ಥ್ಯಾಂಕ್ಯೂ ದೆಹಲಿ: ಕೇಜ್ರಿವಾಲ್ ಅಭಿನಂದಿಸಿದ ಪ್ರಶಾಂತ್ ಕಿಶೋರ್!

Suvarna News   | Asianet News
Published : Feb 11, 2020, 01:46 PM IST
ಥ್ಯಾಂಕ್ಯೂ ದೆಹಲಿ: ಕೇಜ್ರಿವಾಲ್ ಅಭಿನಂದಿಸಿದ ಪ್ರಶಾಂತ್ ಕಿಶೋರ್!

ಸಾರಾಂಶ

ದೆಹಲಿ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭ| ಕ್ಷಣಕ್ಷಣಕ್ಕೂ ಬದಲಾಗುತ್ತಿರುವ ಮುನ್ನಡೆ ಅಂಕಿ ಅಂಶ| ಆಪ್ 58, ಬಿಜೆಪಿ 12, ಕಾಂಗ್ರೆಸ್ ಶೂನ್ಯ ಸ್ಥಾನದಲ್ಲಿ ಮುನ್ನಡೆ| ಕೇಜ್ರಿವಾಲ್ ಅಭಿನಂದಿಸಿದ ಪ್ರಶಾಂತ್ ಕಿಶೋರ್| ಆಪ್ ಗೆಲ್ಲಿಸಿದ್ದಕ್ಕೆ ದೆಹಲಿ ಮತದಾರರಿಗೆ ಪ್ರಶಾಂತ್ ಕಿಶೋರ್ ಅಭಿನಂದನೆ| 

ನವದೆಹಲಿ(ಫೆ.11): ದೆಹಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಆಡಳಿತಾರೂಢ ಆಪ್ ಮುನ್ನಡೆ ಕಾಯ್ದುಕೊಂಡಿದೆ. ಇದುವರೆಗೂ ಬಂದ ಅಂಕಿ ಅಂಶಗಳ ಪ್ರಕಾರ ಆಪ್ 58, ಬಿಜೆಪಿ 12, ಕಾಂಗ್ರೆಸ್ ಶೂನ್ಯ ಸ್ಥಾನದಲ್ಲಿ ಮುನ್ನಡೆ ಸಾಧಿಸಿವೆ.

ಇನ್ನು ಆಪ್ ಪಕ್ಷದ ಕೈ ಹಿಡಿದಿರುವ ದೆಹಲಿ ಮತದಾರರನ್ನು ಅಭಿನಂದಿಸಿರುವ ಜೆಡಿಯು ಉಚ್ಛಾಟಿತ ನಾಯಕ ಪ್ರಶಾಂತ್ ಕಿಶೋರ್, ಥ್ಯಾಂಕ್ಯೂ ದೆಹಲಿ ಎಂದು ಟ್ವೀಟ್ ಮಾಡಿದ್ದಾರೆ.

ಅಭೂತಪೂರ್ವ ಗೆಲುವಿನೊಂದಿಗೆ ಮತ್ತೆ ದೆಹಲಿ ಗದ್ದುಗೆ ಏರಲಿರುವ ಅರವಿಂದ್ ಕೇಜ್ರಿವಾಲ್ ಅವರಿಗೆ ಅಭಿನಂದನೆಗಳು ಎಂದು ಪ್ರಶಾಂತ್ ಕಿಶೋರ್ ಟ್ವೀಟ್ ಮಾಡಿದ್ದಾರೆ.

ಮತ್ತೆ ಸಮೀಕರಣ ಬದಲು: ಆಪ್ ಪಾಳೆಯದಲ್ಲಿ ಸಂತಸ, ಬಿಜೆಪಿ ಪಾಳೆಯದಲ್ಲಿ ಆತಂಕ!

ಭಾರತದ ಆತ್ಮವನ್ನು(ಆಪ್ ಸಿದ್ಧಾಂತ) ಬೆಂಬಲಿಸಿದ್ದಕ್ಕೆ ನಾನು ದೆಹಲಿ ಮತದಾರರನ್ನು ಅಭಿನಂದಿಸುತ್ತೇನೆ ಎಂದು ಪ್ರ ಶಾಂತ್ ಕಿಶೋರ್ ತಮ್ಮ ಟ್ವೀಟ್’ನಲ್ಲಿ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮನೆಯಲ್ಲಿ ಒಂದು ರೂಪಾಯಿ ಇಲ್ಲ ಆದ್ರೂ ಸಿಸಿಟಿವಿ ಯಾಕೆ ಹಾಕಿದ್ರಿ: ಸಿಕ್ಕಿದ್ದನ್ನು ದೋಚಿ ಪತ್ರ ಬರೆದಿಟ್ಟು ಹೋದ ಕಳ್ಳ
ಲೋಕಸಭೆಯಲ್ಲಿ ನೌಕರರ ಪರ ಮಸೂದೆ ಮಂಡನೆ: ಉದ್ಯೋಗಿಗಳ ಲೈಫ್​ ಜಿಂಗಾಲಾಲಾ- ಏನಿದೆ ಇದರಲ್ಲಿ?