
ಪ್ರಯಾಗರಾಜ್(ಅ.20): ದೇಶದಲ್ಲಿ ನಡೆಯುತ್ತಿರುವ ಮತಾಂತರ ಮತ್ತು ಬಾಂಗ್ಲಾದೇಶದಿಂದ ವಲಸೆಗಾರರ ಒಳನುಸುಳುವಿಕೆಯಿಂದ ದೇಶದಲ್ಲಿ ಜನಸಂಖ್ಯಾ ಅಸಮಾನತೆ ಉಂಟಾಗುತ್ತಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ಎಸ್ಎಸ್)ದ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಬುಧವಾರ ಹೇಳಿದ್ದಾರೆ.
ಆರ್ಎಸ್ಎಸ್ನ 4 ದಿನದ ಕಾರ್ಯಕಾರಿ ಸಮಿತಿಯ ಸಭೆಯ ಬಳಿಕ ಮಾತನಾಡಿದ ಅವರು ಮತಾಂತರ ನಿಷೇಧ ಕಾಯ್ದೆಯನ್ನು ಕಠಿಣವಾಗಿ ಜಾರಿ ಮಾಡಬೇಕು ಎಂದು ಆಗ್ರಹಿಸಿದರು. ಆರ್ಎಸ್ಎಸ್ ಮತಾಂತರದ ಕುರಿತಾಗಿ ಅರಿವು ಮೂಡಿಸಲು ಪ್ರಯತ್ನಿಸುತ್ತಿದೆ. ಇಸ್ಲಾಂ ಮತ್ತು ಕ್ರೈಸ್ತ ಧರ್ಮಕ್ಕೆ ಮತಾಂತರ ಆದವರನ್ನು ಮರಳಿ ಹಿಂದೂ ಧರ್ಮಕ್ಕೆ ಕರೆತರಲಾಗುವುದು. ಧಾರ್ಮಿಕ ಮತಾಂತರವನ್ನು ತಡೆಗಟ್ಟಲು ಈಗಿರುವ ಕಾನೂನನ್ನು ಕಠಿಣವಾಗಿ ಜಾರಿ ಮಾಡಬೇಕು. ಪ್ರಸ್ತುತ ಉತ್ತರ ಪ್ರದೇಶದಲ್ಲಿ ಇದನ್ನು ಜಾರಿ ಮಾಡಲಾಗಿದೆ. ಬಲವಂತವಾಗಿ ಅದರಲ್ಲೂ ಮದುವೆಯ ಮೂಲಕ ಮತಾಂತರ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಹೇಳಿದರು.
ಬಡತನ, ನಿರುದ್ಯೋಗವೆಂಬ ರಾಕ್ಷಸರನ್ನು ಸಂಹರಿಸಬೇಕು: RSS ನಾಯಕ ದತ್ತಾತ್ರೇಯ ಹೊಸಬಾಳೆ
ಜನಸಂಖ್ಯಾ ಅಸಮಾನತೆಗೆ ವಲಸೆಗಾರರ ಒಳನುಸುಳುವಿಕೆ ಮತಾಂತರದ ಬಳಿಕ ಅತಿ ದೊಡ್ಡ ಸವಾಲಾಗಿದೆ. ಬಾಂಗ್ಲಾದೇಶದಿಂದ ಪುರ್ನಿಯಾ ಮತ್ತು ಕತಿಹಾರ್ ಸೇರಿದಂತೆ ಉತ್ತರ ಬಿಹಾರದ ಹಲವು ಜಿಲ್ಲೆಗಳು ಮತ್ತು ಇತರ ರಾಜ್ಯಗಳು ಇದಕ್ಕೆ ಸಾಕ್ಷಿಯಾಗಿದೆ ಎಂದು ಅವರು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ