ರಾಹುಲ್‌, ಪ್ರಿಯಾಂಕಗೆ ಮೀರತ್ ಪ್ರವೇಶ ನಿರ್ಬಂಧ

Suvarna News   | Asianet News
Published : Dec 25, 2019, 10:29 AM ISTUpdated : Dec 25, 2019, 10:30 AM IST
ರಾಹುಲ್‌, ಪ್ರಿಯಾಂಕಗೆ ಮೀರತ್ ಪ್ರವೇಶ ನಿರ್ಬಂಧ

ಸಾರಾಂಶ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಉತ್ತರಪ್ರದೇಶದ ಮೇರಠ್‌ನಲ್ಲಿ ಸಾವಿಗೀಡಾದ ಐವರು ವ್ಯಕ್ತಿಗಳ ಕುಟುಂಬಸ್ಥರ ಭೇಟಿಗೆ ತೆರಳುತ್ತಿದ್ದ ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ವಾದ್ರಾ ಅವರನ್ನು ಪೊಲೀಸರು ತಡೆದಿದ್ದಾರೆ.

ನವದೆಹಲಿ (ಡಿ. 25): ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಉತ್ತರಪ್ರದೇಶದ ಮೇರಠ್‌ನಲ್ಲಿ ಸಾವಿಗೀಡಾದ ಐವರು ವ್ಯಕ್ತಿಗಳ ಕುಟುಂಬಸ್ಥರ ಭೇಟಿಗೆ ತೆರಳುತ್ತಿದ್ದ ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ವಾದ್ರಾ ಅವರನ್ನು ಪೊಲೀಸರು ತಡೆದಿದ್ದಾರೆ.

‘ಕೈ’ಗೆ ಮೋದಿ ಸವಾಲ್‌!: ಎರಡು ಪಂಥಾಹ್ವಾನ ನೀಡಿದ ಪ್ರಧಾನಿ!

ಮಂಗಳವಾರ ಮೇರಠ್‌ಗೆ ತೆರಳುತ್ತಿದ್ದ ರಾಹುಲ್‌ ಹಾಗೂ ಪ್ರಿಯಾಂಕಾರನ್ನು ಮಾರ್ಗಮಧ್ಯೆ ಪರ್ತಾಪುರ ಬಳಿಯೇ ತಡೆದ ಪೊಲೀಸರು, ಮೇರಠ್‌ ಪ್ರವೇಶಿಸದಂತೆ ನಿರ್ಬಂಧಿಸಿದರು. ತಮ್ಮ ನಿರ್ಬಂಧಕ್ಕೆ ಅಸಮಾಧಾನ ವ್ಯಕ್ತಪಡಿಸಿದ ರಾಹುಲ್‌, ‘ಮೇರಠ್‌ ಪ್ರವೇಶಿಸದಂತೆ ನಿರ್ಬಂಧಿಸಿದ ಆದೇಶದ ಪ್ರತಿಯನ್ನು ನೀಡುವಂತೆ ಪೊಲೀಸರಿಗೆ ಒತ್ತಾಯಿಸಿದೆವು.

ಆದರೆ, ಆದೇಶದ ಪ್ರತಿ ತೋರಿಸದ ಪೊಲೀಸರು, ನಮ್ಮನ್ನು ಇಲ್ಲಿಂದ ವಾಪಸ್‌ ಹೋಗುವಂತೆ ಹೇಳಿದರು’ ಎಂದು ಹೇಳಿದ್ದಾರೆ. ಭಾನುವಾರವಷ್ಟೇ ಉತ್ತರ ಪ್ರದೇಶದ ಬಿಜ್ನೋರ್‌ಗೆ ಭೇಟಿ ನೀಡಿದ್ದ ಪ್ರಿಯಾಂಕಾ ವಾದ್ರಾ ಅವರು, ಕೆಲ ಸಂತ್ರಸ್ತರ ಕುಟುಂಬಗಳನ್ನು ಭೇಟಿ ಮಾಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ತಮಿಳು ಚಿತ್ರದಲ್ಲಿ ಕನ್ನಡ ಹಾಡು ಬಳಸಿದ್ದಕ್ಕೆ ದಂಡ, ಒಟಿಟಿ ರಿಲೀಸ್‌ಗೂ ಮುನ್ನ 30 ಲಕ್ಷ ಠೇವಣಿ ಇಡಿ ಎಂದ ಕೋರ್ಟ್‌!
ರಕ್ಷಿಸಲು ಹೋದವನನ್ನೇ ಕೆಳಗೆ ತಳ್ಳಿದ ಮಾನಸಿಕ ಅಸ್ವಸ್ಥ: ಜೀವ ಉಳಿಸಲು ಹೋಗಿ ಕೈಕಾಲು ಮುರಿದುಕೊಂಡ ಯುವಕ