
ನವದೆಹಲಿ(ಆ.21): ಒಬಿಸಿ ಪಟ್ಟಿರಚಿಸುವ ಹಕ್ಕನ್ನು ಮರಳಿ ರಾಜ್ಯಗಳಿಗೆ ನೀಡುವ ಮಹತ್ವದ ಒಬಿಸಿ ಮಸೂದೆಗೆ ರಾಷ್ಟ್ರಪತಿ ಸಹಿ ಹಾಕಿದ್ದಾರೆ. ಈ ಮೂಲಕ 105ನೇ ಸಂವಿಧಾನ ತಿದ್ದುಪಡಿ ಕಾಯಿದೆ ಜಾರಿಗೆ ಬಂದಿದೆ. ಕಳೆದ ಮುಂಗಾರು ಅಧಿವೇಶನದಲ್ಲಿ ವಿಪಕ್ಷಗಳ ಬೆಂಬಲದೊಂದಿಗೆ ಕೇಂದ್ರ ಸರ್ಕಾರ ಸಂಸತ್ತಿನ ಉಭಯ ಸದನಗಳಲ್ಲೂ ಮಸೂದೆಗೆ ಒಪ್ಪಿಗೆ ಪಡೆದುಕೊಂಡಿತ್ತು.
ಹಿಂದುಳಿದ ಜಾತಿಗಳನ್ನು ಒಬಿಸಿ ಪಟ್ಟಿಗೆ ಸೇರಿಸುವ ಅಧಿಕಾರವನ್ನು ರಾಜ್ಯಗಳಿಗೆ ನೀಡಬೇಕು ಎಂದು ಲೋಕಸಭೆಯಲ್ಲಿ ಈ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮಂಡಿಸಲಾಗಿತ್ತು.
ಆಗಸ್ಟ್ 11ರಂದು ಉಭಯ ಸರ್ವಾನುಮತದಿಂದ ಒಪ್ಪಿಗೆ ನೀಡಿದ್ದವು. ಈಗ ರಾಷ್ಟ್ರಪತಿ ಅಂಕಿತ ಹಾಕುವುದರೊಂದಿಗೆ ಇತರ ಹಿಂದುಳಿದ ಜಾತಿಗಳನ್ನು ಒಬಿಸಿ ಪಟ್ಟಿಗೆ ಸೇರಿಸುವ ಅಧಿಕಾರ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ದೊರೆತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ