
ಬೆಂಗಳೂರು(ಜು.09): ಉತ್ತರ ಪ್ರದೇಶದ ಮಾಜಿ ಸಿಎಂ ಹಾಗೂ ರಾಜಸ್ಥಾನ, ಹಿಮಾಚಲ ಪ್ರದೇಶದ ಮಾಜಿ ರಾಜ್ಯಪಾಲ ಕಲ್ಯಾಣ್ ಸಿಂಗ್ ಆರೋಗ್ಯ ಕೊಂಚ ಸುಧಾರಿಸಿದೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಮೃತಪಟ್ಟಿದ್ದಾರೆಂಬ ಸುದ್ದಿ ಹರಿದಾಡಿದ್ದು, ಆತಂಕ ಸೃಷ್ಟಿಯಾಗಿತ್ತು. ಈ ನಡುವೆ ಪ್ರಧಾನಿ ಮೋದಿಯೂ ಟ್ವೀಟ್ ಮಾಡಿ 'ಶೀಘ್ರ ಗುಣಮುಖರಾಗಲೆಂದು ದೇಶದಾದ್ಯಂತ ಬಹಳಷ್ಟು ಜನರು ಪ್ರಾರ್ಥಿಸುತ್ತಿದ್ದಾರೆ' ಎಂದಿದ್ದಾರೆ.
ಇನ್ನು ಶುಕ್ರವಾರವಷ್ಟೇ ಬಿಜೆಪಿ ನಾಯಕ ಸೈಯದ್ ಶಾಹನ್ವಾಜ್ ಹುಸೈನ್ ಆಸ್ಪತ್ರೆಗೆ ಭೇಟಿ ನೀಡಿ ಕಲ್ಯಾಣ್ ಸಿಂಗ್ ಆರೋಗ್ಯ ವಿಚಾರಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಕಲ್ಯಾಣ್ ಸಿಂಗ್ ಜೊತೆಗಿನ ಫೋಟೋ ಶೇರ್ ಮಾಡಿಕೊಂಡಿದ್ದಾರೆ.
ಲಖನೌದ ಸಂಜಯ್ ಗಾಂಧಿ ವೈದ್ಯಕೀಯ ವಿಜ್ಞಾನಗಳ ಸ್ನಾತಕೋತ್ತರ ಸಂಸ್ಥೆಯ ಐಸಿಯುನಲ್ಲಿರುವ ಕಲ್ಯಾಣ್ ಸಿಂಗ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಜೆಪಿಯ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿ ಹಲವು ಮುಖಂಡರು ಗುರುವಾರ ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದರು.
ಇನ್ನು ಪಿಎಂ ಮೋದಿ ತಾವು ಕಲ್ಯಾಣ್ ಸಿಂಗ್ ಮೊಮ್ಮಗನೊಂದಿಗೆ ಮಾತನಾಡಿರುವ ಬಗ್ಗೆಯೂ ಟ್ವೀಟ್ ಮಾಡಿದ್ದು, 'ಕಲ್ಯಾಣ್ ಸಿಂಗ್ ಅವರ ಮೊಮ್ಮಗನೊಂದಿಗೆ ಈಗಷ್ಟೇ ಮಾತನಾಡಿ ಆರೋಗ್ಯ ಸ್ಥಿತಿಯ ಕುರಿತು ವಿಚಾರಿಸಿದೆ. ಕಲ್ಯಾಣ್ ಸಿಂಗ್ ಅವರೊಂದಿಗೆ ಮಾತುಕತೆಯ ಹಲವು ನೆನಪುಗಳು ನನ್ನಲ್ಲಿವೆ. ಅವರೊಂದಿಗಿನ ಮಾತು ಸದಾಕಾಲಕ್ಕೂ ಕಲಿಕೆಯ ಅನುಭವವಾಗಿತ್ತು' ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ