
ಕೋಲ್ಕತಾ(ಡಿ.22): ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಮಾತನಾಡುತ್ತಿದ್ದರೆ, ರಾಜ್ಯದಲ್ಲಿ ಆ ಪಕ್ಷ ಎರಡಂಕಿ ದಾಟಿದರೆ ತಾವು ತನ್ನ ಸ್ಥಾನ ತೊರೆಯುವುದಾಗಿ 2014ರಲ್ಲಿ ಮೋದಿ ಗೆಲುವಿನ ರಣತಂತ್ರ ರೂಪಿಸಿದ್ದ, ಹಾಲಿ ಮಮತಾ ಗೆಲ್ಲಿಸುವ ಹೊಣೆ ಹೊತ್ತಿರುವ ಪ್ರಶಾಂತ್ ಕಿಶೋರ್ ಸವಾಲು ಹಾಕಿದ್ದಾರೆ.
ಕೆಲವು ಮಾಧ್ಯಮಗಳು ಬಿಜೆಪಿಯನ್ನು ದೊಡ್ಡ ಮಟ್ಟದಲ್ಲಿ ಬಿಂಬಿಸುತ್ತಿವೆ. ಆದರೆ, ವಾಸ್ತವ ಸಂಗತಿ ಬೇರೆಯೇ ಇದೆ. ಬಿಜೆಪಿ ಒಂದಕಿ ದಾಟಲು ಕೂಡ ಕಷ್ಟಪಡಲಿದೆ. ಇದನ್ನು ನೆನಪಿನಲ್ಲಿ ಇಟ್ಟುಕೊಳ್ಳಿ ಎಂದು ಪ್ರಶಾಂತ್ ಕಿಶೋರ್ ಟ್ವೀಟ್ ಮಾಡಿದ್ದಾರೆ.
ಇದೇ ವೇಳೆ ಕಿಶೋರ್ ಟ್ವೀಟ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ, ಚುನಾವಣೆಯ ಬಳಿಕ ದೇಶ ಚುನಾವಣಾ ತಂತ್ರಗಾರನೊಬ್ಬನನ್ನು ಕಳೆದುಕೊಳ್ಳಲಿದೆ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ