ಪುಟಿನ್‌ಗೆ ದೂರವಾಣಿ ಕರೆ ಮಾಡಿದ ಪ್ರಧಾನಿ ಮೋದಿ, ಚುನಾವಣೆ ಗೆಲುವಿಗೆ ಅಭಿನಂದನೆ

Published : Mar 20, 2024, 04:08 PM ISTUpdated : Mar 20, 2024, 04:14 PM IST
ಪುಟಿನ್‌ಗೆ ದೂರವಾಣಿ ಕರೆ ಮಾಡಿದ ಪ್ರಧಾನಿ ಮೋದಿ, ಚುನಾವಣೆ ಗೆಲುವಿಗೆ ಅಭಿನಂದನೆ

ಸಾರಾಂಶ

ಭಾರತ-ರಷ್ಯಾ ರಾಜತಾಂತ್ರಿಕ ಸಂಬಂಧಗಳು ಆರಂಭದಿಂದಲೂ ಉತ್ತವಾಗಿದೆ. ಸ್ವಾತಂತ್ರ್ಯದ ನಂತರ ರಷ್ಯಾ ಭಾರತದ ಅತ್ಯಂತ ನಿಕಟ ಮಿತ್ರ ರಾಷ್ಟ್ರವಾಗಿದೆ. ಈ ಸೌಹಾರ್ದ ಸಂಬಂಧವನ್ನು ಮುಂದಕ್ಕೆ ಕೊಂಡೊಯ್ಯಲು ಪ್ರಧಾನಿ ನರೇಂದ್ರ ಮೋದಿ ಒಲವು ತೋರಿದ್ದಾರೆ.  

ನವದೆಹಲಿ (ಮಾ.20): ರಷ್ಯಾ ಅಧ್ಯಕ್ಷರಾಗಿ ಮತ್ತೊಮ್ಮೆ ಆರು ವರ್ಷದ ಅವಧಿಗೆ ಆಯ್ಕೆಯಾಗಿರುವ ವ್ಲಾಡಿಮಿರ್‌ ಪುಟಿನ್‌ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ದೂರವಾಣಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಭಾರತ-ರಷ್ಯಾ ವಿಶೇಷ ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸಲು ನಾಯಕರು ಒಪ್ಪಿಕೊಂಡಿದ್ದಾರೆ. ಅದರೊಂದಿಗೆ ಸ್ವಿಪಕ್ಷೀಯ ಸಹಕಾರದಲ್ಲಿ ಪ್ರಗತಿಯನ್ನೂ ಭವಿಷ್ಯದ ದಿನಗಳಲ್ಲಿ ಪರಿಶೀಲನೆ ಮಾಡುವುದಾಗಿ ಒಪ್ಪಿಕೊಂಡಿದ್ದು, ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಕೂಡ ಮಾಡಿಕೊಳ್ಳಲಿದ್ದಾರೆ.  ರಷ್ಯಾ-ಉಕ್ರೇನ್ ಸಂಘರ್ಷವನ್ನು ಕೊನೆ ಮಾಡುವ ನಿಟ್ಟಿನಲ್ಲಿ ಮಾತುಕತೆ ಮತ್ತು ರಾಜತಾಂತ್ರಿಕತೆಯ ಮುಂದಿರುವ ದಾರಿ ಎಂದು ಪ್ರಧಾನಿ ಮೋದಿ ಈ ವೇಳೆ ತಿಳಿಸಿದ್ದಾರೆ. ರಷ್ಯಾದ ಒಕ್ಕೂಟದ ಅಧ್ಯಕ್ಷರಾಗಿ ಪುನರಾಯ್ಕೆಗೊಂಡಿದ್ದಕ್ಕಾಗಿ ಪ್ರಧಾನಿ, ಪುಟಿನ್‌ ಅವರನ್ನು ಅಭಿನಂದಿಸಿದರು ಮತ್ತು ರಷ್ಯಾದ ಸ್ನೇಹಪರ ಜನರ ಶಾಂತಿ, ಪ್ರಗತಿ ಮತ್ತು ಸಮೃದ್ಧಿಗಾಗಿ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ.

Viral Video: ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಪಾಲಕರ ಸಮಾಧಿಯ ಮೇಲೆ ಮೂತ್ರ ಹೊಯ್ದ ಅನಾಮಿಕ ವ್ಯಕ್ತಿ!

ಮುಂದಿನ ವರ್ಷಗಳಲ್ಲಿ ಉಭಯ ದೇಶಗಳ ನಡುವಿನ ವಿಶೇಷ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಸಂಘಟಿತ ಪ್ರಯತ್ನಗಳನ್ನು ಮಾಡಲು ಉಭಯ ನಾಯಕರು ಒಪ್ಪಿಕೊಂಡಿದ್ದಾರೆ. ರಷ್ಯಾ-ಉಕ್ರೇನ್ ಸಂಘರ್ಷದ ಕುರಿತು ಚರ್ಚಿಸುವಾಗ, ಮಾತುಕತೆ ಮತ್ತು ರಾಜತಾಂತ್ರಿಕತೆಯ ಪರವಾಗಿ ಭಾರತದ ಸ್ಥಿರವಾದ ನಿಲುವನ್ನು ಪ್ರಧಾನಿ ಪುನರುಚ್ಚರಿಸಿದರು. ಅದರೊಂದಿಗೆ ಮುಂದಿನ ದಿನಗಳಲ್ಲಿ ಸಂಪರ್ಕದಲ್ಲಿರುವುದಾಗಿ ಒಪ್ಪಿಕೊಂಡಿದ್ದಾರೆ.

ಪುಟಿನ್‌ ಸಂಪರ್ಕಿಸಿ ಉಕ್ರೇನ್ ಮೇಲೆ ರಷ್ಯಾ ಸಂಭಾವ್ಯ ನ್ಯೂಕ್ಲಿಯರ್ ದಾಳಿ ತಡೆದಿದ್ದ ಮೋದಿ, CNN ವರದಿ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಸಗುಲ್ಲಾ ಖಾಲಿ ಆಯ್ತು ಎಂದು ಮುರಿದು ಬಿತ್ತು ಮದ್ವೆ: ಮದುವೆ ಮನೆಯಾಯ್ತು ರಣಾಂಗಣ
ಮೋದಿ-ಪುಟಿನ್ ಆರ್ಮರ್ಡ್ ಬದಲು ಸಾಮಾನ್ಯ ಟೊಯೋಟಾ ಫಾರ್ಚೂನ್ ಕಾರಿನಲ್ಲಿ ಪ್ರಯಾಣಿಸಿದ್ದೇಕೆ?