
ಆಗ್ರಾ(ಜೂ. 23) ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ಗಾಂಧಿ ಅವರಿಗೆ ನೋಟಿkಸ್ ಜಾರಿಮಾಡಲಾಗಿದೆ. ಆಗ್ರಾದ ಆಡಳಿತ ಪ್ರಿಯಾಂಕಾ ಅವರಿಗೆ ನೋಟಿಸ್ ನೀಡಿದೆ. ಸುಳ್ಳು ಸುದ್ದಿ ಹಬ್ಬಿಸಿ ಜನರಲ್ಲಿ ಭಯ ಹುಟ್ಟಿಸಿದ್ದಕ್ಕೆ ಕ್ಷಮೆ ಕೇಳಬೇಕು ಎಂದು ನೋಟಿಸ್ ಹೇಳಿದೆ.
ಕೊರೋನಾ ಸೋಂಕಿಗೆ ತುತ್ತಾಗಿ 28 ಜನ ಆಗ್ರಾದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪ್ರಿಯಾಂಕಾ ಟ್ವೀಟ್ ಮಾಡಿದ್ದರು. ಇದು ಸುಳ್ಳಾಗಿದ್ದು ಕೊರೋನಾ ವಾರಿಯರ್ಸ್ ಮೇಲೆ ಕೆಟ್ಟ ಪರಿಣಾಮ ಬೀರಿದೆ ಎಂದು ಆಗ್ರಾ ಆಡಳಿತ ಹೇಳಿದೆ.
ಕೊರೋನಾ ಕಾಡುತ್ತಿರುವ ಬೆಂಗಳೂರು ಹೇಗಿದೆ?
ಆಗ್ರಾದಲ್ಲಿ ಕೊರೋನಾಕ್ಕೆ ಇಷ್ಟೊಂದು ಜನ ಬಲಿಯಾಗಿದ್ದಾರೆ. ಉತ್ತರ ಪ್ರದೇಶ ಸರ್ಕಾರ ನಿರ್ಲಕ್ಷ್ಯ ತಾಳಿದೆ ಎಂದು ವಾದ್ರಾ ಆರೋಪಿಸಿದ್ದರು. ದೇಶದಲ್ಲಿ ಪ್ರತಿದಿನ ಹತ್ತು ಸಾವಿರಕ್ಕೂ ಅಧಿಕ ಕೊರೋನಾ ಸೋಂಕು ದೃಢಪಡುತ್ತಿದೆ.
ಉತ್ತರ ಪ್ರದೇಶ ಸಿಎಂ ಪರಿಹಾರ ನಿಧಿಗೆ ಹೆಚ್ಚುವರಿಯಾಗಿ 406 ಕೋಟಿ ರೂ. ದೇಣೀಗೆ ಬಂದಿದೆ. 192. 19 ಕೋಟಿ ರೂ. ಸಾರ್ವಜನಿಕರಿಂದ ಸಂಗ್ರಹ ಆಗಿದೆ ಎಂದು ಉತ್ತರ ಪ್ರದೇಶ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವಿನಾಶ್ ಅವನೀಶ್ ಮಾಹಿತಿ ನೀಡಿದ್ದಾರೆ.
ಒಂದು ಕಡೆ ಚೀನಾದ ಕಿತಾಪತಿ ಇನ್ನೊಂದು ಕಡೆ ಕೊರೋನಾ ಇವೆರಡು ಸಮಸ್ಯೆಗಳ ವಿರುದ್ಧ ದೇಶ ಹೋರಾಡುತ್ತಿದ್ದು ಇಂಥಹ ಸುದ್ದಿಗಳು ಜನರಲ್ಲಿ ಮತ್ತಷ್ಟು ಭಯ ಉಂಟುಮಾಡಲು ಕಾರಣವಾಗಬಹುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ