
ಶ್ರೀನಗರ(ಜ.18): ವಿಶೇಷ ಸ್ಥಾನಮಾನ ರದ್ದತಿ ಬಳಿಕ ಕಾಶ್ಮೀರದಲ್ಲಿ ಹೇರಲಾಗಿದ್ದ ನಿರ್ಬಂಧಗಳನ್ನು ಕೇಂದ್ರ ಸರ್ಕಾರ ಒಂದೊಂದಾಗಿ ಹಿಂಪಡೆಯುತ್ತಿದೆ.
ಸುಮಾರು ಐದು ತಿಂಗಳ ನಂತರ ಜಮ್ಮು – ಕಾಶ್ಮೀರದಲ್ಲಿ ಪ್ರಿಪೇಯ್ಡ್ ಮೊಬೈಲ್, ಎಸ್ಎಂಎಸ್ ಹಾಗೂ ವಾಯ್ಸ್ ಕಾಲ್ ಸೇವೆಯನ್ನು ಪುನಾರಂಭಿಸಲಾಗಿದೆ.
ಕೇಂದ್ರಾಡಳಿತ ಪ್ರದೇಶದ ಎಲ್ಲಾ ಸ್ಥಳೀಯ ಪ್ರಿಪೇಯ್ಡ್ ಮೊಬೈಲ್ ಸಂಪರ್ಕಕ್ಕಾಗಿ ಧ್ವನಿ ಕರೆಗಳು ಮತ್ತು ಎಸ್ಎಂಎಸ್ ಅನ್ನು ಮರುಸ್ಥಾಪಿಸಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಇಂಟರ್ನೆಟ್ ಪಡೆಯುವುದು ಹಕ್ಕು: ಕಣಿವೆಯ ಸ್ಥಿತಿ ಪರಾಮರ್ಶೆಗೆ ಸುಪ್ರೀಂ ಸೂಚನೆ!
ಕಾಶ್ಮೀರದ ಬಂಡಿಪೋರಾ ಮತ್ತು ಕುಪ್ವಾರಾ ಜಿಲ್ಲೆಗಳು ಮತ್ತು ಜಮ್ಮುವಿನ ಎಲ್ಲಾ 10 ಜಿಲ್ಲೆಗಳಲ್ಲಿ ಕೆಲವು ನಿರ್ಬಂಧಗಳೊಂದಿಗೆ 2ಜಿ ಇಂಟರ್ನೆಟ್ ಸೇವೆಗಳನ್ನು ಪುನಃಸ್ಥಾಪಿಸಲಾಗಿದೆ.
ಕಣಿವೆಯ ಪರಿಸ್ಥಿತಿ ದಿನದಿಂದ ದಿನಕ್ಕೆ ಸುಧಾರಿಸುತ್ತಿದ್ದು, ಮೊಬೈಲ್ ಸೇವೆಗಳ ಮೇಲಿನ ನಿರ್ಬಂಧವನ್ನು ಇಂದಿನಿಂದ ಸಂಪೂರ್ಣವಾಗಿ ತೆಗೆದುಹಾಕಲಾಗಿದೆ. ಕಾಶ್ಮೀರ ಕಣಿವೆಯ ಎಲ್ಲಾ 10 ಜಿಲ್ಲೆಗಳಲ್ಲಿ ಪ್ರಿಪೇಯ್ಡ್ ಮತ್ತು ಪೋಸ್ಟ್ ಪೇಯ್ಡ್ ಸೇವೆಗಳು ದೊರೆಯಲಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ