
ಬೆಂಗಳೂರು(ju.೦೮): ಕೇಂದ್ರ ಸಂಪುಟ ವಿಸ್ತರಣೆ ಬಳಿಕ ಆರು ಸಚಿವರು ರಾಜ್ಯವನ್ನು ಪ್ರತಿನಿಧಿಸಿದಂತಾದರೂ ಸಂಪುಟ ದರ್ಜೆ ಸ್ಥಾನಮಾನ ಹೊಂದಿದ್ದು ಪ್ರಹ್ಲಾದ್ ಜೋಶಿ ಮತ್ತು ನಿರ್ಮಲಾ ಸೀತಾರಾಮನ್ ಅವರಿಬ್ಬರು ಮಾತ್ರ.
"
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ರಾಜ್ಯದ ಮೂವರಿಗೆ ಸಚಿವ ಸ್ಥಾನ ಸಿಕ್ಕಿತ್ತು. ಈ ಪೈಕಿ ಪ್ರಹ್ಲಾದ್ ಜೋಶಿ ಮತ್ತು ಡಿ.ವಿ.ಸದಾನಂದಗೌಡ ಅವರಿಬ್ಬರು ಸಂಪುಟ ದರ್ಜೆ ಸ್ಥಾನಮಾನ ಹೊಂದಿದ್ದರು. ಮತ್ತೊಬ್ಬ ಸಚಿವ ಸುರೇಶ್ ಅಂಗಡಿ ಅವರು ರಾಜ್ಯ ಖಾತೆ ಸಚಿವರಾಗಿದ್ದರು. ತಮಿಳುನಾಡಿನಲ್ಲಿ ಜನಿಸಿದ್ದರೂ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾದ ನಿರ್ಮಲಾ ಸೀತಾರಾಮನ್ ಅವರೂ ಸಂಪುಟ ದರ್ಜೆ ಸ್ಥಾನಮಾನ ಹೊಂದಿದ್ದರು.
ಸುರೇಶ್ ಅಂಗಡಿ ಅವರು ಅಕಾಲಿಕವಾಗಿ ನಿಧನ ಹೊಂದಿದ ನಂತರ ಜೋಶಿ, ನಿರ್ಮಲಾ ಮತ್ತು ಸದಾನಂದಗೌಡ ಅವರಿಬ್ಬರೇ ಸಂಪುಟದಲ್ಲಿ ಮುಂದುವರೆದಿದ್ದರು. ಇದೀಗ ಸದಾನಂದಗೌಡರನ್ನು ಕೈಬಿಡಲಾಗಿದೆ. ಬದಲಿಗೆ ನಾಲ್ವರಾದ ಶೋಭಾ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್, ಎ.ನಾರಾಯಣಸ್ವಾಮಿ ಹಾಗೂ ಭಗವಂತ ಖೂಬಾ ಅವರಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ ಲಭಿಸಿದರೂ ರಾಜ್ಯ ಸಚಿವ ದರ್ಜೆ ಮಾತ್ರ. ಹೀಗಾಗಿ, ಕರ್ನಾಟಕದಿಂದ ಆರು ಸಚಿವರು ಕೇಂದ್ರದಲ್ಲಿದ್ದರೂ ಆಡಳಿತಾತ್ಮಕ ವಿಷಯಗಳಲ್ಲಿ ಪ್ರಮುಖ ಪಾತ್ರ ವಹಿಸಬಹುದಾದ ಸಂಪುಟ ದರ್ಜೆ ಸ್ಥಾನಮಾನ ಸಿಕ್ಕಿದ್ದು ಇಬ್ಬರಿಗೆ ಮಾತ್ರ ಎನ್ನುವಂತಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ