
ನವದೆಹಲಿ (ಸೆ.29): ಮಹಿಳಾ ಮೀಸಲಾತಿ ಮಸೂದೆಗೆ ಅಧ್ಯಕ್ಷೆ ದ್ರೌಪದಿ ಮುರ್ಮು ಅವರು ಒಪ್ಪಿಗೆ ನೀಡಿದ ನಂತರ ನಾರಿ ಶಕ್ತಿ ವಂದನ್ ಅಧಿನಿಯಮ್ ಭಾರತದಲ್ಲಿ ಕಾನೂನು ಎನಿಸಿಕೊಂಡಿದೆ. ಈಗ ಕಾಯಿದೆಯಾಗುತ್ತಿದ್ದಂತೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಶೇ.33ರಷ್ಟು ಸ್ಥಾನಗಳು ಮಹಿಳೆಯರಿಗೆ ಮೀಸಲಾಗಲಿವೆ. ಆದರೆ, ಹೊಸ ಜನಗಣತಿ ಮತ್ತು ಡಿಲಿಮಿಟೇಶನ್ ನಂತರ ಮೀಸಲಾತಿ ಜಾರಿಗೆ ಬರಲಿದೆ. ಸಂಸತ್ತಿನ ವಿಶೇಷ ಅಧಿವೇಶನದಲ್ಲಿ, ಮಹಿಳಾ ಮೀಸಲಾತಿ ಮಸೂದೆಯನ್ನು ಲೋಕಸಭೆ ಮತ್ತು ರಾಜ್ಯಸಭೆ ಈ ತಿಂಗಳು ಅಂಗೀಕರಿಸಿತು, ಇದು ಸೆಪ್ಟೆಂಬರ್ 19 ರಂದು ಹೊಸ ಸಂಸತ್ತಿನ ಕಟ್ಟಡಕ್ಕೆ ತನ್ನ ಕಾರ್ಯಾಚರಣೆಯನ್ನು ಬದಲಾವಣೆ ಮಾಡಿದ ಬಳಿಕ ಭಾರತೀಯ ಸಂಸತ್ತಿನ ಐತಿಹಾಸಿಕ ಸಾಧನೆ ಎನಿಸಿಕೊಂಡಿದೆ. ಎಐಎಂಐಎಂ ಮಾತ್ರ ಮಹಿಳಾ ಮೀಸಲಾತಿ ಮಸೂದೆಯನ್ನು ವಿರೋಧಿಸಿದ್ದು, ಮುಸ್ಲಿಂ ಮಹಿಳಾ ಪ್ರತಿನಿಧಿಗಳಿಗೆ ಮೀಸಲಾತಿ ಇಲ್ಲದಿರುವುದರಿಂದ ಇದು ಮೇಲ್ಜಾತಿಯ ಮಹಿಳೆಯರಿಗೆ ಮಾತ್ರವೇ ಲಾಭವಾಗಲಿದೆ ಎಂದು ಹೇಳಿದೆ. ಇನ್ನು ಕಾಂಗ್ರೆಸ್ ಕೂಡ ಒಬಿಸಿ ಮೀಸಲಾತಿಯನ್ನು ಆಗ್ರಹಿಸಿತ್ತು. ಸಂಸತ್ತಿನಲ್ಲಿ ಅಂಗೀಕಾರದ ನಂತರ, ರಾಷ್ಟ್ರಪತಿಗಳ ಸಹಿ ಹಾಕಿ ಕಾನೂನಾದರೂ, ಇದು ಜಾರಿಗೆ ಬರಲು ದೀರ್ಘಾವಧಿ ತಗೆದುಕೊಳ್ಳುತ್ತದೆ ಎಂದು ಕಾಂಗ್ರೆಸ್ ಹೇಳಿದೆ.
"...ಜನರ ಸದನ, ರಾಜ್ಯದ ವಿಧಾನಸಭೆ ಮತ್ತು ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶದ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಸ್ಥಾನಗಳ ಮೀಸಲಾತಿಗೆ ಸಂಬಂಧಿಸಿದ ಸಂವಿಧಾನದ ನಿಬಂಧನೆಗಳು ಡಿಲಿಮಿಟೇಶನ್ ವ್ಯಾಯಾಮದ ನಂತರ ಜಾರಿಗೆ ಬರುತ್ತವೆ. ಸಂವಿಧಾನ ಕಾಯಿದೆ, 2023 ರ ಪ್ರಾರಂಭದ ನಂತರ ತೆಗೆದುಕೊಳ್ಳಲಾದ ಮೊದಲ ಜನಗಣತಿಯ ಸಂಬಂಧಿತ ಅಂಕಿಅಂಶಗಳನ್ನು ಪ್ರಕಟಿಸಿದ ನಂತರ ಈ ಉದ್ದೇಶಕ್ಕಾಗಿ ಕೈಗೊಳ್ಳಲಾಗುತ್ತದೆ ಮತ್ತು ಅಂತಹ ಪ್ರಾರಂಭದಿಂದ ಹದಿನೈದು ವರ್ಷಗಳ ಅವಧಿಯ ಮುಕ್ತಾಯದ ಮೇಲೆ ಪರಿಣಾಮ ಬೀರುವುದನ್ನು ನಿಲ್ಲಿಸುತ್ತದೆ" ಎಂದು ಅದು ಹೇಳಿದೆ.
ಮಹಿಳಾ ಮೀಸಲು ಬಿಲ್ ರಕ್ಷಾ ಬಂಧನಕ್ಕೆ ನನ್ನ ಗಿಫ್ಟ್: ಪ್ರಧಾನಿ ಮೋದಿ
ಲೋಕಸಭೆಯಲ್ಲಿ ವಿದೇಯಕಕ್ಕೆ 415 ಮತಗಳು ಸಿಕ್ಕಿದ್ದರೆ, 2 ಮತಗಳನ್ನು ವಿರುದ್ಧವಾಗಿ ಹಾಕಲಾಗಿತ್ತು. ಎಐಎಂಐಎಂನ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹಾಗೂ ಇಫ್ತಿಕಾರ್ ವಿರುದ್ಧವಾಗಿ ಮತ ಚಲಾವಣೆ ಮಾಡಿದ್ದರು. ಆದರೆ, ರಾಜ್ಯಸಭೆಯಲ್ಲಿ ಈ ವಿಧೇಯಕಕ್ಕೆ ಸರ್ವಾನುಮತದ ಒಪ್ಪಿಗೆ ಸಿಕ್ಕಿತ್ತು.
ರಾಜ್ಯಸಭೆಯಲ್ಲೂ ಭಾರೀ ಮತದೊಂದಿಗೆ ಮಹಿಳಾ ಮೀಸಲು ವಿಧೇಯಕ ಪಾಸ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ