
ತಿರುವನಂತಪುರಂ(ಜು.27): ಕೊರೋನಾ ಸೋಂಕಿತರಿಗೆ ಚಿಕಿತ್ಸೆ ಸಿಗುತ್ತಿಲ್ಲ ಅನ್ನೋ ಕೂಗು ಒಂದೆಡೆಯಾದರೆ, ಮತ್ತೊಂದೆಡೆ ಸೋಂಕಿತರ ಶವ ಸಂಸ್ಕಾರಕ್ಕೂ ಅಡ್ಡಿ ಆತಂಕ. ಹೀಗೆ ಕೇರಳದ ತಿರುವನಂತಪುರಂನಲ್ಲಿ ಸೋಂಕಿತನ ಶವ ಸಂಸ್ಕಾರಕ್ಕೆ ಅಡ್ಡಿ ಪಡಿಸಿದ ಸ್ಥಳೀಯ ಬಿಜೆಪಿ ಕೌನ್ಸಿಲ್ ಟಿಎನ್ ಹರಿಕುಮಾರ್ ಹಾಗೂ ಹಲವರ ಮೇಲೆ ಕೇಸ್ ದಾಖಲಾಗಿದೆ.
ಕೊರೋನಾ ಕಠೋರ; ಸಹೋದ್ಯೋಗಿಗಳು ಹಣ ಸಂಗ್ರಹಿಸಿ ನೀಡಿದರೂ ದೆಹಲಿ ಡಾಕ್ಟರ್ ಬದುಕಲಿಲ್ಲ
ಜಿಲ್ಲೆಯ 83 ವರ್ಷದ ವೃದ್ಧ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದರು. ಆಸ್ಪತ್ಬೆ ಹಾಗೂ ಜಿಲ್ಲಾಡಳಿತ ಸಿಬ್ಬಂದಿಗಳು ಮೃತ ಸೋಂಕಿನತನ ಶವ ಸಂಸ್ಕಾರ ಮಾಡಲು ಗ್ರಾಮದ ಚಿತಾಗಾರಕ್ಕೆ ತರಲಾಗಿತ್ತು. ಈ ವೇಳೆ ಇಲ್ಲಿ ಶವ ಸಂಸ್ಕಾರ ಮಾಡುವುದರಿಂದ ಸ್ಥಳೀಯರಿಗೆ ಕೊರೋನಾ ಹರಡಲಿದೆ ಎಂದು ಬಿಜೆಪಿ ಕೌನ್ಸಲರ್ ಹರಿಕುಮಾರ್ ಹಾಗೂ ಕೆಲ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.
ಮಾಸ್ಕ್ ಹಾಕದ ಮೇಕೆ ಬಂಧನ, ಪ್ರಾಣಿಗಳಿಗೂ ಇನ್ನು ಮುಂದೆ ಮಾಸ್ಕ್ ಕಡ್ಡಾಯ!?.
ತನ್ನ ಗಮನಕ್ಕೆ ತರದೆ ಹಾಗೂ ಸ್ಥಳೀಯರ ವಿಶ್ವಾಸಕ್ಕೆ ತೆಗೆದುಕೊಳ್ಳದೆ ಜಿಲ್ಲಾಡಳಿತ ಶವ ಸಂಸ್ಕಾರಕ್ಕೆ ಮುಂದಾಗಿದೆ. ಇದು ಸಾಧ್ಯವಿಲ್ಲ. ಕೊರೋನಾ ಮಾರ್ಗಸೂಚಿ ಉಲ್ಲಂಘಿಸಿ ಹಲವರನ್ನು ಒಗ್ಗೂಡಿಸಿದ ಕೌನ್ಸಿಲರ್ ಪ್ರತಿಭಟನೆ ನಡೆಸಿದ್ದಾರೆ. ಹೀಗಾಗಿ ಜಿಲ್ಲಾಡಳಿತ ಸಿಬ್ಬಂದಿಗಳು ಶವದೊಂದಿಗೆ ವಾಪಾಸ್ಸಾಗಿದ್ದರು. ಬಳಿಕ ರಾತ್ರಿ 11 ಗಂಟೆಗೆ ಪೊಲೀಸ್ ರಕ್ಷಣೆಯೊಂದಿಗೆ ಆಗಮಿಸಿ ಶವ ಸಂಸ್ಕಾರ ನೆರವೇರಿಸಿದ್ದಾರೆ.
ಕರ್ತವ್ಯಕ್ಕೆ ಅಡ್ಡಿ, ಕೊರೋನಾ ಮಾರ್ಗಸೂಚಿ ಉಲ್ಲಂಘನೆ, ಗ್ರಾಮಸ್ಥರಿಗೆ ತಪ್ಪು ಮಾಹಿತಿ ರವಾನೆ ಸೇರಿದಂತೆ ಹಲವು ಕಾರಣಗಳಿಗೆ ಬಿಜೆಪಿ ಕೌನ್ಸಿಲರ್ ಹರಿಕುಮಾರ್ ಹಾಗೂ ಇತರ ಕೆಲವರ ಮೇಲೆ ಕೇಸ್ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ