
ನವದೆಹಲಿ(ಜೂನ್ 01) ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತಾನದ ನಡೆಯುತ್ತಿದೆ. 7ನೇ ಹಂತದ ಮತದಾನ ಅಂತ್ಯಗೊಳ್ಳುತ್ತಿದ್ದಂತೆ ಮತಗಟ್ಟೆ ಸಮೀಕ್ಷಾ ವರದಿಗಳು ಪ್ರಕಟಗೊಳ್ಳಲಿದೆ. ಇದೀಗ ಎಲ್ಲರ ಚಿತ್ತ ಎಕ್ಸಿಟ್ ಪೋಲ್ನತ್ತ ನೆಟ್ಟಿದೆ. ಸಂಜೆ 6.30ರ ಹೊತ್ತಿಗೆ ಎಕ್ಸಿಟ್ ಪೋಲ್ ವರದಿಗಳು ಬಹಿರಂಗೊಳ್ಳಲಿದೆ. ಇದಕ್ಕೂ ಕೆಲವೇ ಗಂಟೆ ಮುನ್ನ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಈ ಬಾರಿಯ ಲೋಕಸಭಾ ಚುನಾವಣೆ ಫಲಿತಾಂಶದ ಕುರಿತು ಭವಿಷ್ಯ ನುಡಿದಿದ್ದಾರೆ. ಈ ಬಾರಿ ಬಿಜೆಪಿ ಪಕ್ಷ ಹಾಗೂ ಬಿಜೆಪಿ ನಾಯಕರು ನಿರೀಕ್ಷಿದಷ್ಟು ಸ್ಥಾನ ಗೆಲ್ಲುವುದಿಲ್ಲ. 2019ರಂತೆ 303 ಅಥವಾ ಅದಕ್ಕಿಂತ ಸ್ವಲ್ಪ ಸ್ಥಾನ ಹೆಚ್ಚು ಗೆಲ್ಲು ಸಾಧ್ಯತೆ ಇದೆ ಎಂದಿದೆ.
ಲೋಕಸಭಾ ಚುನಾವಣೆ ಫಲಿತಾಂಶ ಕುರಿತು ಪ್ರಶಾಂತ್ ಕಿಶೋರ್ ನುಡಿದ ಭವಿಷ್ಯ ಪ್ರಕಾರ, ಉತ್ತರ ಹಾಗೂ ಪಶ್ಚಿಮ ಭಾರತದಲ್ಲಿ ಬಿಜೆಪಿಯ ಸ್ಥಾನಗಳಲ್ಲಿ ಹೆಚ್ಚಿನ ಬದಲಾವಣೆಗಳಿಲ್ಲ. ಇಲ್ಲಿ ಸ್ಥಾನ ಹೆಚ್ಚುಗಳಿಸುವ ಸಾಧ್ಯತೆಯೂ ಇಲ್ಲ ಎಂದಿದ್ದಾರೆ. ಆದರೆ ಈಶಾನ್ಯ ಭಾರತ ಹಾಗೂ ದಕ್ಷಿಣ ಭಾರತದಲ್ಲಿ ಬಿಜೆಪಿ ಸ್ಥಾನ ಹೆಚ್ಚಾಗಲಿದೆ. ಹೀಗಾಗಿ 303 ಅಥವಾ ಒಂದೆರಡು ಸ್ಥಾನ ಹೆಚ್ಚಿಗೆ ಗಳಿಸಬಹುದು ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.
ಲೋಕಸಭೆಗೆ ಇಂದು ಕೊನೆ ಹಂತದ ಮತದಾನ: ಇಂದು ಸಂಜೆ ಎಕ್ಸಿಟ್ಪೋಲ್
ತೆಲಂಗಾಣ, ಆಂಧ್ರ ಪ್ರದೇಶ, ತಮಿಳುನಾಡು ಹಾಗೂ ಕೇರಳದಲ್ಲಿ ಹೆಚ್ಚು ಗಮನಹರಿಸಿದ್ದ ಬಿಜೆಪಿಗೆ ಉತ್ತಮ ಸ್ಪಂದನೆ ವ್ಯಕ್ತವಾಗಲಿದೆ. ಇದು ದಕ್ಷಿಣ ಭಾರತದ ಸಂಖ್ಯೆ ಹೆಚ್ಚಿಗೆ ಕಾರಣವಾಗಲಿದೆ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.ಬಿಜೆಪಿಯ ಈ ಲೋಕಸಭಾ ಚುನಾವಣಾ ಘೋಷಣೆಯಂತೆ 400 ಸ್ಥಾನ ಸಾಧ್ಯತೆ ಕಡಿಮೆ ಎಂದಿದ್ದಾರೆ. ಎನ್ಡಿಎ ಕೂಟ 400 ಸ್ಥಾನ ಗೆಲ್ಲುವ ಸಾಧ್ಯತೆಗಳು ಕಡಿಮೆ. ಆದರೆ ಬಿಜೆಪಿ ಏಕಾಂಗಿಯಾಗಿ ಬಹುಮತ ಪಡೆಯಲಿದೆ. ಮೂರನೇ ಬಾರಿಗೆ ಮೋದಿ ಪ್ರಧಾನಿಯಾಗುವ ಎಲ್ಲಾ ಸಾಧ್ಯತೆಗಳಿವೆ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.
ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಆಡಳಿತ ವಿರೋಧಿ ಅಲೆ ಹೆಚ್ಚಾಗಿ ಇರಲಿಲ್ಲ. ಪ್ರಧಾನಿ ಮೋದಿ ವಿರುದ್ಧ ಅಸಮಾಧಾನ ಇರಬಹುದು. ಆದರೆ ದೇಶಾದ್ಯಂತ ಮೋದಿ ವಿರುದ್ಧ ಆಕ್ರೋಶ, ಆಡಳಿತ ವಿರೋಧಿ ಅಲೆ ಇರಲಿಲ್ಲ. ಪ್ರಧಾನಿ ಮೋದಿಗೆ ವಿರುದ್ಧ ಸಮರ್ಥ ನಾಯಕರ ಕೊರತೆಯೂ ಪ್ರತಿಪಕ್ಷಕ್ಕೆ ಎದುರಾಗಿತ್ತು. ಹೀಗಾಗಿ ಬಿಜೆಪಿ 2019ರಂತೆ ಈ ಬಾರಿಯೂ ಗೆಲುವು ದಾಖಲಿಸಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
ಬಿಜೆಪಿ, ಎಎಪಿ, ಕಾಂಗ್ರೆಸ್ ನಡುವೆ ಬಿಗ್ ಫೈಟ್, ಯಾರಾಗ್ತಾರೆ ದೆಹಲಿ ಸುಲ್ತಾನ?
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ