2,400 ಕೋಟಿ ರು. ವೆಚ್ಚದಲ್ಲಿ ನಿರ್ಮಾಣವಾದ 6.5 ಕಿ.ಮೀ. ಉದ್ದದ ಝಡ್‌ ಮೋಡ್‌ ಸುರಂಗ ಉದ್ಘಾಟಿಸಿದ ಪ್ರಧಾನಿ ಮೋದಿ

Published : Jan 14, 2025, 07:39 AM ISTUpdated : Jan 16, 2025, 12:36 PM IST
2,400 ಕೋಟಿ ರು. ವೆಚ್ಚದಲ್ಲಿ ನಿರ್ಮಾಣವಾದ 6.5 ಕಿ.ಮೀ. ಉದ್ದದ ಝಡ್‌ ಮೋಡ್‌ ಸುರಂಗ ಉದ್ಘಾಟಿಸಿದ ಪ್ರಧಾನಿ ಮೋದಿ

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀನಗರ ಮತ್ತು ಸೋನ್‌ಮಾರ್ಗ್‌ ನಡುವೆ ನಿರ್ಮಿಸಲಾದ 6.5 ಕಿ.ಮೀ ಉದ್ದದ ಝಡ್‌ ಮೇಡ್‌ ಸುರಂಗವನ್ನು ಉದ್ಘಾಟಿಸಲಿದ್ದಾರೆ. ಈ ಸುರಂಗವು ಎರಡು ನಗರಗಳ ನಡುವಿನ ಪ್ರಯಾಣದ ಸಮಯವನ್ನು ಕಡಿಮೆ ಮಾಡುತ್ತದೆ ಮತ್ತು ಸರ್ವಋತು ಸಂಪರ್ಕವನ್ನು ಒದಗಿಸುತ್ತದೆ.

ಶ್ರೀನಗರ: ಜಮ್ಮು ಕಾಶ್ಮೀರದ ಶ್ರೀನಗರ ಮತ್ತು ಸೋನ್‌ಮಾರ್ಗ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಿಸಲಾಗಿರುವ 6.5 ಕಿ.ಮೀ ಉದ್ದದ ಝಡ್‌ ಮೇಡ್‌ ಸುರಂಗವನ್ನು ಪ್ರಧಾನಿ ನರೇಂದ್ರ ಸೋಮವಾರ ಉದ್ಘಾಟಿಸಿದ್ದಾರೆ.

ಸೋನ್‌ಮಾರ್ಗ್‌ನಿಂದ ಗಂದರ್ಬಲ್‌ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ದ್ವಿಪಥದ ಈ ಮಾರ್ಗ ಝಡ್‌ ಅಕ್ಷರದ ಮಾದರಿಯಲ್ಲಿ ಇರುವ ಕಾರಣ ಅದನ್ನುಝಡ್‌ ಮೇಡ್‌ ಸುರಂಗ ಎಂದು ಕರೆಯಲಾಗಿದೆ. ಈ ಮೊದಲು ಈ ಎರಡು ನಗರಗಳ ನಡುವೆ ಕಡಿದಾದ ರಸ್ತೆಯಲ್ಲಿ ಕೇವಲ 30 ಕಿ.ಮೀ ಮಾರ್ಗದಲ್ಲಿ ವಾಹನ ಸಂಚರಿಸಬಹುದಿತ್ತು. ಜೊತೆಗೆ ಮಳೆಗಾಲ, ಹಿಮಪಾತದ ವೇಳೆ ಈ ಮಾರ್ಗ ಕಡಿತವಾಗುತ್ತಿದ್ದ ಸಾಧ್ಯತೆ ಹೆಚ್ಚುತ್ತಿತ್ತು.

ಆದರೆ ಸುರಂಗ ಮಾರ್ಗದ ನಿರ್ಮಾಣದ ಕಾರಣ ಗಂಟೆಗೆ 70 ಕಿ.ಮೀ ವೇಗದಲ್ಲಿ ವಾಹನ ಸಂಚರಿಸಬಹುದು. ಜೊತೆಗೆ ಎರಡು ಪ್ರದೇಶಗಳ ನಡುವೆ ಸರ್ವಋತು ಸಂಪರ್ಕ ಸಾಧ್ಯವಾಗಲಿದೆ.

ಸುರಂಗದ ಮಹತ್ವ:

2,400 ಕೋಟಿ ರು. ವೆಚ್ಚದಲ್ಲಿ ನಿರ್ಮಾಣವಾಗಿರುವ 6.5 ಕಿ.ಮೀ. ಉದ್ದದ ಝಡ್‌ ಮೋಡ್‌ ಸುರಂಗದಲ್ಲಿ ಗಂಟೆಗೆ 70 ಕಿ.ಮೀ. ವೇಗದಲ್ಲಿ ಚಲಿಸುವ ಅವಕಾಶವಿದ್ದು, ಇದು ಶ್ರೀನಗರ ಹಾಗೂ ಸೋನ್‌ಮಾರ್ಗ್‌ ನಡುವಿನ ಸಂಚಾರ ಸಮಯವನ್ನು ತಗ್ಗಿಸಲಿದೆ. ಸುರಂಗವು ಪ್ರತಿ ಗಂಟೆಗೆ 1000 ವಾಹನಗಳನ್ನು ನಿಭಾಯಿಸುವ ಸಾಮರ್ಥ್ಯ ಹೊಂದಿದೆ. ಎಲ್ಲಾ ಹವಾಮಾನಗಳಲ್ಲಿಯೂ ಸಂಚಾರಕ್ಕೆ ಯೋಗ್ಯವಾಗಿರುವ ಈ ಸುರಂಗವು ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ಗೂ ಸಂಪರ್ಕ ಕಲ್ಪಿಸಲಿದೆ. ಜತೆಗೆ, ಇದರಿಂದ ಸೇನೆಯ ಓಡಾಟಕ್ಕೂ ಅನುಕೂಲವಾಗಲಿದೆ.

ಇದನ್ನೂ ಓದಿ: 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮೋದಿ ಅವರೇ ನನ್ನ ಗಂಡ ವಿಕ್ರಂನನ್ನು ಪಾಕಿಸ್ತಾನಕ್ಕೆ ಕಳುಹಿಸಿ: ಪಾಕ್ ಮಹಿಳೆಯ ಮನವಿ
ಕಾರವಾರ ಜೈಲಲ್ಲಿ ಡ್ರಗ್ಸ್‌ಗಾಗಿ ಜೈಲ‌ರ್ ಮೇಲೆ ಕೈದಿಗಳಿಂದ ಹಲ್ಲೆ: ಬೆಂಗಳೂರು ಜೈಲೊಳಗೆ ಸಿಗರೇಟ್ ಸಾಗಿಸಲೆತ್ನಿಸಿ ಸಿಕ್ಕಿಬಿದ್ದ ವಾರ್ಡನ್