ಗೋಡ್ಸೆಯನ್ನು ಮತ್ತೆ ‘ದೇಶಭಕ್ತ’ ಎಂದ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ!

Published : Nov 28, 2019, 08:20 AM IST
ಗೋಡ್ಸೆಯನ್ನು ಮತ್ತೆ ‘ದೇಶಭಕ್ತ’ ಎಂದ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ!

ಸಾರಾಂಶ

ಗೋಡ್ಸೆಯನ್ನು ಮತ್ತೆ ‘ದೇಶಭಕ್ತ’ ಎಂದ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ| ವಿವಾದ ಹುಟ್ಟುಹಾಕಿದ ಸಂಸದೆಯ ಹೇಳಿಕೆ

ನವದೆಹಲಿ[ನ.28]: ಮಹಾತ್ಮಾ ಗಾಂಧೀಜಿ ಅವರ ಹಂತಕ ನಾಥೂರಾಮ್‌ ಗೋಡ್ಸೆಯನ್ನು ಪುನಃ ‘ದೇಶಭಕ್ತ’ ಎಂದು ಕರೆದು ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್‌ ಠಾಕೂರ್‌ ವಿವಾದಕ್ಕೀಡಾಗಿದ್ದಾರೆ.

ಲೋಕಸಭೆಯಲ್ಲಿ ಬುಧವಾರ ಅವರು ಈ ರೀತಿ ಹೇಳಿದ್ದು, ಪ್ರತಿಪಕ್ಷಗಳ ಪ್ರತಿಭಟನೆಗೆ ಕಾರಣವಾಯಿತು. ಎಸ್‌ಪಿಜಿ ತಿದ್ದುಪಡಿ ಮಸೂದೆ ಚರ್ಚೆ ನಡೆಯುತ್ತಿರುವ ವೇಳೆ ಡಿಎಂಕೆ ಸಂಸದ ಎ. ರಾಜಾ ಅವರು, ‘ತಾನೇಕೆ ಗಾಂಧೀಜಿಯನ್ನು ಕೊಂದೆ’ ಎಂಬ ಬಗ್ಗೆ ಗೋಡ್ಸೆ ನೀಡಿದ ಹೇಳಿಕೆಯನ್ನು ಪ್ರಸ್ತಾಪಿಸಿದರು.

‘ಗಾಂಧಿಯ ಮೇಲೆ 32 ವರ್ಷದ ದ್ವೇಷವನ್ನು ತಾನು ಹೊಂದಿದ್ದೆ. ಹೀಗಾಗಿ ಅವರನ್ನು ಕೊಂದೆ’ ಎಂದು ಗೋಡ್ಸೆ ನೀಡಿದ ಹೇಳಿಕೆಯನ್ನು ಅವರು ಉದಾಹರಿಸಿದರು. ಆಗ ಮಧ್ಯಪ್ರವೇಶಿಸಿದ ಸಾಧ್ವಿ ಪ್ರಜ್ಞಾ, ‘ದೇಶಭಕ್ತನ ಉದಾಹರಣೆಯನ್ನು ನೀವು ನೀಡಲಾಗದು’ ಎಂದು ರಾಜಾ ಅವರನ್ನು ತಡೆದರು. ಆಗ ಸಿಡಿದೆದ್ದ ಪ್ರತಿಪಕ್ಷಗಳ ಸದಸ್ಯರು ಕೂಗಾಟ ಆರಂಭಿಸಿದರು.

ಬಿಜೆಪಿ ಸದಸ್ಯರೇ ಪರಿಸ್ಥಿತಿಯ ಸೂಕ್ಷ್ಮತೆ ಅರಿತು ಸಾಧ್ವಿ ಅವರನ್ನು ಸುಮ್ಮನೆ ಕೂರಿಸಿದರು. ಕಳೆದ ಲೋಕಸಭೆ ಚುನಾವಣೆ ವೇಳೆ ಕೂಡ ಸಾಧ್ವಿ ಅವರು ಗೋಡ್ಸೆಯನ್ನು ‘ದೇಶಭಕ್ತ’ ಎಂದು ಕರೆದು ವಿವಾದಕ್ಕೀಡಾಗಿದ್ದರು. ಈ ನಡುವೆ, ಸಾಧ್ವಿ ಮೇಲೆ ಬಿಜೆಪಿ ಶಿಸ್ತುಕ್ರಮ ಜರುಗಿಸಬೇಕು. ಇಲ್ಲದೇ ಹೋದರೆ ಬಿಜೆಪಿ ನೀತಿ ಕೂಡ ‘ಗೋಡ್ಸೆ ದೇಶಭಕ್ತ’ ಎಂದೇ ಆಗುತ್ತದೆ ಎಂದು ಕಾಂಗ್ರೆಸ್‌ ಹೇಳಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮೋದಿ-ಪುಟಿನ್ ಆರ್ಮರ್ಡ್ ಬದಲು ಸಾಮಾನ್ಯ ಟೊಯೋಟಾ ಫಾರ್ಚೂನ್ ಕಾರಿನಲ್ಲಿ ಪ್ರಯಾಣಿಸಿದ್ದೇಕೆ?
ರಾಜಮೌಳಿ-ಜೇಮ್ಸ್ ಕ್ಯಾಮರೂನ್ ಹೊಸ ಹೆಜ್ಜೆ, ನಟ ಮಹೇಶ್ ಬಾಬುಗೆ ಪ್ಯಾನ್ ವರ್ಲ್ಡ್ ಪಟ್ಟ..!