ಸೋನಿಯಾ ಗಾಂಧಿ ರಾಜ್ಯಸಭೆಗೆ, ಅಮ್ಮನ ಕ್ಷೇತ್ರದಿಂದ ಮಗಳು ಪ್ರಿಯಾಂಕಾ ಲೋಕಸಭೆಗೆ ಸ್ಪರ್ಧೆ..?

Published : Feb 13, 2024, 09:03 AM ISTUpdated : Feb 13, 2024, 09:05 AM IST
 ಸೋನಿಯಾ ಗಾಂಧಿ ರಾಜ್ಯಸಭೆಗೆ, ಅಮ್ಮನ ಕ್ಷೇತ್ರದಿಂದ ಮಗಳು ಪ್ರಿಯಾಂಕಾ ಲೋಕಸಭೆಗೆ ಸ್ಪರ್ಧೆ..?

ಸಾರಾಂಶ

1999ರಿಂದ 6 ಬಾರಿ ಲೋಕಸಭೆಗೆ ಆಯ್ಕೆಯಾಗುತ್ತಿರುವ ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ, ಇದೇ ಮೊದಲ ಬಾರಿಗೆ ಸಂಸತ್ತಿನ ಕೆಳಮನೆಯ ಲೋಕಸಭೆ ಬಿಟ್ಟು ಮೇಲ್ಮನೆಯಾದ ರಾಜ್ಯಸಭೆ ಪ್ರವೇಶಿಸುವ ಸಾಧ್ಯತೆ ಇದೆ.

ನವದೆಹಲಿ: 1999ರಿಂದ 6 ಬಾರಿ ಲೋಕಸಭೆಗೆ ಆಯ್ಕೆಯಾಗುತ್ತಿರುವ ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ, ಇದೇ ಮೊದಲ ಬಾರಿಗೆ ಸಂಸತ್ತಿನ ಕೆಳಮನೆಯ ಲೋಕಸಭೆ ಬಿಟ್ಟು ಮೇಲ್ಮನೆಯಾದ ರಾಜ್ಯಸಭೆ ಪ್ರವೇಶಿಸುವ ಸಾಧ್ಯತೆ ಇದೆ. ಇನ್ನೊಂದೆಡೆ ಈವರೆಗೂ ಸೋನಿಯಾ ಪ್ರತಿನಿಧಿಸುತ್ತಿದ್ದ ಉತ್ತರಪ್ರದೇಶದ ರಾಯ್ ಬರೇಲಿ ಕ್ಷೇತ್ರದಿಂದ ಅವರ ಪುತ್ರಿ ಪ್ರಿಯಾಂಕಾ ಗಾಂಧಿ ಕಣಕ್ಕೆ ಇಳಿಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

1999ರಲ್ಲಿ ಮೊದಲ ಬಾರಿ ಅಮೇಥಿ ಮತ್ತು ಕರ್ನಾಟಕದ ಬಳ್ಳಾರಿ ಎರಡೂ ಕಡೆಯಿಂದ ಗೆದ್ದಿದ್ದ ಸೋನಿಯಾ ನಂತರ 5 ಬಾರಿ ರಾಯ್‌ಬರೇಲಿಯಿಂದ ಲೋಕಸಭೆಗೆ ಆಯ್ಕೆ ಯಾಗಿದ್ದರು. ಆದರೆ ಕಳೆದ ಕೆಲ ಸಮಯ ದಿಂದ ವಯೋಸಹಜ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಸೋನಿಯಾ ಈ ಬಾರಿ ಲೋಕಸಭೆ ಬಿಟ್ಟು ರಾಜ್ಯಸಭೆ ಆಯ್ಕೆ ಮಾಡಿ ಕೊಳ್ಳಬಹುದು ಎಂದು ವರದಿಗಳು ತಿಳಿಸಿವೆ.

ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಆಹ್ವಾನಕ್ಕೆ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಅರ್ಹರಲ್ಲ, ಇಲ್ಲಿದೆ ಕಾರಣ!

ಸೋನಿಯಾಗೆ ತಮ್ಮ ರಾಜ್ಯದಿಂದ ರಾಜ್ಯಸಭೆಗೆ ಪ್ರವೇಶ ಮಾಡುವಂತೆ ಈಗಾಗಲೇ ಕರ್ನಾಟಕ, ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ, ಹಿಮಾಚಲಪ್ರದೇಶ ರಾಜ್ಯ ಕಾಂಗ್ರೆಸ್ ಘಟಕಗಳು ಆಹ್ವಾನ ನೀಡಿವೆ. ಈ ಪೈಕಿ ಅವರು ರಾಜಸ್ಥಾನ ಅಥವಾ ಹಿಮಾಚಲವನ್ನು ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. 

ಪ್ರಿಯಾಂಕಾ ಸ್ಪರ್ಧಾ ಕಣಕ್ಕೆ?: ಇನ್ನು ಪ್ರಿಯಾಂಕಾ ವಾದ್ರಾ ಇದೇ ಮೊದಲ ಬಾರಿಗೆ ಚುನಾವಣಾ ಕಣಕ್ಕೆ ಇಳಿಯುವ ಸಾಧ್ಯತೆ ಇದೆ. ಇದಕ್ಕಾಗಿ ಅವರು ತಮ್ಮ ತಾಯಿ ಪ್ರತಿನಿಧಿಸುವ ರಾಯ್‌ಬರೇಲಿ ಆಯ್ಕೆ ಮಾಡಿಕೊಳ್ಳಲಿದ್ದಾರೆ ಎನ್ನಲಾಗಿದೆ. ಕಳೆದ ಚುನಾವಣೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ವಾರಾಣಸಿಯಿಂದ ಪ್ರಿಯಾಂಕಾ ಕಣಕ್ಕೆ ಇಳಿಯಲಿದ್ದಾರೆ ಎಂದು ವರದಿಯಾಗಿತ್ತಾದರೂ ಹಾಗೆ ಆಗಿರಲಿಲ್ಲ.

ಮೋದಿ ವಿರುದ್ಧ ಸ್ಪರ್ಧಿಸುವ ರಿಸ್ಕ್‌ ಬೇಡ, ಕರ್ನಾಟಕದಿಂದ ಪ್ರಿಯಾಂಕಾ ಸ್ಪರ್ಧೆ: ಕಾಂಗ್ರೆಸ್ಸಲ್ಲಿ ಚಿಂತನೆ

ಕ್ರಿಕೆಟಿಗ ಯುವರಾಜ್ ಗುರುದಾಸ್‌ಪುರ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ?
ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಯುವರಾಜ್ ಸಿಂಗ್ ಅವರು ಶೀಘ್ರವೇ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಅಲ್ಲದೇ ಅವರು ಪಂಜಾಬ್‌ನ ಗುರುದಾಸ್‌ಪುರ ಕ್ಷೇತ್ರದಲ್ಲಿ ಬಿಜೆಪಿಯಿಂದ ಲೋಕಸಭೆಗೆ ಸ್ಪರ್ಧಿಸಲಿದ್ದಾರೆ ಎಂದು ವರದಿಯಾಗಿದೆ. ಯುವರಾಜ್ ಇತ್ತೀಚೆಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿದ್ದರು. ಈ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬೆನ್ನಲ್ಲೇ ಇಂಥದ್ದೊಂದು ಸುದ್ದಿ ಹರಡಿದೆ. ಆದರೆ ಈ ಬಗ್ಗೆ ಯುವರಾಜ್ ಯಾವುದೇ ಹೇಳಿಕೆ ನೀಡಿಲ್ಲ. ಹಾಲಿ ಗುರುದಾಸ್‌ಪುರ ಕ್ಷೇತ್ರವನ್ನು ನಟ ಸನ್ನಿ ಡಿಯೋಲ್ ಪ್ರತಿನಿಧಿಸುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಭಾರತದ 2 ಬಿಲಿಯನ್ ಡಾಲರ್ ಪರಮಾಣು ಜಲಾಂತರ್ಗಾಮಿ ಒಪ್ಪಂದ ಅಂತಿಮಗೊಳಿಸಿದ ಪುಟಿನ್ ಭೇಟಿ
ಸೆಂಟ್ರಲ್ ಮೆಟ್ರೋ ಮತ್ತು ಹೈಕೋರ್ಟ್ ನಿಲ್ದಾಣಗಳ ನಡುವೆ ನೀಲಿ ಮಾರ್ಗದ ಸುರಂಗದಲ್ಲಿ ಹಠಾತ್ ನಿಂತ ಮೆಟ್ರೋ ರೈಲು