ಜಗತ್ತಿನ ಅತಿದೊಡ್ಡ ರೈಲ್ವೆ ಸುಧಾರಣೆಗೆ ಪ್ರಧಾನಿ ಮೋದಿ ಚಾಲನೆ

Published : Feb 27, 2024, 06:46 AM IST
ಜಗತ್ತಿನ ಅತಿದೊಡ್ಡ ರೈಲ್ವೆ ಸುಧಾರಣೆಗೆ ಪ್ರಧಾನಿ ಮೋದಿ ಚಾಲನೆ

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಸೋಮವಾರ ವಿಶ್ವದ ಅತಿದೊಡ್ಡ ರೈಲ್ವೆ ಸುಧಾರಣೆ (ರೈಲ್ವೆ ಮರುನಿರ್ಮಾಣ) ಯೋಜನೆಗೆ ಚಾಲನೆ ನೀಡಿದ್ದಾರೆ. ಈ ಪ್ರಕಾರ, ಕರ್ನಾಟಕದ 34 ಸೇರಿದಂತೆ ದೇಶಾದ್ಯಂತ 554 ರೈಲ್ವೆ ನಿಲ್ದಾಣಗಳು ಮರು ಅಭಿವೃದ್ಧಿ ಹೊಂದಲಿದ್ದು, 1500 ರೈಲ್ವೆ ಮೇಲ್ಸೇತುವೆ-ಕೆಳಸೇತುವೆಗಳ ನಿರ್ಮಾಣ ಹಾಗೂ ಮರು ಅಭಿವೃದ್ಧಿ ಕಾರ್ಯ ನಡೆಯಲಿದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸೋಮವಾರ ವಿಶ್ವದ ಅತಿದೊಡ್ಡ ರೈಲ್ವೆ ಸುಧಾರಣೆ (ರೈಲ್ವೆ ಮರುನಿರ್ಮಾಣ) ಯೋಜನೆಗೆ ಚಾಲನೆ ನೀಡಿದ್ದಾರೆ. ಈ ಪ್ರಕಾರ, ಕರ್ನಾಟಕದ 34 ಸೇರಿದಂತೆ ದೇಶಾದ್ಯಂತ 554 ರೈಲ್ವೆ ನಿಲ್ದಾಣಗಳು ಮರು ಅಭಿವೃದ್ಧಿ ಹೊಂದಲಿದ್ದು, 1500 ರೈಲ್ವೆ ಮೇಲ್ಸೇತುವೆ-ಕೆಳಸೇತುವೆಗಳ ನಿರ್ಮಾಣ ಹಾಗೂ ಮರು ಅಭಿವೃದ್ಧಿ ಕಾರ್ಯ ನಡೆಯಲಿದೆ. ಒಟ್ಟಾರೆ ಸುಮಾರು 41 ಸಾವಿರ ಕೋಟಿ ರು. ಮೌಲ್ಯದ 2000 ರೈಲ್ವೆ ಯೋಜನೆಗಳಿಗೆ ಅವರು ಶ್ರೀಕಾರ ಹಾಕಿದ್ದಾರೆ.

ಯೋಜನೆಗಳಿಗೆ ವರ್ಚುವಲ್‌ ವಿಧಾನದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ‘ಕಳೆದ 10 ವರ್ಷಗಳಲ್ಲಿ ರಾಷ್ಟ್ರ ಅಭಿವೃದ್ಧಿ ಹೊಂದುತ್ತಿರುವ ವೇಗವನ್ನು ಕಂಡು ಸ್ವತಃ ಭಾರತೀಯರೇ ಅಚ್ಚರಿಗೊಳಗಾಗಿದ್ದಾರೆ. ಅಲ್ಲದೆ ಜೂನ್‌ ತಿಂಗಳಿನಿಂದ ನಮ್ಮ ಸರ್ಕಾರದ ಮೂರನೇ ಅವಧಿ ಆರಂಭವಾಗಲಿದೆ’ ಎನ್ನುವ ಮೂಲಕ ಮತ್ತೊಮ್ಮೆ ಅಧಿಕಾರಕ್ಕೇರುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಾಶ್ಮೀರದಿಂದ ಪಂಜಾಬ್‌ಗೆ ಚಲಿಸಿದ ಚಾಲಕ ರಹಿತ ರೈಲು, ತಂತ್ರಜ್ಞಾನವಲ್ಲ ಹ್ಯಾಂಡ್ ಬ್ರೇಕ್ ಮರೆತ ಚಾಲಕ!

ಅಗಾಧ ಬದಲಾವಣೆ:

ಕಳೆದ 10 ವರ್ಷಗಳಲ್ಲಿ ಭಾರತೀಯ ರೈಲ್ವೆ ಇಲಾಖೆಯಲ್ಲಿ ಅಗಾಧ ಬದಲಾವಣೆಯಾಗಿದೆ. ರಾಷ್ಟ್ರದ ಜನರು ರೈಲುಗಳ ಮೂಲಕ ಆರಾಮ ಮತ್ತು ಸುಖಕರ ಪ್ರಯಾಣ ಮಾಡಲು ಸಾಧ್ಯವಾಗಿದೆ. ರೈಲ್ವೆ ಇಲಾಖೆಯನ್ನು ರಾಜಕಾರಣಿಗಳಿಂದ ಮುಕ್ತಗೊಳಿಸಿ ಪಾರದರ್ಶಕತೆಗೆ ಒತ್ತು ನೀಡಲಾಗಿದೆ. ಈ ಅವಧಿಯಲ್ಲಿ ರಾಷ್ಟ್ರದ ಜನರು ಕಟ್ಟುತ್ತಿರುವ ಪ್ರತಿಯೊಂದು ಪೈಸೆಯೂ ಪೋಲಾಗದೆ ಅಭಿವೃದ್ಧಿ ಯೋಜನೆಗೆ ಬಳಸುತ್ತಿರುವುದೇ ಭಾರತ ಇಷ್ಟು ಅಗಾಧ ಪ್ರಮಾಣದಲ್ಲಿ ಅಭಿವೃದ್ಧಿ ಹೊಂದಲು ಕಾರಣವಾಗಿದೆ’ ಎಂದು ತಿಳಿಸಿದರು.

ಅಲ್ಲದೆ, ‘ನಮ್ಮ ಯೋಜನೆಗಳು ಮುಂದಿನ ದಿನಗಳಲ್ಲಿ ಸಾಕಷ್ಟು ಉದ್ಯೋಗ ಸೃಷ್ಟಿಗೆ ನೆರವಾಗಲಿವೆ. ಇದರಿಂದಾಗಿ ಈಗ ಶಾಲೆ-ಕಾಲೇಜುಗಳಲ್ಲಿ ಓದುವವರಿಗೆ ರೈಲ್ವೆಯಲ್ಲಿ ಉದ್ಯೋಗ ಪರ್ವವೇ ಸೃಷ್ಟಿಯಾಗಲಿದೆ’ ಎಂದರು.

ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಇನ್ಮುಂದೆ ಪ್ರಯಾಣಿಕರಿಗೆ ಆಹಾರ ತಲುಪಿಸಲಿದೆ ಸ್ವಿಗ್ಗಿ, ಬುಕ್‌ ಮಾಡೋದು ಹೇಗೆ?

ವಿಶ್ವದ ಅತಿದೊಡ್ಡ ಯೋಜನೆ ಹೇಗೆ?

‘ದೇಶಾದ್ಯಂತ 554 ರೈಲ್ವೆ ನಿಲ್ದಾಣ ಮತ್ತು 1500 ಮೇಲ್ಸೇತುವೆ-ಕೆಳಸೇತುವೆಗಳ ಪುನರಭಿವೃದ್ಧಿಗೆ ಮೋದಿ ಚಾಲನೆ ನೀಡಿದ್ದಾರೆ. ಇದು ವಿಶ್ವದಲ್ಲೇ ಅತಿದೊಡ್ಡ ರೈಲ್ವೆ ಅಭಿವೃದ್ಧಿ ಯೋಜನೆಯಾಗಿದೆ. ಕಾಂಗ್ರೆಸ್‌ ಅವಧಿಯಲ್ಲಿ ದಿನಕ್ಕೆ ಸರಾಸರಿ 4 ಕಿ.ಮೀ ರೈಲ್ವೆ ಹಳಿ ಮತ್ತು ವರ್ಷಕ್ಕೆ 400 ಸೇತುವೆಗಳನ್ನು ನಿರ್ಮಿಸಲಾಗುತ್ತಿತ್ತು. ಆದರೆ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ದಿನಕ್ಕೆ ಸರಾಸರಿ 15 ಕಿ.ಮೀ ರೈಲ್ವೆ ಹಳಿ ಮತ್ತು ವರ್ಷಕ್ಕೆ 1000 ಸೇತುವೆಗಳನ್ನು ನಿರ್ಮಿಸಿ ಕಾಂಗ್ರೆಸ್‌ ಸರ್ಕಾರ 60 ವರ್ಷದಲ್ಲಿ ಮಾಡಿದ್ದನ್ನು ಬಿಜೆಪಿ 10 ವರ್ಷದಲ್ಲಿ ಮಾಡಿದೆ’ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಿಜೆಪಿಯಿಂದ ಟಿಕೆಟ್ ಗಿಟ್ಟಿಸಿಕೊಂಡ ಸೋನಿಯಾ ಗಾಂಧಿಗೆ ಕೇರಳ ಚುನಾವಣೆಯಲ್ಲಿ ಸೋಲು
ಶೇ.100ರಷ್ಟು ಕ್ರಿಶ್ಚಿಯನ್ ಜನಸಂಖ್ಯೆ ಇರುವ ಕೇರಳದ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಗೆಲುವು