ಜವಾಬ್ದಾರಿ ಮುಗಿಸಿ ಜನರತ್ತ ಬಂದ ಪ್ರಧಾನಿ: ಕೈಬೀಸಿ ಸಂಭ್ರಮಿಸಿದ ಜನತೆ!

By Suvarna NewsFirst Published Jan 26, 2020, 12:16 PM IST
Highlights

71ನೇ ಗಣರಾಜ್ಯೋತ್ಸವಕ್ಕೆ ಅಧಿಕೃತ ತೆರೆ| ನವದೆಹಲಿಯ ರಾಜಪಥದಲ್ಲಿ ಕೊನೆಗೊಂಡ ಪಥಸಂಚಲನ| ವೇದಿಕೆಯಿಂದ ಕೆಳಗಿಳಿದು ಬಂದು ಜನರತ್ತ ಕೈಬೀಸಿದ ಪ್ರಧಾನಿ| ಜನತೆಗೆ ಗಣರಾಜ್ಯೋತ್ಸವದ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ| ಪ್ರಧಾನಿ ಮೋದಿಗೆ ಭದ್ರತಾ ಸಿಬ್ಬಂದಿ ಸಾಥ್|

ನವದೆಹಲಿ(ಜ.26): 71ನೇ ಗಣರಾಜ್ಯೋತ್ಸವಕ್ಕೆ ಅಧಿಕೃತ ತೆರೆ ಬಿದ್ದಿದ್ದು, ನವದೆಹಲಿ ರಾಜಪಥದಲ್ಲಿ ನಡೆಯುತ್ತಿದ್ದ ಪಥಸಂಚಲನ ಮುಕ್ತಾಯ ಕಂಡಿದೆ.

ಪಥಸಂಚಲನ ಮುಕ್ತಾಯವಾಗುತ್ತಿದ್ದಂತೇ ವೇದಿಕೆ ಮೇಲಿದ್ದ ಪ್ರಧಾನಿ ಮೋದಿ, ಕೆಳಗಿಳಿದು ಬಂದು ಜನರತ್ತ ಕೈ ಬೀಸಿ ಗಣರಾಜ್ಯೋತ್ಸವದ ಶುಭಾಶಯ ಕೋರಿದರು.

ಹಿಮ ಪರ್ವತ ಗೆದ್ದ ಯೋಧರು: 17 ಸಾವಿರ ಅಡಿ ಎತ್ತರದಲ್ಲಿ ತ್ರಿವರ್ಣ ಧ್ವಜ ಹಾರಿಸಿದರು!

ಪಥಸಂಚಲನ ಮುಗಿದ ಬಳಿಕ ವೇದಿಕೆ ಮೇಲಿದ್ದ ಗಣ್ಯರನ್ನು ಬೀಳ್ಕೊಟ್ಟ ಪ್ರಧಾನಿ ಮೋದಿ, ಬಳಿ ರಾಜಪಥ್’ದಲ್ಲಿ ನೆರೆದಿದ್ದ ಜನಸಮೂಹದ ಬಳಿ ನಡೆದುಕೊಂಡು ಹೋದರು.

Delhi: Prime Minister Narendra Modi greets the crowds at Rajpath. pic.twitter.com/PO8ejEeblT

— ANI (@ANI)

ಕೈಯಲ್ಲಿ ತ್ರಿವರ್ಣ ಧ್ವಜ ಹಿಡಿದಿದ್ದ ಜನತೆಯತ್ತ ಕೈಬೀಸಿದ ಪ್ರಧಾನಿ ಮೋದಿ, ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯ ತಿಳಿಸಿದರು. ಈ ವೇಳೆ ಜನ ಮೋದಿ ಮೋದಿ ಎಂದು ಕೂಗಿ ಸಂಭ್ರಮಿಸಿದರು.

ಈ ಸಲದ ಗಣರಾಜ್ಯೋತ್ಸವದ ಪ್ರಥಮಗಳು..!

ರಾಜಪಥ್’ದಲ್ಲಿ ಕೆಲವು ಕಾಲ ನಡೆದುಕೊಂಡು ಹೋದ ಪ್ರಧಾನಿ ಮೋದಿ ಅವರಿಗೆ ಭದ್ರತಾ ಸಿಬ್ಬಂದಿ ಸಾಥ್ ನೀಡಿದರು.

ಜನವರಿ 26ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

click me!