮುಖ್ಯಸ್ಥ ಪ್ರತೀಕ್ ಜೈನ್ ಮನೆಯಿಂದ ದಾಖಲೆ ಸಂಗ್ರಹ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ವಿರುದ್ಧ ಕೋಲ್ಕತಾ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಭ್ರಷ್ಟಾಚಾರ ಆರೋಪದ ಪ್ರಕರಣದಡಿ ಜೈನ್ ಮನೆ, ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಅಲ್ಲಿಂದ ಕೆಲ ದಾಖಲೆ ಸಂಗ್ರಹಿಸಿದ್ದರು. ಆದರೆ ಇದು ರಾಜಕೀಯ ಪ್ರೇರಿತ ದಾಳಿ. ಪಕ್ಷದ ಮಹತ್ವದ ದಾಖಲೆಗಳನ್ನು ಅವರು ಕದ್ದೊಯ್ದಿದ್ದಾರೆ ಎಂದು ಸಿಎಂ ಮಮತಾ ಆರೋಪಿಸಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ದಾಖಲೆ ಸಂಗ್ರಹಿಸಿದ ಇ.ಡಿ. ಅಧಿಕಾರಿಗಳು ಯಾರು ಎಂಬ ಶೋಧಕ್ಕೆ ಇಳಿದಿದ್ದಾರೆ.
ಈ ನಡುವೆ ಐ ಪ್ಯಾಕ್ ಮೇಲಿಅನ ದಾಳಿ ಪ್ರಕರಣದಲ್ಲಿ ತನ್ನ ಅಭಿಪ್ರಾಯ ಆಲಿಸದೇ ಯಾವುದೇ ಆದೇಶ ಹೊರಡಿಸದಂತೆ ಕೋರಿ ಟಿಎಂಸಿ ಸುಪ್ರೀಂಕೋರ್ಟ್ನಲ್ಲಿ ಕೇವಿಯಟ್ ಸಲ್ಲಿಸಿದೆ. ಇದೇ ವೇಳೆ ತನಿಖೆಗೆ ಸಿಎಂ ಮಮತಾ ಅಡ್ಡಿ ಮಾಡಿದ ಆರೋಪದ ಪ್ರಕರಣದಲ್ಲಿ ಇ.ಡಿ ಅರ್ಜಿಯ ತುರ್ತು ವಿಚಾರಣೆಗೆ ಕಲ್ಕತಾ ಹೈಕೋರ್ಟ್ ಶನಿವಾರ ನಿರಾಕರಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ