
ರಾಯ್ಪುರ(ಏ.29): ಆಪತ್ತಿನ ಈ ಪರಿಸ್ಥಿತಿಯಲ್ಲಿ ಕೆಲವರು ಅವಕಾಶವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದರೆ, ಇನ್ನು ಕೆಲವರು ತಮ್ಮ ಬಳಿ ಇರುವುದೆಲ್ಲವನ್ನೂ ರೋಗಿಗಳ ಸೇವೆಗಾಗಿ ಮುಡಿಪಾಗಿಟ್ಟಿದ್ದಾರೆ. ಸದ್ಯ ಕೊರೋನಾದಂತಹ ವಿಷಮ ಪರಿಸ್ಥಿತಿಯಲ್ಲಿ ಛತ್ತೀಸ್ಗಢದ ಖಾಸಗಿ ಆಸ್ಪತ್ರೆಯೊಂದು ಇನ್ನೂರು ಬೆಡ್ಗಳ ಕೋವಿಡ್ ಸೆಂಟರ್ ಆಗಿ ಪರಿವರ್ತನೆಯಾಗಿದ್ದು, ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲಾರಂಭಿಸಿದೆ.
ಕೊರೋನಾ ರೋಗಿಗಳಿಗೆ ಶುಲ್ಕರಹಿತ ಚಿಕಿತ್ಸೆ
ಛತ್ತೀಸ್ಗಢದ ಕೃತಿ ಕೋವಿಡ್ ಕೇರ್ ಸೆಂಟರ್ ಕೊರೋನಾ ರೋಗಿಗಳಿಗೆ ಭರವಸೆಯ ಬೆಳಕಾಗಿದೆ. ಇಲ್ಲಿ ಕೊರೋನಾ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂರು ಬೆಡ್ಗಳ ಈ ಆಸ್ಪತ್ರೆಯಲ್ಲಿ ಐವತ್ತು ಆಕ್ಸಿಜನ್ ಬೆಡ್ಗಳಿವೆ.
"
ಹತ್ತು ಆಕ್ಸಿಜನ್ ಕಾನ್ಸಂಟ್ರೇಟರ್
ಈ ಆಸ್ಪತ್ರೆಯಲ್ಲಿ ಹತ್ತು ಆಕ್ಸಿಜನ್ ಕಾನ್ಸಂಟ್ರೇಟರ್ ಕೂಡಾ ಅಳವಡಿಸಲಾಗಿದೆ. ಇದನ್ನು ಹೊರತುಪಡಿಸಿ ಇಪ್ಪತ್ತೈದು ದಾದಿಯರು. ಐವರು ವೈದ್ಯರು ಹಾಗೂ ಸ್ವಚ್ಛತೆ ಕಾಪಾಡಲು ಸಿಬ್ಬಂದಿ ಹಾಗೂ ವಾರ್ಡ್ ಬಾಯ್ ಕೂಡಾ ಇದ್ದಾರೆ.
ಹೊಣೆ ಹೊತ್ತುಕೊಂಡ ಸಮಾಜಸೇವಕ
ಕೊರೋನಾದಿಂದಾಗಿ ಜನರ ಪರಿಸ್ಥಿತಿ ಬಹಳ ಕೆಟ್ಟದಾಗಿದೆ. ಈ ಪರಿಸ್ಥಿತಿಯನ್ನು ಕಂಡ ಸಮಾಜ ಸೇವಕ ಬೃಜ್ಮೋಹನ್ ಅಗರ್ವಾಲ್ ಈ ಕೃತಿ ಖಾಸಗಿ ಆಸ್ಪತ್ರೆಯನ್ನು ಕೋವಿಡ್ ಸೆಂಟರ್ ಆಗಿ ಪರಿವರ್ತಿಸಿದ್ದಾರೆ. ಈ ಮೂಲಕ ಈ ಆಸ್ಪತ್ರೆ ಉಚಿತ ಸೇವೆ ನೀಡುತ್ತಿರುವ ಮೊದಲ ಕೋವಿಡ್ ಸೆಂಟರ್ ಎಂಬ ಹೆಗ್ಗಳಿಕೆ ಗಳಿಸಿದೆ.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ