
ಕೋಲ್ಕತಾ (ಮೇ.30) ಪಶ್ಚಿಮ ಬಂಗಾಳದಲ್ಲಿ ಅಧಿಕಾರ ಕಳೆದುಕೊಂಡು ಟಿಎಂಸಿ ಹಾಗೂ ಟಿಎಂಸಿ ನಾಯಕರ ವಿರುದ್ಧ ಜನರು ಹಾದಿ ಬೀದಿಯಲ್ಲಿ ಆಕ್ರೋಶ ಹೊರಹಾಕುತ್ತಿದ್ದಾರೆ. ಚುನಾವಣೆ ಬಳಿಕ ನಡೆದ ಹಿಂಸಾಚಾರ ಪೀಡಿತ ಕುಟುಂಬಗಳ ಭೇಟಿಗೆ 24 ಪರಗಣ ಜಿಲ್ಲೆಗೆ ಅಭಿಷೇಕ್ ಬ್ಯಾನರ್ಜಿ ಭೇಟಿ ನೀಡಿದ ವೇಳೆ ಸ್ಥಳೀಯರು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಟಿಎಂಸಿ ಸಂಸದನ ಮೇಲೆ ಮೊಟ್ಟೆ, ಕಲ್ಲು ಎಸೆತಿದ್ದಾರೆ. ಚಪ್ಪಲಿಯಿಂದ ಹಲ್ಲೆಗೆ ಯತ್ನಿಸಿದ್ದಾರೆ. ಕಾಲಿನಿಂದ ಒದ್ದಿದ್ದಾರೆ. ಈ ಘಟನೆಯ ವಿಡಿಯೋಗಳು ಭಾರಿ ಸದ್ದು ಮಾಡುತ್ತಿದೆ. ಈ ಘಟನೆಗೆ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಕೆರಳಿ ಕೆಂಡವಾಗಿದ್ದಾರೆ. ಇದು ಪಶ್ಚಿಮ ಬಂಗಾಳದ ಬಿಜೆಪಿ ಗೂಂಡಾಗಳು ನಡೆಸಿದ ದಾಳಿ ಎಂದು ಆರೋಪಿಸಿದ್ದಾರೆ.
ಘಟನೆ ಬಳಿಕ ಮಾತನಾಡಿದ ಅಭಿಷೇಕ್ ಬ್ಯಾನರ್ಜಿ, ಬಿಜೆಪಿ ಗೂಂಡಾಗಳು ಈ ದಾಳಿ ಮಾಡಿದ್ದಾರೆ. ಅವರು ನನ್ನನ್ನು ಹತ್ಯೆ ಮಾಡಲು ಬಯಸಿದ್ದರು. ಭದ್ರತಾ ಪಡೆಗಳನ್ನು ದಾಟಿ ಬಂದು ಹಲ್ಲೆ ಮಾಡಿದ್ದಾರೆ. ಏಕಾಏಕಿ ಜನ ಸೇರಿದ್ದಾರೆ. ಸ್ಥಳೀಯರ ನಡುವಿನಲ್ಲಿ ನಿಂತು ಬಿಜೆಪಿ ಕಾರ್ಯಕರ್ತರು ಈ ಕೆಲಸ ಮಾಡಿದ್ದಾರೆ ಎಂದು ಸ್ವತಃ ಅಭಿಷೇಕ್ ಬ್ಯಾನರ್ಜಿ ಆರೋಪಿಸಿದ್ದಾರೆ.
ಅಭಿಷೇಕ್ ಬ್ಯಾನರ್ಜಿ ಮೇಲಿನ ದಾಳಿಯನ್ನು ಖಂಡಿಸಿರುವ ಟಿಎಂಸಿ ಪಾರ್ಟಿ, ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಬಿಜೆಪಿ ಕಾರ್ಯಕರ್ತರೇ ದಾಳಿ ಮಾಡುತ್ತಿದ್ದಾರೆ. ಪೊಲೀಸ್ ಭದ್ರತೆ ಇಲ್ಲ, ಯಾರ ಭಯವೂ ಇಲ್ಲದಾಗಿದೆ ಎಂದು ಟಿಎಂಸಿ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದೆ. ಈ ದಾಳಿ ವಿರುದ್ದ ಟಿಎಂಸಿ ಹೋರಾಟ ತೀವ್ರಗೊಳಿಸಲಿದೆ. ಇದು ಬಿಜೆಪಿಗೆ ಎಚ್ಚರಿಕೆ ಎಂದು ಸಂದೇಶ ರವಾನಿಸಿದೆ.
Stones hurled at TMC MP Abhishek Banerjee in South 24 Pargana during his visit to Sonarpur pic.twitter.com/X0uMa7hP77
— Indrajit Kundu | ইন্দ্রজিৎ (@iindrojit) May 30, 2026
ಅಭಿಷೇಕ್ ಬ್ಯಾನರ್ಜಿ ದಕ್ಷಿಣ ಸೋನಾಪುರದಲ್ಲಿ ಚುನಾವಣೋತ್ತರ ಹಿಂಸಾಚಾರದಲ್ಲಿ ಯುವಕನೊಬ್ಬ ಮೃತಪಟ್ಟಿದ್ದರೆ, ಹಲವರು ಗಾಯಗೊಂಡಿದ್ದರು. ಈ ಹಿಂಸಾಚಾರ ಪೀಡಿತ ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳುವ ಕಾರ್ಯಕ್ರಮವನ್ನು ಟಿಎಂಸಿ ಆಯೋಜಿಸಿತ್ತು. ಹೀಗಾಗಿ ಮನೆ ಭೇಟಿಗೆ ತೆರಳಿದಾಗ ಮಹಿಳೆಯರು ಸೇರಿದಂತೆ ಸ್ಥಳೀಯರು ಅಭಿಷೇಕ್ ಬ್ಯಾನರ್ಜಿ ಮೇಲೆ ದಾಳಿ ಮಾಡಿದ್ದಾರೆ. ಮಹಿಳೆಯರು ಕಳ್ಳ ಕಳ್ಳ ಎಂದು ಕೂಗಿದ್ದಾರೆ. ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡುತ್ತಿದ್ದಂತೆ ಹಲವರು ಮೊಟ್ಟೆ ಎಸೆದಿದ್ದಾರೆ. ಹಲ್ಲೆ ನಡೆಸಿದ್ದಾರೆ. ಅಭಿಷೇಕ್ ಬ್ಯಾನರ್ಜಿ ಮೇಲಿನ ಹಲ್ಲೆ ವಿಡಿಯೋಗಳು ಇದೀಗ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಕೋಲಾಹಲ ಸೃಷ್ಟಿಸಿದೆ.
#WATCH | Sonarpur, West Bengal: TMC MP Abhishek Banerjee says, "...They wanted to kill me... The whole incident has been captured on camera. We will definitely let the high court know about this. We will also let the governor know about this... I will definitely move to court..." https://t.co/MIZUJSZi3y pic.twitter.com/LWBApD95oC
— ANI (@ANI) May 30, 2026
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ