ಮೋದಿಗೆ ಎದುರಾಳಿ ಸೃಷ್ಟಿ?: ಪವಾರ್‌- ಪ್ರಶಾಂತ್‌ ಕಿಶೋರ್ ಚರ್ಚೆ, ಭಾರೀ ಸಂಚಲನ!

Published : Jun 12, 2021, 07:55 AM IST
ಮೋದಿಗೆ ಎದುರಾಳಿ ಸೃಷ್ಟಿ?: ಪವಾರ್‌- ಪ್ರಶಾಂತ್‌ ಕಿಶೋರ್ ಚರ್ಚೆ, ಭಾರೀ ಸಂಚಲನ!

ಸಾರಾಂಶ

* ಶರದ್ ಪವಾರ್ ಭೇಟಿಯಾದ ಚುನಾವಣಾ ತಂತ್ರಗಾರ ಪ್ರಶಾಂತ್‌ ಕಿಶೋರ್ * ಮೋದಿಗೆ ಎದುರಾಳಿ ಸೃಷ್ಟಿಬಗ್ಗೆ ಚರ್ಚೆ? * 3 ತಾಸು ಸುದೀರ್ಘ ಸಮಾಲೋಚನೆ, ಭಾರೀ ಸಂಚಲನ

ಮುಂಬೈ(ಜೂ.12): ಚುನಾವಣಾ ತಂತ್ರಗಾರ ಪ್ರಶಾಂತ್‌ ಕಿಶೋರ್‌ ಅವರು ಮುಂಬೈನಲ್ಲಿ ಶುಕ್ರವಾರ ಎನ್‌ಸಿಪಿ ಪರಮೋಚ್ಚ ನಾಯಕ ಶರದ್‌ ಪವಾರ್‌ ಅವರನ್ನು ಭೇಟಿಯಾಗಿ 3 ತಾಸು ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ. ಇದು ರಾಜಕೀಯ ವಲಯದಲ್ಲಿ ಭಾರಿ ಸಂಚಲನಕ್ಕೆ ಕಾರಣವಾಗಿದೆ.

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್‌, ತಮಿಳುನಾಡು ಚುನಾವಣೆಯಲ್ಲಿ ಡಿಎಂಕೆ ಪರ ಚುನಾವಣೆ ತಂತ್ರಗಾರಿಕೆ ರೂಪಿಸಿ ಆ ಎರಡೂ ಪಕ್ಷಗಳ ಗೆಲುವಿನಲ್ಲಿ ಪ್ರಶಾಂತ್‌ ಕಿಶೋರ್‌ ಮಹತ್ತರ ಪಾತ್ರ ವಹಿಸಿದ್ದರು. ಅವರಿಗೆ ಪವಾರ್‌ ಭೋಜನ ಏರ್ಪಡಿಸಿದ್ದರು. ಈ ವೇಳೆ ಇಬ್ಬರ ನಡುವೆ 3 ತಾಸಸು ಸಮಾಲೋಚನೆ ನಡೆದಿದೆ. ಆದರೆ ಯಾವೆಲ್ಲಾ ವಿಷಯ ಚರ್ಚೆಯಾಗಿವೆ ಎಂಬುದು ಬಹಿರಂಗವಾಗಿಲ್ಲ.

2024ರ ಲೋಕಸಭೆ ಚುನಾವಣೆಗೆ ಇನ್ನು ಮೂರು ವರ್ಷವಿದೆ. ನರೇಂದ್ರ ಮೋದಿ ಅವರ ವಿರುದ್ಧ ಪ್ರತಿಪಕ್ಷಗಳ ಪಾಳೆಯದಿಂದ ಪ್ರಬಲ ಅಭ್ಯರ್ಥಿ ಆಯ್ಕೆ ಮಾಡುವ ಕುರಿತು ಮಾತುಕತೆ ನಡೆದಿರಬಹುದು ಎಂಬ ಬಗ್ಗೆ ಮಾತುಕತೆ ನಡೆದಿರಬಹುದು ಎನ್ನಲಾಗುತ್ತಿದೆ.

ತಾವು ಚುನಾವಣಾ ತಂತ್ರಗಾರಿಕೆ ಕೆಲಸ ತೊರೆಯುವುದಾಗಿ ಪಶ್ಚಿಮ ಬಂಗಾಳ ಚುನಾವಣೆ ಫಲಿತಾಂಶದ ಬಳಿಕ ಪ್ರಶಾಂತ್‌ ಕಿಶೋರ್‌ ಹೇಳಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇಂಡಿಗೋ ವಿಮಾನ ರದ್ದಾಗಿ ಪರದಾಡುತ್ತಿರುವ ಪ್ರಯಾಣಿಕರ ನೆರವಿಗೆ ಧಾವಿಸಿದ ಭಾರತೀಯ ರೈಲ್ವೆ
ಅಫೀಸ್‌ ಸಮಯ ಬಳಿಕ ಕರೆ-ಇಮೇಲ್ ಮಾಡಂಗಿಲ್ಲ, ಡಿಸ್‌ಕನೆಕ್ಟ್ ಬಿಲ್ ಲೋಕಸಭೆಯಲ್ಲಿ ಮಂಡನೆ